ಅವರು (ಕರಾಚಿ) ಮನೇಲಿದ್ದಾರೆ, ಮಲಗಿದ್ದಾರೆ : ದಾವೂದ್ ಹೆಂಡತಿ
ನವದೆಹಲಿ, ಆಗಸ್ಟ್ 22 : "ಅವರು ಮನೇಲಿದ್ದಾರೆ, ಮಲಗಿದ್ದಾರೆ" ಎಂಬ ಮೂರು ಪದಗಳ ಹೇಳಿಕೆ ಸುದ್ದಿವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ಈ ಹೇಳಿಕೆ ನೀಡಿದ್ದು ಮತ್ತಾರೂ ಅಲ್ಲ. 1993ರ ಮುಂಬೈ ಸರಣಿ ದಾಳಿಯ ಪ್ರೈಮ್ ಆರೋಪಿ ದಾವೂದ್ ಇಬ್ರಾಹಿಂ ಹೆಂಡತಿ ಮಹಜಬೀನ್. ಆಕೆ ಹೇಳಿಕೆ ನೀಡಿದ್ದು ಪಾಕಿಸ್ತಾನದಿಂದ!
ದೇಶದ ಪ್ರಮುಖ ಸುದ್ದಿ ವಾಹಿನಿ, ಭಾರತೀಯ ಕಾಲಮಾನ ಶನಿವಾರ 12.24ಕ್ಕೆ ಮಾಡಿದ ಕರೆಗೆ ದಾವೂದ್ ಹೆಂಡತಿ ಮಹಜಬೀನ್ ಶೇಖ್ ಮೇಲಿನಂತೆ ಉತ್ತರಿಸಿದ್ದಾರೆ. ಮೋಸ್ಟ್ ವಾಂಟೆಡ್ ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲೇ ಇರುವುದು ಇದರಿಂದ ಸಾಬೀತಾಗಿದೆ. ಪಾಕಿಸ್ತಾನಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಮತ್ತಿನ್ನೇನು ಬೇಕು?
1993ರ ಸರಣಿ ಸ್ಫೋಟ ನಡೆಸಿ 257 ಜನರ ಹತ್ಯೆಗೆ ಕಾರಣನಾಗಿದ್ದ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಅಡಗಿದ್ದಾನೆ ಎಂಬ ಭಾರತ ಸರಕಾರದ ಹೇಳಿಕೆಯನ್ನು ಪಾಕಿಸ್ತಾನ ಸರಕಾರ ಅಲ್ಲಗಳೆಯುತ್ತಲೇ ಬಂದಿತ್ತು. ಭಾರತದಲ್ಲಿರುವ ಪಾಕಿಸ್ತಾನದ ರಾಜಭಾರಿ ಅಬ್ದುಲ್ ಬಾಸಿತ್ ಈ ಹೇಳಿಕೆಯನ್ನು ನೀಡುತ್ತಲೇ ಬಂದಿದ್ದರು.

ಹಿಂದೂಸ್ತಾನ್ ಟೈಮ್ಸ್ ನಡೆಸಿದ ತನಿಖಾ ವರದಿಯ ಪ್ರಕಾರ, ದಾವೂದ್, ಆತನ ಹೆಂಡತಿ ಮಹಜಬೀನ್, ಮಗ ಮೊಯೀನ್ ನವಾಜ್ ಮತ್ತು ಹೆಣ್ಣುಮಕ್ಕಳಾದ ಮಹರುಖ್, ಮೆಹರೀನ್ ಮತ್ತು ಮಾಝಿಯಾ ಪಾಕಿಸ್ತಾನದ ಕರಾಚಿಯ ಶ್ರೀಮಂತ ಬಡಾವಣೆಯಲ್ಲಿ ನೆಲೆಸಿದ್ದಾರೆ. ದಾವೂದ್ ಮಗಳು ಮಹರುಖ್ ಪಾಕ್ ಮಾಜಿ ಕ್ರಿಕೆಟರ್ ಜಾವೇದ್ ಮಿಯಾಂದಾಗ್ ಮಗನನ್ನು ವರಿಸಿದ್ದಾಳೆ.
ಸೋಮವಾರ ಭಾರತ ಮತ್ತು ಪಾಕಿಸ್ತಾನದ ಭದ್ರತಾ ಸಲಹೆಗಾರರು ನವದೆಹಲಿಯಲ್ಲಿ ಭೇಟಿ ಮಾಡುತ್ತಿರುವ ಹಿನ್ನೆಲೆಯಲ್ಲಿ, ದಾವೂದ್ ಪಾಕಿಸ್ತಾನದಲ್ಲೇ ಇರುವ ಮಾಹಿತಿ ಭಾರೀ ಮಹತ್ವ ಪಡೆದುಕೊಂಡಿದೆ. ದಾವೂದ್ ನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೆ ಒತ್ತಡ ಹೇರುವ ಸಂಭವನೀಯತೆಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications