HD Kumaraswamy: ಉನ್ನತ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಹೆಚ್ ಡಿ ಕುಮಾರಸ್ವಾಮಿ: ಚರ್ಚೆಯಾಗಿದ್ದೇನು?
ನವದೆಹಲಿ, ಮೇ 14: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಮಂಗಳವಾರ ತಮ್ಮ ಉಸ್ತುವಾರಿಯ ಎರಡೂ ಸಚಿವಾಲಯಗಳ ಉನ್ನತ ಅಧಿಕಾರಿಗಳ ಜತೆ ಪ್ರತ್ಯೇಕವಾಗಿ ಪರಿಶೀಲನಾ ಸಭೆಗಳನ್ನು ನಡೆಸಿದರು. ಎರಡೂ ಸಚಿವಾಲಯಗಳಲ್ಲಿ ನಡೆಯುತ್ತಿರುವ ಅಭಿವೃಧ್ಧಿ ಕಾರ್ಯಕ್ರಮಗಳು ಹಾಗೂ ಈಗಾಗಲೇ ಅನುಷ್ಠಾನಕ್ಕೆ ತರಲಾಗಿರುವ ಮಹತ್ವದ ಕಾರ್ಯಕ್ರಮಗಳ ಬಗ್ಗೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕೂಲಂಕಶವಾಗಿ ಚರ್ಚೆ ನಡೆಸಿದರು.
ಬೃಹತ್ ಕೈಗಾರಿಕೆ ಸಚಿವಾಲಯದ ಸಭೆಯಲ್ಲಿ ಕೇಂದ್ರ ಸಚಿವರು ಎಲೆಕ್ಟ್ರಿಕ್ ವಾಹನಗಳ ಬಳಕೆ ಕುರಿತಾದ ಪಿಎಂ ಇ ಡ್ರೈವ್ ಹಾಗೂ ಉತ್ಪಾದನಾ ಸಂಪರ್ಕ ಸೌಲಭ್ಯ (PLI) ಕಾರ್ಯಕ್ರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಕೆಲ ನಿರ್ದಿಷ್ಟ ಸೂಚನೆಗಳನ್ನು ನೀಡಿದರು. ರಸ್ತೆ ಸಾರಿಗೆ ಕ್ಷೇತ್ರದಲ್ಲಿ ವಾಯು ಮಾಲಿನ್ಯವನ್ನು ಗಣನೀಯ ಪ್ರಮಾಣದಲ್ಲಿ ಕುಗ್ಗಿಸಬೇಕಾಗಿದ್ದು, ಆ ದಿಸೆಯಲ್ಲಿ ಪ್ರಧಾನಿ ಮೋದಿ ಅವರು ನಿಗದಿ ಮಾಡಿರುವ ಗುರಿಗಳನ್ನು ಮುಟ್ಟುವ ಬಗ್ಗೆ ಸಚಿವರು ಅಧಿಕಾರಿಗಳ ಜತೆ ಚರ್ಚಿಸಿದರು. ಹೆಚ್ಚೆಚ್ಚು ಪ್ರಮಾಣದಲ್ಲಿ ಎಲೆಕ್ಟ್ರಿಕ್ ವಾಹಗಳ ಬಳಕೆಯನ್ನು ಉತ್ತೇಜಿಸುವುದು, ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ, ಇನ್ನಿತರೆ ಮೂಲಸೌಕರ್ಯ ಅಭಿವೃದ್ಧಿ ಕುರಿತೂ ಅಧಿಕಾರಗಳು ಸಚಿವರಿಗೆ ಮಾಹಿತಿ ನೀಡಿದರು.

ಮೇಕ್ ಇನ್ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳ ಅಡಿಯಲ್ಲಿ ದೇಶಿಯವಾಗಿ ಎಲೆಕ್ಟಿಕ್ ವಾಹನಗಳನ್ನು ಅಗತ್ಯ ಪ್ರಮಾಣದಲ್ಲಿ ತಯಾರಿಸುವುದಕ್ಕೆ ಸಚಿವಾಲಯ ಹೆಚ್ಚು ಉತ್ತೇಜನ ನೀಡಬೇಕು ಎಂದು ಸಚಿವರು ಒತ್ತಿ ಹೇಳಿದರು. ಉಕ್ಕು ಸಚಿವಾಲಯದ ಸಭೆಯಲ್ಲಿ ವಿಶೇಷವಾಗಿ ಸಾರ್ವಜನಿಕ ವಲಯದ ಸ್ಥಾವರಗಳ ಕಾರ್ಯನಿರ್ವಹಣೆ ಬಗ್ಗೆ ಸಚಿವರು ಹೆಚ್ಚು ಮಾಹಿತಿ ಪಡೆದುಕೊಂಡರು.
