Haryana violence: ನುಹ್ನಲ್ಲಿಂದು ಶೋಭಾ ಯಾತ್ರೆಗೆ ಹಿಂದೂ ಸಂಘಟನೆಗಳ ಕರೆ
ಕೋಮು ಸೂಕ್ಷ್ಮ ಜಿಲ್ಲೆಯಾದ ಹರಿಯಾಣದ ನುಹ್ನಲ್ಲಿ ಇಂದು ಶೋಭಾ ಯಾತ್ರೆಯನ್ನು ನಡೆಸಲು ಹಿಂದೂ ಗುಂಪುಗಳು ಮುಂದಾಗಿವೆ. ರ್ಯಾಲಿಗೆ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರೂ ಯಾತ್ರೆಯನ್ನು ಮುಂದುವರಿಸುವುದಾಗಿ ಹಿಂದೂ ಗುಂಪುಗಳು ಹೇಳಿವೆ.
ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮೆರವಣಿಗೆಯ ಮೇಲೆ ಗುಂಪು ದಾಳಿ ಮಾಡಿದಾಗ ಮುಸ್ಲಿಂ ಬಹುಸಂಖ್ಯಾತ ನುಹ್ನಲ್ಲಿ ನಡೆದ ಘರ್ಷಣೆಯಲ್ಲಿ ಆರು ಜನರು ಸಾವನ್ನಪ್ಪಿದರು. ಮೃತರಲ್ಲಿ ಇಬ್ಬರು ಗೃಹರಕ್ಷಕರು ಹಾಗೂ ಓರ್ವ ಧರ್ಮಗುರು ಸೇರಿದ್ದಾರೆ.

ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಹರಿಯಾಣ ಸರ್ಕಾರವು 1,900 ಹರಿಯಾಣ ಪೊಲೀಸ್ ಸಿಬ್ಬಂದಿ ಮತ್ತು 24 ಕಂಪನಿ ಅರೆಸೇನಾ ಪಡೆಗಳನ್ನು ಅಂತರ-ರಾಜ್ಯ ಮತ್ತು ಅಂತರ-ಜಿಲ್ಲಾ ಗಡಿಗಳಲ್ಲಿ ನಿಯೋಜಿಸುವ ಮೂಲಕ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ.
ಸೆಪ್ಟೆಂಬರ್ 3 ರಿಂದ 7 ರವರೆಗೆ ನುಹ್ನಲ್ಲಿ ಜಿ 20 ಶೆರ್ಪಾ ಗ್ರೂಪ್ ಸಭೆ ನಡೆಯಲಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ರಾಜ್ಯ ಆಡಳಿತವು ಯಾತ್ರೆಗೆ ಅನುಮತಿ ನಿರಾಕರಿಸಿದೆ.
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೊರಗಿನವರು ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಮತ್ತು ಬ್ಯಾಂಕ್ಗಳನ್ನು ಮುಚ್ಚಲಾಗಿದೆ. ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಜುಲೈನಿಂದ ಆರಂಭಗೊಂಡ ಕೋಮು ಘರ್ಷಣೆ ಮುಂದುವರೆಯದಂತೆ ಜಿಲ್ಲೆಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆಯನ್ನು ಸಹ ನಿಷೇಧಿಸಲಾಗಿದೆ.

ಹೀಗಾಗಿ ಗುರುಗ್ರಾಮ್ನ ಸೋಹ್ನಾ ಟೋಲ್ನಲ್ಲಿ ಪೊಲೀಸ್ ಸಿಬ್ಬಂದಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಆಡಳಿತದ ಭದ್ರತಾ ವ್ಯವಸ್ಥೆಗಳ ಭಾಗವಾಗಿ ಹರಿಯಾಣ ಪೊಲೀಸರು ಟೋಲ್ ಮೂಲಕ ಹಾದುಹೋಗುವ ಪ್ರತಿಯೊಂದು ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಾರೆ.
ಜುಲೈನಲ್ಲಿ ಕೋಮುಗಲಭೆಯಿಂದ ಅಡ್ಡಿಪಡಿಸಿದ ನಂತರ ಯಾತ್ರೆಯನ್ನು ಇಂದು ಪುನರಾರಂಭಿಸಲು 'ಸರ್ವ ರಾಷ್ಟ್ರೀಯ ಹಿಂದೂ ಮಹಾಪಂಚಾಯತ್' ಆಗಸ್ಟ್ 13 ರಂದು ಕರೆ ನೀಡಿತು. ಆದರೆ ಇದಕ್ಕೆ ಅಧಿಕಾರಿಗಳು ಅನುಮತಿ ನೀಡಿಲ್ಲ.
ಜೊತೆಗೆ ಅಧಿಕಾರಿಗಳು ಅನುಮತಿ ನಿರಾಕರಿಸಿರುವ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಬದಲು ಸಮೀಪದ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಜನರಿಗೆ ಸಲಹೆ ನೀಡಿದ್ದಾರೆ.
ಹಿಂದೂ ಕ್ಯಾಲೆಂಡರ್ ಪ್ರಕಾರ, ಆಗಸ್ಟ್ 28 ಪವಿತ್ರ ಶ್ರಾವಣ ಮಾಸದ ಕೊನೆಯ ಸೋಮವಾರ. 'ಯಾತ್ರೆ'ಗೆ ಬದಲಾಗಿ ಜನರು ತಮ್ಮ ಪ್ರದೇಶಗಳಲ್ಲಿನ ದೇವಸ್ಥಾನಗಳಿಗೆ 'ಜಲಾಭಿಷೇಕ'ಕ್ಕೆ ಭೇಟಿ ನೀಡಬಹುದು ಎಂದು ಮುಖ್ಯಮಂತ್ರಿ ಖಟ್ಟರ್ ಹೇಳಿದರು. ಅದಾಗ್ಯೂ ಇಂದು ಯಾತ್ರೆ ನಡೆಸುವುದಾಗಿ ಹಿಂದೂ ಗುಂಪುಗಳು ಹೇಳಿಕೊಂಡಿವೆ.
ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 393 ಜನರನ್ನು ಬಂಧಿಸಲಾಗಿದೆ. 118 ಜನರನ್ನು ತಡೆಗಟ್ಟುವ ಪ್ರಯತ್ನಕ್ಕೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications