ಕಾಳಧನಿಕರ ಬಗ್ಗೆ ಮಾಹಿತಿ ಇದ್ದರೆ ಈ ಐಡಿಗೆ ಇಮೇಲ್ ಮಾಡಿ!
ಕಾಳಧನಿಕರನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ಆದಾಯ ತೆರಿಗೆ ಇಲಾಖೆ ಮತ್ತೊಂದು ಹೆಜ್ಜೆ ಇಟ್ಟಿದೆ. ಸ್ವಯಂ ಘೋಷಣೆ ಅವಧಿ ವಿಸ್ತರಿಸಲಾಗಿದೆ. ಜತೆಗೆ ಕಾಳಧನಿಕರ ಮಾಹಿತಿ ನೀಡಲು ಹೊಸ ಇ ಮೇಲ್ ವಿಳಾಸ ನೀಡಲಾಗಿದೆ
ನವದೆಹಲಿ, ಡಿಸೆಂಬರ್ 17: ಕಾಳಧನಿಕರನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗೂ ಆದಾಯ ತೆರಿಗೆ ಇಲಾಖೆ ಮತ್ತೊಂದು ಹೆಜ್ಜೆ ಇಟ್ಟಿದೆ. ಸ್ವಯಂ ಘೋಷಣೆ ಅವಧಿ ವಿಸ್ತರಿಸಲಾಗಿದೆ. ಜತೆಗೆ ಕಾಳಧನಿಕರ ಮಾಹಿತಿ ನೀಡಲು ಹೊಸ ಇ ಮೇಲ್ ವಿಳಾಸ ನೀಡಲಾಗಿದೆ.
ಕಪ್ಪುಹಣ ಹೊಂದಿದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಲು ಕೇಂದ್ರ ಸರ್ಕಾರ ಹೊಸ ಇ ಮೇಲ್ ವಿಳಾಸ [email protected] ಆರಂಭ ಮಾಡಲಾಗಿದೆ ಎಂದು ಕಂದಾಯ ಕಾರ್ಯದರ್ಶಿ ಹಸ್ಮುಖ್ ಆಧ್ಯ ಅವರು ಹೇಳಿದ್ದಾರೆ.
ಕಾಳಧನಿಕರ ಬಗ್ಗೆ ಮಾಹಿತಿ ನೀಡಿದವರ ಹೆಸರು ಹಾಗೂ ಮಾಹಿತಿಯನ್ನು ಬಹಿರಂಗ ಪಡಿಸದೆ ಗೌಪ್ಯವಾಗಿ ಇರಿಸಲಾಗುವುದು ಎಂದು ಹಸ್ಮುಖ್ ತಿಳಿಸಿದರು.

* ಸ್ವಯಂ ಘೋಷಣೆ ಯೋಜನೆಯನ್ನು ಮಾರ್ಚ್ 31, 2017ರ ತನಕ ವಿಸ್ತರಿಸಲಾಗಿದೆ.
* ಹಳೆ ನೋಟುಗಳನ್ನು ಬಳಸಿ ಬ್ಯಾಂಕಿಗೆ ಜಮೆ ಮಾಡುವ ರಾಜಕೀಯ ಪಕ್ಷಗಳಿಗೆ ಆದಾಯ ತೆರಿಗೆ ವಿನಾಯಿತಿ, ಆದರೆ, ವೈಯಕ್ತಿಕ ದೇಣಿಗೆ ಪಡೆಯುವವರಿಗೆ 20 ಸಾವಿರ ರುಪಾಯಿ ಮಿತಿ.
* ಉಪಯುಕ್ತ ಬಿಲ್ ಪಾವತಿಗೆ ಹಳೆ ನೋಟು ಬಳಕೆ ಕೊನೆ ದಿನಾಂಕ ಡಿಸೆಂಬರ್ 15 ನ್ನು ವಿಸ್ತರಿಸಲು ನಿರಾಕರಿಸಿದ ಸುಪ್ರೀಂಕೋರ್ಟ್.
* ಅಪನಗದೀಕರಣ ಪ್ರಕರಣ ಈಗ 5 ಜಡ್ಜ್ ಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ.
* ವಿದೇಶಿ ನಾಗರಿಕರು ಡಿಸೆಂಬರ್ 31 ರ ತನಕ 5 000 ಪ್ರತಿವಾರದಂತೆ ಹಣ ವಿನಿಮಯವನ್ನು ಮಾಡಿಕೊಳ್ಳಬಹುದು.
* ಅಪನಗದೀಕರಣಕ್ಕೆ ಸಂಬಂಧಿಸಿದಂತೆ ಇಲ್ಲಿ ತನಕ 3 ಸಾವಿರಕ್ಕೂ ಅಧಿಕ ನೋಟಿಸ್ ಕಳಿಸಲಾಗಿದ್ದು, 291 ಕೇಸುಗಳು ದಾಖಲಾಗಿದೆ.
(ಒನ್ಇಂಡಿಯಾ ಸುದ್ದಿ)
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications