ಹರಿಯಾಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ನಫೆ ಸಿಂಗ್ ರಾಠಿ ಹತ್ಯೆ
ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕದಳದ ಅಧ್ಯಕ್ಷ ಹಾಗೂ ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಚಂಡೀಗಢದ ಜಜ್ಜರ್ ಜಿಲ್ಲೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಎಸ್ಯುವಿ ಮೇಲೆ ಬಂದೂಕುಧಾರಿಗಳು ದಾಳಿ ಮಾಡಿದ್ದಾರೆ, ನಫೆ ಸಿಂಗ್ ರಾಠಿ ಜೊತೆ ಕಾರಿನಲ್ಲಿದ್ದ ಇನ್ನಿಬ್ಬರು ಕೂಡ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದಾಗ ರಾಠಿ ಮತ್ತು ಅವರ ಸಹಚರರು ವಾಹನದೊಳಗೆ ಇದ್ದರು. ದಾಳಿಯ ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಬ್ರಹ್ಮ ಶಕ್ತಿ ಸಂಜೀವನಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಬರುವಷ್ಟರಲ್ಲಿ ಮಾಜಿ ಶಾಸಕ ನಫೆ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಲಾಯಿತು.

ಐಎನ್ಎಲ್ಡಿಯ ಮಾಧ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಸಿಹಾಗ್, ಶೂಟೌಟ್ನಲ್ಲಿ ನಫೆ ಸಿಂಗ್ ರಾಠಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿದ್ದಾರೆ.
ಪೊಲೀಸರಿಂದ ತನಿಖೆ
ನಫೆ ಸಿಂಗ್ ರಾಠಿ ಅವರು ದಾಳಿ ನಡೆದ ಬಹದ್ದೂರ್ಗಢದಿಂದ ಐಎನ್ಎಲ್ಡಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಆಘಾತಕಾರಿ ದಾಳಿಯ ನಂತರ ರಾಜ್ಯ ಪೊಲೀಸರು ಅಲರ್ಟ್ ಆಗಿದ್ದಾರೆ. ಅಪರಾಧದ ಸ್ಥಳಕ್ಕೆ ಹಲವಾರು ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ದಾಳಿಯ ಬಗ್ಗೆ ಪುರಾವೆಗಳನ್ನು ಸಂಗ್ರಹಿಸುತ್ತಿದೆ. ದಾಳಿಕೋರನ ಆಗಮನದ ಮಾರ್ಗ ಮತ್ತು ನಂತರದ ತಪ್ಪಿಸಿಕೊಳ್ಳುವ ಮಾರ್ಗವನ್ನು ನಿರ್ಧರಿಸಲು ಅಧಿಕಾರಿಗಳು ಸುತ್ತಮುತ್ತಲಿನ ವಿವಿಧ ಸ್ಥಳಗಳಿಂದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.
ದಾಳಿಯ ಹಿಂದೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ನಿಕಟ ಸಹಚರ ಕಲಾ ಜಥೇದಿ ಅವರ ಕೈವಾಡವಿದೆ ಎಂದು ಶಂಕಿಸಲಾಗಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.
ಹರಿಯಾಣ ವಿಧಾನಸಭೆಯಲ್ಲಿ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ನಫೆ ಸಿಂಗ್ ರಾಠಿ ಅವರು ಪ್ರಮುಖ ರಾಜಕೀಯ ಹಿನ್ನೆಲೆ ಹೊಂದಿದ್ದಾರೆ. ಹರಿಯಾಣ ಮಾಜಿ ಶಾಸಕರ ಸಂಘದ ರಾಜ್ಯಾಧ್ಯಕ್ಷರೂ ಆಗಿದ್ದರು. ರಾಠಿ ಒಮ್ಮೆ ರೋಹ್ಟಕ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು ಮತ್ತು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಎರಡು ಬಾರಿ ಬಹದ್ದೂರ್ಗಢ ಮುನ್ಸಿಪಲ್ ಕೌನ್ಸಿಲ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.












Click it and Unblock the Notifications