Haryana BJP: ಪಲಿತಾಂಶದ ಬಳಿಕವೂ ಹೆಚ್ಚಾಯ್ತು ಬಿಜೆಪಿ ಬಲ, ಸಾವಿತ್ರಿ ಜಿಂದಾಲ್ ಒಪ್ಪಿಗೆ
ನವದೆಹಲಿ, ಅಕ್ಟೋಬರ್ 09: ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆ 2024ಯಲ್ಲಿ ಬಿಜೆಪಿ ಹ್ಯಾಟ್ರಿಕ್ ಭಾರಿಸಿದೆ. ನೆನ್ನೆ ಮಂಗಳವಾರ ಫಲಿತಾಂಶ ಹೊರ ಬಿದ್ದಿದೆ. ರಾಜ್ಯದಲ್ಲಿ ಪಕ್ಷೇತರವಾಗಿ ನಿಂತು ಗೆದ್ದು ಬೀಗಿರುವ 73 ವರ್ಷ ಸಾವಿತ್ರಿ ಜಿಂದಾಲ್ ಅವರು, ಮರಳಿ ಬಿಜೆಪಿಯನ್ನು ಬೆಂಬಲಿಸುವುದಾಗಿ ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಇವರು ಸೇರಿ ಪಕ್ಷೇತರ ನಿಂತು ಗೆದ್ದ ಎಲ್ಲ ಮೂವರು ಕೇಸರಿ ಪಡೆ ಬೆಂಬಲಿಸುವುದು ಖಚಿತವಾಗಿದೆ.
ಹೌದು, ಹರಿಯಾಣದ ಹಿಸಾರ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಭಾರತ ಅತ್ಯಂತ ಶ್ರೀಮಂತ ಮಹಿಳೆಯಾಗಿರುವ ಸಾವಿತ್ರಿ ಜಿಂದಾಲ್ ಅವರನ್ನು ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ತ್ರಿಪುರ ಮಾಜಿ ಮುಖ್ಯಮಂತ್ರಿ ಬಿಪ್ಲಾಬ್ ದೇಬ್ ಅವರು ಭೇಟಿ ಮಾಡಿದ್ದಾರೆ.

ಹರಿಯಾಣದಲ್ಲಿ ಮೂರನೇ ಭಾರಿಗೆ ಬಿಜೆಪಿ ಅಧಿಕಾರ ಗದ್ದುಗೆ ಏರಿದೆ. ಇದರ ಬೆನ್ನಲ್ಲೆ ಬುಧವಾರ ಬೆಳಗ್ಗೆ ಒಟ್ಟು ಮೂರು ಪಕ್ಷೇತರ ಅಭ್ಯರ್ಥಿಗಳ ಪೈಕಿ ಇಬ್ಬರಿಂದ ಬೆಂಬಲ ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದೀಗ ಸಾವಿತ್ರಿ ಜಿಂದಾಲ್ ಅವರನ್ನು ಸಂಪರ್ಕಿಸಿದೆ. ಸಾವಿತ್ರಿ ಜಿಂದಾಲ್ ಅವರು ಬಾಹ್ಯವಾಗಿ ಪಕ್ಷವನ್ನು ಬೆಂಬಲಿಸುವುದಾಗಿ ಭೇಟಿ ಮಾಡಲು ಬಂದಿದ್ದ ಬಿಜೆಪಿ ವರಿಷ್ಠರಿಗೆ ತಿಳಿಸಿದ್ದಾರೆ ಎಂದು ವರದಿ ಆಗಿದೆ.
ಈ ಹಿಂದೆ ಹಿಸಾರ್ ಕ್ಷೇತ್ರದಿಂದಲೇ ಶಾಸಕರಾಗಿ ಸಾವಿತ್ರಿ ಜಿಂದಾಲ್ ಅವರು ಆಯ್ಕೆ ಯಾಗಿದ್ದರು. ಬದಲಾದ ಸನ್ನಿವೇಶದಲ್ಲಿ ಅವರು ಬಿಜೆಪಿ ಸೇರ್ಪಡೆ ಆಗಿದ್ದರು. ಅವರ ಪುತ್ರ ಸಹ ಬಿಜೆಪಿ ಯಲ್ಲಿ ಸಂಸದರಾಗಿದ್ದಾರೆ.
ಈ ಬಾರಿ ಜನರು ಹಾಗೂ ಆಪ್ತರ ಒತ್ತಾಯದ ಮೇರೆಗೆ ಅವರು ಹಿಸಾರ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಇವರನ್ನು ಬಿಟ್ಟು ಡಾ.ಕಮಲ್ ಗುಪ್ತಾ ಅವರಿಗೆ ಟಿಕೆಟ್ ನೀಡಲಾಯಿತು. ಇತ್ತ ಕಾಂಗ್ರೆಸ್ ಗೆ ಹೋಗಲು ಇವರು ತಯಾರಿರಲಿಲ್ಲ. ಹೀಗಾಗಿ ಪಕ್ಷೇತರವಾಗಿ ಕಣಕ್ಕಿಳಿದು ಗೆದ್ದು ತೋರಿಸಿದ್ದಾರೆ.
ಚುನಾವಣೆ ವೇಳೆ ಕಾಂಗ್ರೆಸ್ ಕೆಲವು ನಾಯಕರು ಸಾವಿತ್ರಿ ಜಿಂದಾಲ್ ಅವರು ಬಿಜೆಪಿ ಬಿ ಟೀಮ್ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಾವಿತ್ರಿ ಜಿಂದಾಲ್ ಅವರು ಈ ಆರೋಪ ಸುಳ್ಳು. ನನಗೆ ಕ್ಷೇತ್ರದ ಜನರು, ಜನರ ಅಭಿವೃದ್ಧಿ ಮುಖ್ಯ. ನಾನು ಪರವು ಅಲ್ಲ, ವಿರೋಧವು ಅಲ್ಲ ಎಂದಿದ್ದರು. ಅಲ್ಲದೇ ಬಿಜೆಪಿ ಪಕ್ಷ ಸೇರಲ್ಲ ಎಂದಿದ್ದ ಅವರು ಮಾತಿನಂತೆ ನಡೆದುಕೊಂಡಿದ್ದಾರೆ. ಆದರೆ ಅಭಿವೃದ್ಧಿ, ಕ್ಷೇತ್ರದ ಹಿತಾಸಕ್ತಿಯಿಂದ ಆಡಳಿತ ಪಕ್ಷ ಬಿಜೆಪಿಗೆ ಬಾಹ್ಯ ಬೆಂಬಲ ಕೊಡುವುದಾಗಿ ತಿಳಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications