ನಾನು ನಿರಪರಾಧಿ ಎಂದು ಸಾಬೀತುಪಡಿಸಲು ಸಾಕ್ಷ್ಯಾಧಾರವಿದೆ: ಮಲ್ಯ
ನಾನು ನಿರಪರಾಧಿ. ನನ್ನ ಮೇಲಿನ ಆರೋಪಗಳಲ್ಲಿ ಹುರುಳಿಲ್ಲ. ನಾನು ನಿರಪರಾಧಿ ಎಂದು ಸಾಬೀತು ಮಾಡಲು ನನ್ನ ಬಳಿ ಸಾಕ್ಷ್ಯಾಧಾರಗಳಿವೆ. ಮದ್ಯದ ದೊರೆ ವಿಜಯ್ ಮಲ್ಯ ಹೇಳಿಕೆ. ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾದಾಗ ಹೇಳಿಕೆ
ಲಂಡನ್, ಜೂನ್ 13: ''ನನ್ನ ಮೇಲಿನ ಆರೋಪಗಳೆಲ್ಲವೂ ನಿರಾಧಾರ. ನಾನು ನಿರಪರಾಧಿ ಎಂದು ಸಾಬೀತುಪಡಿಸಲು ನನ್ನಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ. ಹಾಗಾಗಿ, ನಾನು ಈ ಪ್ರಕರಣದಲ್ಲಿ ಗೆಲ್ಲುವೆನೆಂಬ ವಿಶ್ವಾಸವಿದೆ'' ಎಂದು ಭಾರತೀಯ ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ.
ಉದ್ದೇಶಪೂರ್ವಕ ಸುಸ್ತಿದಾರನೆಂಬ ಹಣೆಪಟ್ಟಿ ಹಾಕಿಕೊಂಡಿರುವ ವಿಜಯ್ ಮಲ್ಯ ಅವರನ್ನು ವಿಚಾರಣೆಗಾಗಿ ತನಗೆ ಒಪ್ಪಿಸಬೇಕೆಂದು ಭಾರತ ಸರ್ಕಾರ ಸಲ್ಲಿಸಿರುವ ಮನವಿಯ ವಿಚಾರಣೆಯು ಲಂಡನ್ ನಲ್ಲಿರುವ ವೆಸ್ಟ್ ಮಿನಿಸ್ಟರ್ ನ್ಯಾಯಾಲಯದಲ್ಲಿ ಮಂಗಳವಾರ ಆರಂಭವಾಯಿತು.
ಈ ಮೊದಲ ವಿಚಾರಣೆಗೆ ಹಾಜರಾಗಿದ್ದ ಮಲ್ಯ, ನ್ಯಾಯಾಲಯ ಪ್ರವೇಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು. ಆಗ, ''ನಾನು ನಿರಪರಾಧಿ. ನನ್ನ ಮೇಲಿನ ಆರೋಪಗಳೆಲ್ಲವೂ ಸುಳ್ಳು. ನಾನು ನಿರಪರಾಧಿ ಎಂಬುದನ್ನು ಸಾಬೀತುಪಡಿಸಲು ನನ್ನಲ್ಲಿ ಸಾಕ್ಷ್ಯಾಧಾರಗಳಿವೆ'' ಎಂದು ಹೇಳಿದರು.

ನ್ಯಾಯಾಲಯದ ಕಲಾಪ ಆರಂಭವಾದ ನಂತರ, ಕೆಲ ಗಂಟೆಗಳ ಕಾಲ ವಾದ, ವಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ಮಲ್ಯ ಅವರಿಗೆ ಈ ಪ್ರಕರಣದಲ್ಲಿ ನೀಡಲಾಗಿರುವ ಜಾಮೀನನ್ನು ಡಿಸೆಂಬರ್ 4ರವರೆಗೆ ವಿಸ್ತರಿಸಿ ಆದೇಶ ನೀಡಿದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೇ ವರ್ಷ ಏಪ್ರಿಲ್ 18ರಂದು ಲಂಡನ್ ನಲ್ಲಿ ಅವರ ಬಂಧನವಾಗಿತ್ತು. ಅದಾಗಿ, ಮೂರು ಗಂಟೆಯೊಳಗೆ ಅವರಿಗೆ ಜಾಮೀನು ಸಿಕ್ಕಿತ್ತು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications