ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಐಡಿ: ಮೋದಿ ಘೋಷಣೆ
ನವದೆಹಲಿ, ಆಗಸ್ಟ್ 15:ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಮೂಲಕ ಪ್ರತಿಯೊಬ್ಬ ಭಾರತೀಯನಿಗೂ ಆರೋಗ್ಯ ಗುರುತಿನ ಚೀಟಿ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಸಲುವಾಗಿ ಭಾರತೀಯ ಪ್ರಜೆಗಳಿಗೆ ಪ್ರತ್ಯೇಕ ಆರೋಗ್ಯ ಗುರುತಿನ ಚೀಟಿ ಹಾಗೂ ಸಂಖ್ಯೆ ನೀಡಲು ನಿರ್ಧರಿಸಲಾಗಿದೆ. ಇದರಿಂದ ದೇಶದ ಪ್ರತಿಯೊಬ್ಬ ನಾಗರಿಕನೂ ಪ್ರತ್ಯೇಕ ಹೆಲ್ತ್ ಕಾರ್ಡ್ ಹೊಂದಲಿದ್ದಾರೆ.
ಆತನ ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಆ ಕಾರ್ಡ್ನಲ್ಲಿನ ಹೆಲ್ತ್ ಪ್ರೊಫೈಲ್ನಲ್ಲಿ ಇರಲಿದೆ. ಇದರಿಂದ ವೈದ್ಯಕೀಯ ಸೇವೆ ಪಡೆಯಲು ನೆರವಾಗಲಿದೆ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.

ಇದು ಆಯುಷ್ಮಾನ್ ಭಾರತ್ ಯೋಜನೆ ಮುಂದುವರೆದ ಭಾಗವಾಗಿದ್ದು, ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಲಿದೆ ಎಂದು ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ.
ವೈದ್ಯರನ್ನು ಭೇಟಿ ಮಾಡಿದಾಗ ಅಥವಾ ಫಾರ್ಮಸಿಗಳಿಗೆ ಹೋದಾಗ ಈ ಹೆಲ್ತ್ ಐಡಿ ಮೂಲಕ ರೋಗಿಯ ಎಲ್ಲಾ ರೋಗ ಲಕ್ಷಣಗಳು ಹಾಗೂ ಹಿಂದಿನ ವೈದ್ಯಕೀಯ ಇತಿಹಾಸವನ್ನು ತಿಳಿಯಬಹುದಾಗಿದೆ.
ಇದರಿಂದ ಉತ್ತಮ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ ಎಂದು ಮೋದಿ ತಿಳಿಸಿದ್ದಾರೆ.ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಮೂಲಕ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ ಈ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದರಿಂದ ಸಾರ್ವಜನಿಕರು ಪ್ರತ್ಯೇಕ ಹೆಲ್ತ್ ಐಡಿಯನ್ನು ಹೊಂದಲಿದ್ದಾರೆ.
ಆಸ್ಪತ್ರೆಗಳಿಗೆ ಭೇಟಿ ನೀಡಿದಾಗ, ವೈದ್ಯರಿಗೆ ಈ ಐಡಿಯನ್ನು ನೀಡಿದರೆ ವ್ಯಕ್ತಿಯ ಸಂಪೂರ್ಣ ವೈದ್ಯಕೀಯ ಹಿನ್ನೆಲೆ ಗೊತ್ತಾಗಲಿದೆ, ಇದರಿಂದ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡಲು ನೆರವಾಗುತ್ತದೆ. ರೋಗಿಯ ವೈದ್ಯಕೀಯ ಇತಿಹಾಸದ ಮೂಲಕ ಯಾವ ಚಿಕಿತ್ಸೆ ನೀಡಬಹುದು ಯಾವ ಚಿಕಿತ್ಸೆ ನೀಡಬಾರದು ಎನ್ನುವ ಸ್ಪಷ್ಟತೆ ದೊರೆಯುತ್ತದೆ.
ಭಾರತೀಯರ ವೈಯಕ್ತಿಕ ಮಾಹಿತಿಗಳು ಖಾಸಗಿ ಹಕ್ಕಿನಲ್ಲಿ ಬರುತ್ತೆ ಎಂದು ಆಧಾರ್ವಿಚಾರದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹೀಗಾಗಿ ನಾಗರಿಕರ ಖಾಸಗಿತನ ರಕ್ಷಣೆಯನ್ನು ಹೊರಗಿರಿಸಿಕೊಂಡು ವೈದ್ಯರಿಗೆ ನಿರ್ದಿಷ್ಟ ಸಮಯಕ್ಕೆ ಮಾತ್ರ ರೋಗಿಯ ಹೆಲ್ತ್ ಕಾರ್ಡ್ ಪರಿವೀಕ್ಷಣೆಗೆ ಅವಕಾಶ ನೀಡಲಾಗುತ್ತಿದೆ.
ಈ ಹಲ್ತ್ ಕಾರ್ಡ್ನ ಪ್ರಮುಖ ಉಪಯೋಗವೆಂದರೆ ಭವಿಷ್ಯದ ಆರೋಗ್ಯ ಕ್ರಾಂತಿಗೆ ಕಾರಣವಾಗಲಿರುವ ಟೆಲಿಮೆಡಿಸಿನ್ ಗೂ ಇದು ಪೂರಕವಾಗಲಿದೆ. ರೋಗಿಗಳು ಈ ಹೆಲ್ತ್ ಕಾರ್ಡ್ ಮೂಲಕ ಟೆಲಿಮೆಡಿಸಿನ್ನಲ್ಲಿ ವೈದ್ಯರೊಂದಿಗೆ ಸಂದರ್ಶನ ನಡೆಸಬಹುದಾಗಿದೆ.
-
PM Modi: ಆದಿಚುಂಚನಗಿರಿ ಮಠಕ್ಕೆ 'ನಮೋ' ಭೇಟಿ: ಕರ್ನಾಟಕ ಸಂಸ್ಕೃತಿ, ಮಠದ ಸೇವೆಗೆ ಮೆಚ್ಚುಗೆ -
Narendra Modi: ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ 18 ಅಂಶ: ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು










Click it and Unblock the Notifications