ಹರ್ಯಾಣ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾಗೆ ಶಿಕ್ಷೆ
ನವದೆಹಲಿ, ಮಾ.5: ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಹರ್ಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಐಎನ್ಎಲ್ಡಿ ಪಕ್ಷದ ಮುಖಂಡ ಓಂ ಪ್ರಕಾಶ್ ಚೌತಾಲಾ ಸೇರಿದಂತೆ 53 ಆರೋಪಿಗಳಿಗೆ 10 ವರ್ಷ ಜೈಲುಶಿಕ್ಷೆ ವಿಧಿಸಿ ದೆಹಲಿ ಹೈಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಓಂ ಪ್ರಕಾಶ್ ಚೌತಾಲಾ ಜತೆಗೆ ಅವರ ಪುತ್ರ ಅಜಯ್ ಚೌತಾಲಾ ಸೇರಿದಂತೆ 53 ಮಂದಿ ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಗುರುವಾರ ಎತ್ತಿಹಿಡಿದಿದೆ. [ಲೈಂಗಿಕ ಕಿರುಕುಳ ಆರೋಪಿಗೆ ಮಾಜಿ ಸಿಎಂ ಬೆಂಬಲ]
ದೆಹಲಿಯ ತಿಹಾರ್ ಜೈಲಿನಲ್ಲಿರುವ ಓಂ ಪ್ರಕಾಶ್ ಚೌತಾಲಾ ಅವರ ಶಾಸಕ ಪುತ್ರ ಅಜಯ್ ಚೌತಾಲಾ ಜತೆಗೆ 53 ಮಂದಿ ಕೆಳಹಂತದ ಅಧಿಕಾರಿಗಳು 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಒಟ್ಟು 62 ಮಂದಿ ಆರೋಪ ಹೊರಿಸಲಾಗಿತ್ತು. ಅವರ ಪೈಕಿ 6 ಮಂದಿ ಅಸುನೀಗಿದ್ದಾರೆ. ಒಬ್ಬರನ್ನು ದೋಷಮುಕ್ತಗೊಳಿಸಲಾಗಿದೆ. ತಪ್ಪಿತಸ್ಥರ ಪಟ್ಟಿಯಲ್ಲಿ 16 ಮಂದಿ ಮಹಿಳೆಯರು ಇದ್ದರು. ಅಂದಿನ ಸಿಎಂ ಚೌತಾಲಾ ಸೇರಿದಂತೆ 53 ಮಂದಿಯ ವಿರುದ್ಧ ಆರೋಪ ಸಾಬೀತಾಗಿತ್ತು.

ನೇಮಕಾತಿ ಹಗರಣ: 1999-2000ದ ಅವಧಿಯಲ್ಲಿ ಹರ್ಯಾಣ ಸರ್ಕಾರ 3000 ಕಿರಿಯ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿತ್ತು. ಈ ನೇಮಕಾತಿಯಲ್ಲಿ ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ ನಡೆಸಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಲಾಗಿತ್ತು. ಅಂದಿನ ಐಎನ್ಎಲ್ಡಿ ನೇತೃತ್ವದ ಸರ್ಕಾರದ ಮುಖ್ಯಸ್ಥರಾಗಿದ್ದ ಚೌತಾಲಾ ಅವರ ಸ್ವಜನ ಪಕ್ಷಪಾತಕ್ಕೆ ಸಾಕಷ್ಟು ಪುರಾವೆ ಸಿಕ್ಕಿತ್ತು. [ಚೌತಾಲ ಮೊಮ್ಮಗ ಅತ್ಯಂತ ಕಿರಿಯ ಸಂಸದ]
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿನೋದ್ಕುಮಾರ್ ಅವರು ಓಂ ಪ್ರಕಾಶ್ ಚೌತಾಲಾ, ಅಜಯ್ ಚೌತಾಲಾ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಸಂಜಯ್ಕುಮಾರ್, ನಿವೃತ್ತ ಅಧಿಕಾರಿ ವಿದ್ಯಾಧರ್, ಷಹರ್ಸಿಂಗ್, ಬದಸ್ಮಿ ಸೇರಿದಂತೆ 53 ಮಂದಿ ಅಧಿಕಾರಿಗಳಿಗೆ ಜೈಲುಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಓಂ ಪ್ರಕಾಶ್ ಚೌತಾಲಾ ಹಾಗೂ ಇತರೆ ಆರೋಪಿಗಳು ದೆಹಲಿ ಹೈಕೋರ್ಟ್ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಅದರೆ, ದೆಹಲಿ ಹೈಕೋರ್ಟ್ ಸಿಬಿಐ ನ್ಯಾಯಾಲಯದ ಆದೇಶವನ್ನು ಗುರುವಾರ ಎತ್ತಿಹಿಡಿದಿದೆ.
ಐಎಎನ್ ಎಸ್
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications