ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಐಡಿ: ಮೋದಿ ಘೋಷಣೆ
ನವದೆಹಲಿ, ಆಗಸ್ಟ್ 15:ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಮೂಲಕ ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಗುರುತಿನ ಚೀಟಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಸಲುವಾಗಿ ಭಾರತೀಯ ಪ್ರಜೆಗಳಿಗೆ ಪ್ರತ್ಯೇಕ ಆರೋಗ್ಯ ಗುರುತಿನ ಚೀಟಿ ಹಾಗೂ ಸಂಖ್ಯೆ ನೀಡಲು ನಿರ್ಧರಿಸಲಾಗಿದೆ. ಇದರಿಂದ ದೇಶದ ಪ್ರತಿಯೊಬ್ಬ ನಾಗರಿಕನೂ ಪ್ರತ್ಯೇಕ ಹೆಲ್ತ್ ಕಾರ್ಡ್ ಹೊಂದಲಿದ್ದಾರೆ.
ಆತನ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಆ ಕಾರ್ಡ್ನಲ್ಲಿನ ಹೆಲ್ತ್ ಪ್ರೊಫೈಲ್ನಲ್ಲಿ ಇರಲಿದೆ. ಇದರಿಂದ ವೈದ್ಯಕೀಯ ಸೇವೆ ಪಡೆಯಲು ನೆರವಾಗಲಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಇದು ಆಯುಷ್ಮಾನ್ ಭಾರತ್ ಯೋಜನೆ ಮುಂದುವರೆದ ಭಾಗವಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಲಿದೆ ಎಂದು ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.
ವೈದ್ಯರನ್ನು ಭೇಟಿ ಮಾಡಿದಾಗ ಅಥವಾ ಫಾರ್ಮಸಿಗಳಿಗೆ ಹೋದಾಗ ಈ ಹೆಲ್ತ್ ಐಡಿ ಮೂಲಕ ರೋಗಿಯ ಎಲ್ಲಾ ರೋಗ ಲಕ್ಷಣಗಳು ಹಾಗೂ ಹಿಂದಿನ ವೈದ್ಯಕೀಯ ಇತಿಹಾಸವನ್ನು ತಿಳಿಯಬಹುದಾಗಿದೆ.
ಇದರಿಂದ ಉತ್ತಮ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಮೂಲಕ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ಸಾರ್ವಜನಿಕರು ಪ್ರತ್ಯೇಕ ಹೆಲ್ತ್ ಐಡಿಯನ್ನು ಹೊಂದಲಿದ್ದಾರೆ.
ಆಸ್ಪತ್ರೆಗಳಿಗೆ ಭೇಟಿ ನೀಡಿದಾಗ, ವೈದ್ಯರಿಗೆ ಈ ಐಡಿಯನ್ನು ನೀಡಿದರೆ ವ್ಯಕ್ತಿಯ ಸಂಪೂರ್ಣ ವೈದ್ಯಕೀಯ ಹಿನ್ನೆಲೆ ಗೊತ್ತಾಗಲಿದೆ, ಇದರಿಂದ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ನೆರವಾಗುತ್ತದೆ. ರೋಗಿಯ ವೈದ್ಯಕೀಯ ಇತಿಹಾಸದ ಮೂಲಕ ಯಾವ ಚಿಕಿತ್ಸೆ ನೀಡಬಹುದು ಯಾವ ಚಿಕಿತ್ಸೆ ನೀಡಬಾರದು ಎನ್ನುವ ಸ್ಪಷ್ಟತೆ ದೊರೆಯುತ್ತದೆ.
ಭಾರತೀಯರ ವೈಯಕ್ತಿಕ ಮಾಹಿತಿಗಳು ಖಾಸಗಿ ಹಕ್ಕಿನಲ್ಲಿ ಬರುತ್ತೆ ಎಂದು ಆಧಾರ್ವಿಚಾರದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹೀಗಾಗಿ ನಾಗರಿಕರ ಖಾಸಗಿತನ ರಕ್ಷಣೆಯನ್ನು ಹೊರಗಿರಿಸಿಕೊಂಡು ವೈದ್ಯರಿಗೆ ನಿರ್ದಿಷ್ಟ ಸಮಯಕ್ಕೆ ಮಾತ್ರ ರೋಗಿಯ ಹೆಲ್ತ್ ಕಾರ್ಡ್ ಪರಿವೀಕ್ಷಣೆಗೆ ಅವಕಾಶ ನೀಡಲಾಗುತ್ತಿದೆ.
ಈ ಹಲ್ತ್ ಕಾರ್ಡ್ನ ಪ್ರಮುಖ ಉಪಯೋಗವೆಂದರೆ ಭವಿಷ್ಯದ ಆರೋಗ್ಯ ಕ್ರಾಂತಿಗೆ ಕಾರಣವಾಗಲಿರುವ ಟೆಲಿಮೆಡಿಸಿನ್ ಗೂ ಇದು ಪೂರಕವಾಗಲಿದೆ. ರೋಗಿಗಳು ಈ ಹೆಲ್ತ್ ಕಾರ್ಡ್ ಮೂಲಕ ಟೆಲಿಮೆಡಿಸಿನ್ನಲ್ಲಿ ವೈದ್ಯರೊಂದಿಗೆ ಸಂದರ್ಶನ ನಡೆಸಬಹುದಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications