Get Updates
Get notified of breaking news, exclusive insights, and must-see stories!

ಬಹುಮತ ಸಾಬೀತು ಪಡಿಸಲು ಅಧಿವೇಶ ಕರೆಯಲು ರಾಜ್ಯಪಾಲರಿಗೆ ಮನವಿ ಮಾಡಿದ ಹರಿಯಾಣ ನೂತನ ಸಿಎಂ

48 ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇವೆ ಮತ್ತು ಬಿಜೆಪಿ ಸರ್ಕಾರವು ಸದನದಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಲು ಬುಧವಾರ ವಿಧಾನಸಭೆ ಅಧಿವೇಶನ ಕರೆಯುವಂತೆ ಕೇಳಿಕೊಂಡಿದ್ದೇವೆ ಎಂದು ಹರಿಯಾಣದ ನೂತನ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದರು.

ಮನೋಹರ್ ಲಾಲ್ ಖಟ್ಟರ್ ಅವರು ತಮ್ಮ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ದಿಢೀರ್ ರಾಜೀನಾಮೆ ನೀಡಿದ ನಂತರ ನಯಾಬ್ ಸಿಂಗ್ ಸೈನಿ ಮಂಗಳವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

Haryana s New Chief Minister Urges Governor to Convene Session for Floor Test

"ನಾವು ಅಧಿವೇಶನದಲ್ಲಿ ಬಹುಮತವನ್ನು ಸಾಬೀತುಪಡಿಸಲು ಬುಧವಾರ ವಿಧಾನಸಭೆ ಅಧಿವೇಶನವನ್ನು ಕರೆಯುವಂತೆ ರಾಜ್ಯಪಾಲರಿಗೆ ಒತ್ತಾಯ ಮಾಡಿದ್ದೇವೆ" ಎಂದು ಸೈನಿ ಅವರು ಅಧಿಕಾರ ವಹಿಸಿಕೊಂಡ ನಂತರ ಅವರ ಸಂಪುಟ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

48 ಶಾಸಕರ ಬೆಂಬಲ ಎಂದ ಸಿಎಂ

ಸರ್ಕಾರದ ಬೆಂಬಲಕ್ಕೆ ಎಷ್ಟು ಶಾಸಕರು ಇದ್ದಾರೆ ಎಂಬ ಪ್ರಶ್ನೆಗೆ ಹರಿಯಾಣ ಬಿಜೆಪಿ ಮುಖ್ಯಸ್ಥರೂ ಆಗಿರುವ ಸೈನಿ, ನಾವು 48 ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದೇವೆ ಎಂದು ಹೇಳಿದರು.

90 ಸದಸ್ಯರ ರಾಜ್ಯ ವಿಧಾನಸಭೆಯಲ್ಲಿ, ಬಿಜೆಪಿ 41 ಸದಸ್ಯರನ್ನು ಹೊಂದಿದೆ ಮತ್ತು ಇದು ಏಳು ಪಕ್ಷೇತರ ಶಾಸಕರಲ್ಲಿ ಆರು ಮತ್ತು ಹರಿಯಾಣದ ಲೋಖಿತ್ ಪಕ್ಷದ ಏಕೈಕ ಶಾಸಕ ಗೋಪಾಲ್ ಕಾಂಡ ಅವರ ಬೆಂಬಲವಿದೆ ಎಂದು ಹೇಳಿದೆ.

ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದ್ದರೆ ಭಾರತೀಯ ರಾಷ್ಟ್ರೀಯ ಲೋಕದಳ ಒಬ್ಬರನ್ನು ಹೊಂದಿದೆ. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯಲ್ಲಿ ಭಿನ್ನಾಭಿಪ್ರಾಯಗಳ ನಡುವೆ, ಜೆಜೆಪಿ ಜೊತೆಗಿನ ಬಿಜೆಪಿಯ ಮೈತ್ರಿಯು ಮುರಿದು ಬಿದ್ದಿದೆ.

ಸಚಿವ ಸಂಪುಟ ಸಭೆಯಲ್ಲಿ ನಿರ್ಗಮಿತ ಖಟ್ಟರ್ ಕ್ಯಾಬಿನೆಟ್ ಮಾಡಿದ ಕಾರ್ಯಗಳಿಗೆ ಧನ್ಯವಾದ ಸಲ್ಲಿಸುವ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಸೈನಿ ಹೇಳಿದರು.

"ಕಳೆದ ಒಂಬತ್ತೂವರೆ ವರ್ಷಗಳಲ್ಲಿ, ಖಟ್ಟರ್ ಹರಿಯಾಣಕ್ಕೆ ಹೊಸ ನಿರ್ದೇಶನ ನೀಡಿದರು, ಉತ್ತಮ ಆಡಳಿತದ ಉದಾಹರಣೆಯನ್ನು ಪ್ರಸ್ತುತಪಡಿಸಿದರು. 'ಹರಿಯಾಣ ಏಕ್ ಹರ್ಯಾನ್ವಿ ಏಕ್' ಕೇವಲ ಘೋಷಣೆಯಾಗಿರಲಿಲ್ಲ, ಆದರೆ ಸಮಾನವಾದ ಅಭಿವೃದ್ಧಿಯನ್ನು ಕೈಗೊಳ್ಳಲಾಯಿತು. ಅಂತ್ಯೋದಯದ ಉತ್ಸಾಹದಲ್ಲಿ ತಾರತಮ್ಯವಿಲ್ಲದೆ ಕೆಲಸ ಮಾಡಿದೆ," ಎಂದು ಸೈನಿ ಹೇಳಿದರು.

ಶಿಕ್ಷಕರ ಆನ್‌ಲೈನ್ ವರ್ಗಾವಣೆ ನೀತಿ ಅಥವಾ ಅರ್ಹತೆಯ ಆಧಾರದ ಮೇಲೆ ಉದ್ಯೋಗ ನೀಡುವ ಹಲವು ಕ್ಷೇತ್ರಗಳಲ್ಲಿ ಖಟ್ಟರ್ ಸರ್ಕಾರ ಇತಿಹಾಸವನ್ನು ಬರೆದಿದೆ ಎಂದು ಅವರು ಹೇಳಿದರು.

ಪಕ್ಷವು ಹೊಸ ಜವಾಬ್ದಾರಿಯನ್ನು ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಿಎಂ ಸೈನಿ ಧನ್ಯವಾದಗಳನ್ನು ಸಲ್ಲಿಸಿದರು. "ಹೊಸ ಜವಾಬ್ದಾರಿಯನ್ನು ನನ್ನ ಮೇಲೆ ವಹಿಸಲಾಗಿದೆ. ನಾವು ಸಂಪೂರ್ಣ ಸಮರ್ಪಣೆಯೊಂದಿಗೆ ಕೆಲಸ ಮಾಡುತ್ತೇವೆ ಮತ್ತು ಜನರ ನಿರೀಕ್ಷೆಗಳನ್ನು ಪೂರೈಸುತ್ತೇವೆ" ಎಂದು ಅವರು ಹೇಳಿದರು.

ಸಚಿವರು ಕೂಡ ಪ್ರಮಾಣವಚನ

ಬಿಜೆಪಿಯ ನಾಲ್ವರು ಮತ್ತು ಒಬ್ಬ ಸ್ವತಂತ್ರ ಐವರು ಶಾಸಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ, ಮಾಜಿ ಗೃಹ ಸಚಿವ ಮತ್ತು ಅಂಬಾಲಾ ಕ್ಯಾಂಟ್‌ನಿಂದ ಆರು ಬಾರಿ ಶಾಸಕರಾಗಿರುವ ಅನಿಲ್ ವಿಜ್ ಅವರು ಹೊಸ ಸಂಪುಟದಲ್ಲಿ ಸ್ಥಾನ ಪಡೆದಿಲ್ಲ.

ಇಲ್ಲಿನ ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 54 ವರ್ಷದ ಒಬಿಸಿ ನಾಯಕ ಸೈನಿ ಅವರಿಗೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಮಾಣ ವಚನ ಬೋಧಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+