ಈಗಾಗಲೇ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಉಕ್ಕು ಉತ್ಪಾದಕ ಕಂಪನಿಗಳ ಪ್ರಗತಿ ಹಾಗೂ ಉತ್ಪಾದಕತೆಯ ಕ್ಷಮತೆ ಬಗ್ಗೆ ಸಚಿವ ಕುಮಾರಸ್ವಾಮಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ, ಉಕ್ಕು SAIL ವಿಸ್ತರಣೆ ಹಾಗೂ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (ವೈಜಾಗ್ ಸ್ಟೀಲ್) ಕಾರ್ಯಕ್ಷಮತೆ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ₹11,400 ಕೋಟಿ ಪರಿಹಾರ ಪ್ಯಾಕೇಜ್ ನೀಡಿದ ನಂತರ ಕಾರ್ಖಾನೆ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ಬಗ್ಗೆ ಸಚಿವರು ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.
ಅಲ್ಲದೆ; ಉಕ್ಕು ಕ್ಷೇತ್ರದಲ್ಲಿ ಮಾಲಿನ್ಯವನ್ನು ಶೂನ್ಯಮಟ್ಟಕ್ಕೆ ಇಳಿಸಲೇಬೇಕೆಂಬ ಪ್ರಧಾನಿಗಳ ಸಂಕಲ್ಪವನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಒತ್ತು ಕೊಡಬೇಕು. ಮತ್ತೂ ಗ್ರೀನ್ ಸ್ಟೀಲ್ ತಯಾರಿಕೆಗೆ ಹೆಚ್ಚಿನ ಮಾರ್ಗೋಪಾಯಗಳನ್ನು ಕಂಡುಕೊಂಡು ಸಹಯೋಗಗಳನ್ನು ಬಲಪಡಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು. ಲೋಹಶಾಸ್ತ್ರದಲ್ಲಿ ಅದರಲ್ಲಿಯೂ ಪ್ರಮುಖವಾಗಿ ಕಬ್ಬಿಣ, ಉಕ್ಕು ವಲಯದಲ್ಲಿ ಆಗುತ್ತಿರುವ ಸಂಶೋಧನೆ ಮತ್ತು ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ವಿವರಣೆ ನೀಡಿದರು.
ಲೋಹ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಸೊಸೈಟಿ (SRTMI) ಯನ್ನು ಕೇಂದ್ರವಾಗಿ ಇರಿಸಿಕೊಂಡು ಕಾರ್ಯಪ್ರವೃತ್ತವಾಗಿದ್ದೇವೆ. CSIRO ಮತ್ತು ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯ ಸೇರಿದಂತೆ ಆಸ್ಟ್ರೇಲಿಯಾದ ಸಂಸ್ಥೆಗಳೊಂದಿಗೆ ಸಹಯೋಗದ ಚರ್ಚೆಗಳನ್ನು ನಡೆಸುತ್ತಿದ್ದು, ಹೈಡ್ರೋಜನ್ ಆಧಾರಿತ ಗ್ರೀನ್ ಸ್ಟೀಲ್ ಉತ್ಪಾದನೆ ಮತ್ತು ಇಂಗಾಲರಹಿತೀಕರಣದ ಕಡೆಗೆ ವ್ಯೂಹಾತ್ಮಕ ಹೆಜ್ಜೆಗಳನ್ನು ಇಡಲಾಗುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಬೃಹತ್ ಕೈಗಾರಿಕೆ ಸಚಿವಾಲಯದ ಸಭೆಯಲ್ಲಿ ಕಾರ್ಯದರ್ಶಿ ಕಮರನ್ ರಿಜ್ವಿ, ಜಂಟಿ ಕಾರ್ಯದರ್ಶಿ ಸುನೀಲ್ ಮಿತ್ತಲ್ ಹಾಗೂ ಉಕ್ಕು ಸಚಿವಾಲಯದ ಸಭೆಯಲ್ಲಿ ಹಣಕಾಸು ಸಲಹೆಗಾರರೂ ಆಗಿರುವ ಹೆಚ್ಚುವರಿ ಕಾರ್ಯದರ್ಶಿ ಅಶಿಶ್ ಚಟರ್ಜಿ, ಜಂಟಿ ಕಾರ್ಯದರ್ಶಿ ಅಭಿಜಿತ್ ನರೇಂದ್ರ ಸಭೆಯಲ್ಲಿ ಭಾಗಿಯಾಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications