HCL ಟೆಕ್ಕಿಗಳಿಂದ 3 ಸಾವಿರ ಕೋಟಿ ದಾನ
ನವದೆಹಲಿ, ನ.6:ಎಚ್ ಸಿಎಲ್ ಕಾರ್ಪೊರೇಶನ್ ಕಂಪನಿಯ ಸಂಸ್ಥಾಪಕ ಅಧ್ಯಕ್ಷ ಶಿವ್ ನಡಾರ್ ಅವರು ಶಿಕ್ಷಣಕ್ಕಾಗಿ ಸಾವಿರಾರು ಕೋಟಿ ರೂಪಾಯಿ ದಾನ ನೀಡಿದ್ದಾರೆ.
ಶಿವ್ ನಡಾರ್ ಅವರು ಫೌಂಡೇಶನ್ ಮೂಲಕ ಮುಂದಿನ 5 ವರ್ಷಗಳ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಬರೋಬ್ಬರಿ 3,000 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. Shiv Nadar Foundation ಈಗಾಗಲೇ ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಲ್ಲೂ ಈ ಹಣ ವಿನಿಯೋಗಿಸುವುದಾಗಿ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

1994ರಲ್ಲಿ ಸ್ಥಾಪಿತಸವಾದ Shiv Nadar Foundation, 2013ರ ಮಾರ್ಚ್ ವರೆಗೂ 1,800 ಕೋಟಿ ಅನುದಾನ ಪಡೆದಿದೆ. 'ಬದಲಾವಣೆಯ ಶಿಕ್ಷಣಕ್ಕಾಗಿ' ಈ ಹಣ ವಿನಿಯೋಗಿಸಲಿದ್ದು, ಭವಿಷ್ಯದ ನಾಯಕರುಗಳನ್ನು ರೂಪಿಸುವುದು ಇದರ ಮಹತ್ತರ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ VidyaGyan ಶಾಲೆಗಳು, ತಮಿಳುನಾಡಿನಲ್ಲಿ SSN ವಿದ್ಯಾ ಸಂಸ್ಥೆಗಳು ಹಾಗೂ ಗ್ರೇಟರ್ ನೋಯ್ಡಾದಲ್ಲಿರುವ ಅಂತಾರಾಷ್ಟ್ರೀಯ ಮಟ್ಟದ ಶಿವ್ ನಡಾರ್ ವಿಶ್ವವಿದ್ಯಾಲಯದ ಯೋಜನೆಗಳಲ್ಲಿ ಈ ಹಣ ತೊಡಗಿಸುವುದಾಗಿ ಅವರು ವಿವರಿಸಿದ್ದಾರೆ.
ಇದನ್ನೆಲ್ಲ ಅಚ್ಚುಕಟ್ಟಾಗಿ/ ಪಾರದರ್ಶಕವಾಗಿ ಜಾರಿಗೊಳಿಸುವ ಉದ್ದೇಶದೊಂದಿಗೆ ಹಣಕಾಸು ಸದಚಿವ ಪಿ ಚಿದಂಬರಂ ಅವರ ಸಮ್ಮುಖದಲ್ಲಿಯೇ Foundationನ ಹಣಕಾಸು ವಿವರವನ್ನು ಸುದ್ದಿಗೋಷ್ಠಿಯ ಮೂಲಕ ಬಹಿರಂಗಪಡಿಸುತ್ತಿರುವುದಾಗಿ ಅವರು ತಿಳಿಸಿದರು.
Shiv Nadar Foundation ತನ್ನ 20 ವರ್ಷಗಳ ಅಸ್ತಿತ್ವದಲ್ಲಿ 15,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೇರವಾಗಿ ಪ್ರಯೋಜನ ಪಡೆದುಕೊಂಡಿದ್ದಾರೆ' ಎಂದು ಟ್ರಸ್ಟೀ ರೋಶಿನಿ ನಡಾರ್ ಮಲ್ಹೋತ್ರ ಅವರು ಇದೇ ಸಂದರ್ಭದಲ್ಲಿ ಸಂತಸ ವ್ಯಕ್ತಪಡಿಸಿದರು. ಶಿಕ್ಷಣ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡುತ್ತಿರುವ HCL ಕಂಪನಿಯ ಮಾಜಿ ಅಧ್ಯಕ್ಷ ಶಿವ್ ಮತ್ತು ಹಾಲಿ ಅಧ್ಯಕ್ಷೆ ರೋಶಿನಿ ನಡಾರ್ ಅವರುಗಳಿಗೆ ಒಂದು ಪುಟ್ಟ ಥ್ಯಾಂಕ್ಸ್ ಹೇಳೋಣ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications