ಚರ್ಚೆಗೆ ಗ್ರಾಸವಾಗಿರುವ ರಾಹುಲ್ ಕೊರಳಲ್ಲಿನ ರುದ್ರಾಕ್ಷಿ ಹಾರ
Recommended Video

ಅಹ್ಮದಾಬಾದ್, ಡಿಸೆಂಬರ್ 12 : ರಾಹುಲ್ ಗಾಂಧಿಯವರು ಮಂಗಳವಾರ ಶ್ವೇತವಸ್ತ್ರಧಾರಿಯಾಗಿ ಅಹ್ಮದಾಬಾದ್ ನಲ್ಲಿರುವ ಜಗನ್ನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿನ ಕೋಣೆಯೊಳಗೆ ಅರ್ಚಕ ದಿಲೀಪ್ ದಾಸ್ ಅವರೊಂದಿಗೆ, ಮಾಧ್ಯಮದ ಕಣ್ಣು ತಪ್ಪಿಸಿ ಹೋಗಿದ್ದಾದರೂ ಏಕೆ?
ಡಿಸೆಂಬರ್ 16ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ, ಗುಜರಾತ್ ಎರಡನೇ ಹಂತದ ಮತದಾನಕ್ಕೂ ಮುನ್ನ ಭರ್ಜರಿ ಪ್ರಚಾರ ನಡೆಸಿರುವ ರಾಹುಲ್ ಗಾಂಧಿ ಅವರನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಅವರು ಜಗನ್ನಾಥ ದೇವಾಲಯದ ಕೋಣೆಯೊಳಗೆ ಸೀಕ್ರೆಟ್ ಆಗಿ ಹೋಗಿದ್ದೇಕೆ ಎಂಬುದು ಗೊತ್ತಾಗುತ್ತದೆ.
ಅವರ ಕತ್ತಿನಲ್ಲಿ ರುದ್ರಾಕ್ಷಿ ಮಾಲೆ ಕಾಣಿಸಿಕೊಂಡಿದೆ. ತಮ್ಮನ್ನು ಸುತ್ತಿರುವ ಕಷ್ಟಕೋಟಲೆಗಳಿಂದ ರಕ್ಷಣೆ ಪಡೆಯಲು ಅವರು ರುದ್ರಾಕ್ಷಿ ಮಾಲೆಯ ಮೊರೆ ಹೋದರಾ ಎಂಬ ಅನುಮಾನ ಹಲವರನ್ನು ಕಾಡಲು ಆರಂಭಿಸಿದೆ. ದೇವಸ್ಥಾನಕ್ಕೆ ಹೋಗಿ ಬಂದ ನಂತರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಅವರ ಕೊರಳಲ್ಲಿ ರುದ್ರಾಕ್ಷಿ ಮಾಲೆ!
ತಾವು ಶಿವನ ಭಕ್ತ ಎಂದು ಹೇಳಿರುವ ರಾಹುಲ್ ಗಾಂಧಿಯವರು ರುದ್ರಾಕ್ಷಿ ಮಾಲೆ ಧರಿಸುವುದರಲ್ಲಿ ತಪ್ಪೇನೂ ಇಲ್ಲ, ಅಚ್ಚರಿಯೂ ಇಲ್ಲ. ಇದು ಮೂಢನಂಬಿಕೆಯ ಸಂಗತಿಯೂ ಅಲ್ಲ. ಹಿಂದೆ ಅವರ ತಂದೆಯವರಾದ ರಾಜೀವ್ ಗಾಂಧಿ ಮತ್ತು ಅಜ್ಜಿಯವರಾದ ಇಂದಿರಾ ಗಾಂಧಿ ಕೂಡ ಕೊರಳಲ್ಲಿ ರುದ್ರಾಕ್ಷಿಯನ್ನು ಧರಿಸಿದ್ದರ ಕುರುಹುಗಳಿವೆ.
ಇಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡುವವರು ರುದ್ರಾಕ್ಷಿ ಮಾಲೆಯನ್ನು ಧರಿಸುವುದು ರೂಢಿ. ಗುಜರಾತಿನಲ್ಲಿ ದೇವಸ್ಥಾನ ತಿರುಗುತ್ತಿರುವುದಕ್ಕಾಗಿ ಬಿಜೆಪಿಯಿಂದ ಸಾಕಷ್ಟು ಟೀಕೆಗೆ ಗುರಿಯಾಗಿರುವ ರಾಹುಲ್ ಗಾಂಧಿಯವರು ತಮ್ಮನ್ನು ರಕ್ಷಿಸಿಕೊಳ್ಳುವುದಕ್ಕೋಸ್ಕರ ಈ ರುದ್ರಾಕ್ಷಿಯನ್ನು ಧರಿಸಿದರಾ?

ಹಿಂದೂ ಆಗಿದ್ದರೂ ರಾಮಮಂದಿರಕ್ಕೆ ವಿರೋಧವೇಕೆ?
ಇಷ್ಟೊಂದು ಹಿಂದೂ ದೇವಾಲಯಗಳನ್ನು ರಾಹುಲ್ ಸುತ್ತುತ್ತಿದ್ದರೂ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿರೋಧ ವ್ಯಕ್ತಪಡಿಸುತ್ತಿರುವುದೇಕೆ? ಎಂದು ಪ್ರಶ್ನಿಸಿರುವ ಬಿಜೆಪಿ ನಾಯಕರು, ಗುಜರಾತಿನಲ್ಲಿ ಹಿಂದೂ ಮತಗಳನ್ನು ಕಬಳಿಸುವ ಹುನ್ನಾರದಿಂದ ಮಂದಿರಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ದೇಗುಲ ಭೇಟಿಯ ಬಗ್ಗೆ ಯೋಗಿ ತಮಾಷೆ
ರಾಹುಲ್ ಅವರು ದೇವಾಲಯಗಳಿಗೆ ಭೇಟಿ ನೀಡುತ್ತಿರುವುದರ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಒಂದು ತಮಾಷೆಯ ಮಾತನ್ನಾಡಿದ್ದರು. ಅದೇನೆಂದರೆ, ಗುಜರಾತ್ ವಿಧಾನಸಭೆ ಚುನಾವಣೆ ಡಾ. ಮನಮೋಹನ ಸಿಂಗ್ ಅವರಿಗೆ ಮಾತಾಡುವುದನ್ನು ಕಲಿಸಿದೆ ಮತ್ತು ರಾಹುಲ್ ಅವರಿಗೆ ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ಕಲಿಸಿದೆ.

ಸೋಮನಾಥ ದೇವಸ್ಥಾನ ಭೇಟಿಯ ವಿವಾದ
ನವೆಂಬರ್ 29ರಂದು ಸೋಮನಾಥ ದೇಗುಲಕ್ಕೆ ರಾಹುಲ್ ಅವರು ಭೇಟಿ ನೀಡಿದ ನಂತರ, ಅವರ ಭೇಟಿ ವಿವಾದಕ್ಕೆ ಕಾರಣವಾಗಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದವರ ಹೆಸರಿರುವ ರಿಜಿಸ್ಟರ್ ನಲ್ಲಿ ರಾಹುಲ್ ಹೆಸರನ್ನು ಹಿಂದೂಯೇತರ ಪಟ್ಟಿಯಲ್ಲಿ ನಮೂದಿಸಲಾಗಿತ್ತು. ಇದನ್ನು ಅಹ್ಮದ್ ಪಟೇಲ್ ಅವರು ಅಕಸ್ಮಾತಾಗಿ ಮಾಡಿದ್ದರು. ಆದರೂ ರಾಹುಲ್ ನಿಲುವಿನ ಬಗ್ಗೆ ಪ್ರಶ್ನೆಗಳೇಳುವಂತೆ ಮಾಡಿತ್ತು.

ರಾಹುಲ್ ಅವರು ಜನಿವಾರ ಧರಿಸುತ್ತಾರೆ
ಇದು ನಕಲಿ ದಾಖಲೆ ಪುಸ್ತಕವಾಗಿದ್ದು, ಅಸಲಿ ದಾಖಲೆ ಪುಸ್ತಕದಲ್ಲಿ ಅವರು ಹಿಂದೂ ಎಂದೇ ನಮೂದಿಸಲಾಗಿದೆ. ಸುಳ್ಳು ಫೋಟೋವನ್ನು ಬೇಕಂತಲೇ ಸೋಷಿಯಲ್ ಮೀಡಿಯಾದಲ್ಲಿ ಹಾಕಲಾಗುತ್ತಿದೆ. ರಾಹುಲ್ ಅವರು ಹಿಂದೂ ಧರ್ಮದವರೇ ಆಗಿದ್ದು, ಅವರು ಜನಿವಾರ ಧರಿಸುತ್ತಾರೆ ಎಂದು ಸಮಜಾಯಿಷಿ ಕೊಡುವಲ್ಲಿ ಕಾಂಗ್ರೆಸ್ ನಾಯಕರಿಗೆ ಸಾಕುಬೇಕಾಗಿತ್ತು.

ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ
ಈ ಧರ್ಮದ ವಿಚಾರಗಳು ಏನೇ ಇರಲಿ, ರಾಹುಲ್ ಅವರಂತೂ, 22 ವರ್ಷಗಳಿಂದ ಗುಜರಾತಿನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಗೆ ಈಬಾರಿ ಭಾರೀ ಪೈಪೋಟಿ ನೀಡುತ್ತಿದ್ದಾರೆ. 89 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಮುಗಿದಿದ್ದು, 182 ವಿಧಾನಸಭೆ ಕ್ಷೇತ್ರಗಳಿರುವ ಗುಜರಾತಿನಲ್ಲಿ ಉಳಿದ 93 ಕ್ಷೇತ್ರಗಳಿಗೆ ಡಿಸೆಂಬರ್ 14ರಂದು ಮತದಾನ ನಡೆಯಲಿದೆ. ಡಿಸೆಂಬರ್ 18ರಂದು ಯಾವ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬುದನ್ನು ಮತದಾರ ತಿಳಿಯಪಡಿಸಲಿದ್ದಾನೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications