ನಿಜಕ್ಕೂ ಪಾಕ್ ಮಸೂದ್ನನ್ನು ವಶಕ್ಕೆ ಪಡೆದಿದೆಯೇ?
ಬೆಂಗಳೂರು, ಜನವರಿ 14 : ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಸರ್ಕಾರ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ನನ್ನು ವಶಕ್ಕೆ ಪಡೆದಿದೆ. ಪಾಕಿಸ್ತಾನದ ಈ ಹೇಳಿಕೆಯನ್ನು ಭಾರತ ಪರಿಶೀಲಿಸುತ್ತಿದ್ದು, ಶಾಂತಿ ಮಾತುಕತೆ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ.
ಜನವರಿ 15ರಂದು ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಸಭೆ ಆಯೋಜನೆಗೊಂಡಿದೆ. ಆದರೆ, ಈ ಸಭೆ ನಡೆಯುವುದೇ? ಇಲ್ಲವೇ ಎಂಬುದು ಇನ್ನೂ ಖಚಿತಗೊಂಡಿಲ್ಲ. ಪ್ಯಾರಿಸ್ಗೆ ತೆರಳಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್ ಇಂದು ದೆಹಲಿಗೆ ವಾಪಸ್ ಆಗಲಿದ್ದು, ನಂತರ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. [ಮೌಲಾನಾ ಮಸೂದ್ ಸೆರೆ]

ಮಸೂದ್ ಅಜರ್ನನ್ನು ವಶಕ್ಕೆ ಪಡೆದು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಕ್ ಬುಧವಾರ ಹೇಳಿದೆ. ಶಾಂತಿ ಮಾತುಕತೆಯನ್ನು ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಮೊದಲು ಈ ಕುರಿತು ಖಚಿತಪಡಿಸಿಕೊಳ್ಳಲು ಭಾರತ ನಿರ್ಧರಿಸಿದೆ. ವಶಕ್ಕೆ ಪಡೆದಿರುವ ಬಗ್ಗೆ ಸಾಕ್ಷಿಗಳನ್ನು ಭಾರತ ಕೇಳಲಿದೆ. [ಪಠಾಣ್ ಕೋಟ್ ಉಗ್ರರ ದಾಳಿ : ಟೈಮ್ ಲೈನ್]
ಮೋದಿ, ಸುಷ್ಮಾ ಸಭೆ : ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಬುಧವಾರ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಅಜಿತ್ ಡೋವಲ್ ಅವರು ಭಾರತಕ್ಕೆ ವಾಪಸ್ ಆದ ಬಳಿಕ ಶಾಂತಿ ಮಾತುಕತೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಿದ್ದಾರೆ. [ಪಠಾಣ್ ಕೋಟ್ ವಾಯುನೆಲೆಯ ವಿಶೇಷತೆಗಳೇನು?]
26/11ರ ದಾಳಿಯ ರೂವಾರಿ ಹಫೀಜ್ನನ್ನು ಪಾಕ್ ಮೊದಲು ಬಂಧಿಸಿರುವುದಾಗಿ ಹೇಳಿತ್ತು. ನಂತರ ಆತನನ್ನು ಬಿಡುಗಡೆ ಮಾಡಿತ್ತು. ಆದ್ದರಿಂದ, ಮಸೂದ್ ಬಂಧನದ ಕುರಿತು ಖಚಿತಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಪಾಕ್ ಹೇಳುವಂತೆ ಮಸೂದ್ನನ್ನು ವಶಕ್ಕೆ ಪಡೆದು, ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಪಠಾಣ್ ಕೋಟ್ ದಾಳಿಯ ಸಂಚು ರೂಪಿಸಿದವರ ವಿರುದ್ಧ ಕೈಗೊಳ್ಳುವ ಕ್ರಮಗಳು ತೃಪ್ತಿದಾಯಕವಾಗಿದ್ದರೆ ಮಾತ್ರ ವಿದೇಶಾಂಗ ಕಾರ್ಯದರ್ಶಿಗಳ ಸಭೆಯನ್ನು ನಡೆಸುವ ಕುರಿತು ತೀರ್ಮಾನಿಸುತ್ತೇವೆ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications