ದ್ವೇಷ ಭಾಷಣ ಕೇಸ್: ಸಮಾಜವಾದಿ ಶಾಸಕ ಅಜಂ ಖಾನ್ ಅನರ್ಹ
ಲಕ್ನೋ, ಅಕ್ಟೋಬರ್ 28: ಉತ್ತರ ಪ್ರದೇಶದಲ್ಲಿ ದ್ವೇಷದ ಭಾಷಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ವಿಧಾನಸಭಾ ಸ್ಥಾನವನ್ನು ಉತ್ತರ ಪ್ರದೇಶ ಸ್ಪೀಕರ್ ಶುಕ್ರವಾರ ಅನರ್ಹಗೊಳಿಸಿದ್ದಾರೆ. ಇದರಿಂದ ರಾಂಪುರ ಕ್ಷೇತ್ರದ ಸ್ಥಾನವು ತೆರವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ 2019ರ ದ್ವೇಷ ಭಾಷಣಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದಾಗ ಗುರುವಾರ ಸ್ವಯಂಚಾಲಿತವಾಗಿ ಅನರ್ಹಗೊಳಿಸಲಾಯಿತು. ಅವರ ಸ್ಥಾನ ಖಾಲಿಯಾಗಿದೆ ಎಂದು ಘೋಷಿಸುವ ಮೂಲಕ ಅನರ್ಹತೆಯನ್ನು ಔಪಚಾರಿಕಗೊಳಿಸಲಾಯಿತು.
2013ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ 74 ವರ್ಷದ ನಾಯಕ ತನ್ನ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಏಕೆಂದರೆ 2013 ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕ್ರಿಮಿನಲ್ ಮೊಕದ್ದಮೆಯಲ್ಲಿ ಎಂಎಲ್ಎ, ಎಂಎಲ್ಸಿ ಅಥವಾ ಎಂಪಿ ತಪ್ಪಿತಸ್ಥರಾಗಿದ್ದರೆ ಮತ್ತು ಕನಿಷ್ಠ ಎರಡು ವರ್ಷಗಳ ಕಾಲ ಜೈಲುವಾಸ ಅನುಭವಿಸಿದರೆ ಅವರು ವಿಧಾನಸಭೆ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ.

2022ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು: ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ರಾಂಪುರದಿಂದ ಅಜಂ ಖಾನ್ ಗೆದ್ದರು, ಆದರೆ ಮಾರ್ಚ್ 2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದ ನಂತರ ಅವರು ಈ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಎಸ್ಪಿ ನಾಯಕ ಅಜಂ ಖಾನ್, ಜೈಲಿನಲ್ಲಿದ್ದಾಗ 2022 ರ ವಿಧಾನಸಭಾ ಚುನಾವಣೆಯಲ್ಲಿ ರಾಂಪುರದಿಂದ ಗೆದ್ದಿದ್ದರು. ಅಜಂ ಖಾನ್ ದ್ವೇಷ ಭಾಷಣದ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಿದ ನಂತರ ಜಾಮೀನು ನೀಡಲಾಯಿತು. ಈ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಒಂದು ವಾರದ ಸಮಯವನ್ನು ನೀಡಲಾಯಿತು.
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದಲ್ಲಿ ಅಜಂ ಖಾನ್ ದ್ವಿತೀಯ ದರ್ಜೆ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ರಾಂಪುರ ಮತ್ತು ಪಶ್ಚಿಮ ಉತ್ತರ ಪ್ರದೇಶದ ಇತರ ಭಾಗಗಳಲ್ಲಿ ಬಲವಾದ ಅನುಯಾಯಿಗಳನ್ನು ಹೊಂದಿದ್ದಾರೆ. 2017ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಮಾಜವಾದಿ ನಾಯಕ ಅಜಂ ಖಾನ್ ವಿರುದ್ಧ ಭ್ರಷ್ಟಾಚಾರ ಮತ್ತು ಕಳ್ಳತನದಿಂದ ಹಿಡಿದು ಭೂಕಬಳಿಕೆಯವರೆಗೆ ಒಟ್ಟು 87 ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ದ್ವೇಷದ ಭಾಷಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿತ್ತು. ಇದಾಗಿ ಒಂದು ವಾರದಲ್ಲಿ ಅಜಂ ಖಾನ್ ರಿಗೆ ಶಿಕ್ಷೆ ವಿಧಿಸಲಾಯಿತು. ಯಾವುದೇ ಕ್ರಮ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡಿದರೆ ನ್ಯಾಯಾಲಯದ ನಿಂದನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications