'ಕ್ಷುಲ್ಲಕ ರಾಜಕೀಯ': ಕೋವಿಡ್ ಲಸಿಕೆ ಪೂರೈಕೆ ವಿಚಾರದಲ್ಲಿ ಆರೋಗ್ಯ ಸಚಿವ vs ರಾಹುಲ್ ಗಾಂಧಿ
ನವದೆಹಲಿ, ಆ.01: ದೇಶದಲ್ಲಿ ಕೋವಿಡ್ ಲಸಿಕೆ ಪೂರೈಕೆಯ ಬಗ್ಗೆ "ಕ್ಷುಲ್ಲಕ ರಾಜಕೀಯ" ಮಾಡಿದ್ದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಕೋವಿಡ್ ಲಸಿಕೆ ಪೂರೈಕೆಯಲ್ಲಿ ಕೊರತೆಯಿದೆ ಎಂದು ಆರೋಪಿಸಿ ಕಾಂಗ್ರೆಸ್ನ ವಯನಾಡು ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ ನಂತರ ಆರೋಗ್ಯ ಸಚಿವರು ರಾಹುಲ್ ಮೇಲೆ ತೀವ್ರ ಕಿಡಿಕಾರಿದ್ದಾರೆ.
ಭಾನುವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ಜುಲೈ ತಿಂಗಳು ಮುಗಿದು ಹೋಗಿದೆ. ಆದರೆ ಕೋವಿಡ್ ಲಸಿಕೆ ಪೂರೈಕೆಯಲ್ಲಿ ಕೊರತೆ ಮುಂದುವರಿದಿದೆ ಎಂದು ಆರೋಪಿಸಿದ್ದಾರೆ. ಹಾಗೆಯೇ ದೇಶದ ಹಲವಾರು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಪೂರೈಕೆಯಲ್ಲಿನ ಕೊರತೆಗೆ ಸಂಬಂಧಿಸಿದ ಸುದ್ದಿಗಳ ಒಂದು ವಿಡಿಯೋ ತುಣುಕನ್ನು ಕೂಡಾ ಜೊತೆಯಲ್ಲೇ ಟ್ವೀಟ್ ಮಾಡಿದ್ದಾರೆ. ಈ 34 ಸೆಂಕಡುಗಳ ವಿಡಿಯೋದಲ್ಲಿ ದೇಶದ ವಿವಿಧ ಭಾಗಗಳಲ್ಲಿ ವರದಿಯಾಗಿರುವ ಕೋವಿಡ್ ಲಸಿಕೆ ಕೊರತೆಯ ಹಲವು ಘಟನೆಗಳ ಟ್ವೀಟ್ ಮತ್ತು ಮುಖ್ಯಾಂಶಗಳನ್ನು ಹೊಂದಿದೆ.
ರಾಹುಲ್ ಗಾಂಧಿಯ ಈ ಟ್ವೀಟ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ''ಜುಲೈ ತಿಂಗಳಲ್ಲಿ ಭಾರತದಲ್ಲಿ 13 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. ಇದು ಈ ತಿಂಗಳು ಇನ್ನೂ ವೇಗವನ್ನು ಪಡೆಯಲಿದೆ. ಈ ಸಾಧನೆಗಾಗಿ ನಮ್ಮ ಆರೋಗ್ಯ ಕಾರ್ಯಕರ್ತರ ಬಗ್ಗೆ ನಮಗೆ ಹೆಮ್ಮೆ ಇದೆ.ಈಗ ನೀವೂ ಈ ಆರೋಗ್ಯ ಕಾರ್ಯಕರ್ತರ ಸೇವೆಗೆ ಮತ್ತು ದೇಶದ ಬಗ್ಗೆ ಹೆಮ್ಮೆ ಪಡಬೇಕು,'' ಎಂದು ಟಾಂಗ್ ನೀಡಿದ್ದಾರೆ.

''ಜುಲೈನಲ್ಲಿ ಲಸಿಕೆ ಹಾಕಿಸಿಕೊಂಡ 13 ಕೋಟಿ ಜನರಲ್ಲಿ ನೀವೂ ಒಬ್ಬ ಎಂದು ನಾನು ಕೇಳಿದ್ದೇನೆ. ಆದರೆ ನೀವು ನಮ್ಮ ವಿಜ್ಞಾನಿಗಳಿಗೆ ಒಂದು ಮಾತನ್ನೂ ಹೇಳಲಿಲ್ಲ, ಕೋವಿಡ್ ಲಸಿಕೆ ಹಾಕುವಂತೆ ಸಾರ್ವಜನಿಕರಿಗೆ ಮನವಿ ಮಾಡಲಿಲ್ಲ. ಕೋವಿಡ್ ಲಸಿಕೆ ಹೆಸರಿನಲ್ಲಿ ನೀವು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದೀರಿ ಎಂದರ್ಥ. ವಾಸ್ತವವಾಗಿ ಕೋವಿಡ್ ಲಸಿಕೆ ಅಲ್ಲ, ನಿಮಗೆ ಪ್ರಬುದ್ಧತೆಯ ಕೊರತೆ ಇದೆ,'' ಎಂದು ರಾಹುಲ್ ಗಾಂಧಿಯನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಲೇವಡಿ ಮಾಡಿದ್ದಾರೆ.
ಇನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವರುಗಳು ನಡುವೆ ಕೋವಿಡ್ ಲಸಿಕೆ ವಿಚಾರದಲ್ಲಿ ಟ್ವೀಟ್ ವಾರ್ ನಡೆದಿರುವುದು ಇದೇ ಮೊದಲೇನಲ್ಲ. ಜುಲೈ ಆರಂಭವಾಗುತ್ತಿದ್ದಂತೆ ರಾಹುಲ್ ಗಾಂಧಿ ಕೋವಿಡ್ ಲಸಿಕೆ ವಿಚಾರದಲ್ಲಿ ಮಾಡಿದ್ದ ಟ್ವೀಟ್ನಿಂದಾಗಿ ಆಗಿನ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹಾಗೂ ರಾಹುಲ್ ನಡುವೆ ವಾಕ್ಸಮರ ನಡೆದಿತ್ತು.
ಕೇಂದ್ರ ನಾಯಕರುಗಳು ಕೋವಿಡ್ ಲಸಿಕೆ ನೀಡಿಕೆ ವೇಗ ಅಧಿಕವಾಗಿದೆ ಎಂದು ಹೇಳುತ್ತಿರುವ ನಡುವೆ ಜುಲೈ ಆರಂಭದಲ್ಲಿ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ''ಜುಲೈ ತಿಂಗಳು ಬಂದಿದೆ, ಆದರೆ ಲಸಿಕೆ ಬಂದಿಲ್ಲ,'' ಎಂದು ಹೇಳಿದ್ದರು. ಈ ವಿಚಾರದಲ್ಲಿ ಕಿಡಿಕಾರಿದ್ದ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ರಾಹುಲ್ರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪಿಯೂಷ್ ಗೋಯಲ್, ''ಜುಲೈನಲ್ಲಿ 120 ಮಿಲಿಯನ್ ಡೋಸ್ ಲಸಿಕೆ ಲಭ್ಯವಿರುತ್ತದೆ. ಇದು ಖಾಸಗಿ ಆಸ್ಪತ್ರೆಗಳಿಂದ ಸರಬರಾಜುಗಿಂತ ಭಿನ್ನವಾಗಿದೆ. ಸರಬರಾಜು ಬಗ್ಗೆ 15 ದಿನಗಳ ಮುಂಚಿತವಾಗಿ ರಾಜ್ಯಗಳಿಗೆ ತಿಳಿಸಲಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಗಂಭೀರವಾಗಿರುವ ಬದಲಾಗಿ ಸಣ್ಣ ರಾಜಕಾರಣದ ಪ್ರದರ್ಶನ ಈ ಸಮಯದಲ್ಲಿ ಸೂಕ್ತವಲ್ಲ ಎಂದು ರಾಹುಲ್ ಗಾಂಧಿ ಅರ್ಥಮಾಡಿಕೊಳ್ಳಬೇಕು,'' ಎಂದು ಹೇಳಿದ್ದರು.
भारत में जुलाई महीने में 13 करोड़ से अधिक टीके लगाए गए हैं।
— Mansukh Mandaviya (@mansukhmandviya) August 1, 2021
इस महीने इसमें और तेजी आने वाली है। इस उपलब्धि के लिए हमें अपने स्वास्थ्यकर्मियों पर गर्व है।
अब तो उन पर और देश पर आपको भी गर्व होना चाहिए। https://t.co/fgdifM26k6
ರಾಹುಲ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ''ನಿನ್ನೆ, ನಾನು ಜುಲೈ ತಿಂಗಳ ಲಸಿಕೆ ಲಭ್ಯತೆಯ ಬಗ್ಗೆ ಸತ್ಯಾಂಶವನ್ನು ತಿಳಿಸಿದ್ದೇನೆ. ಹಾಗಿರುವಾಗ ರಾಹುಲ್ ಗಾಂಧಿ ಜಿ ಅವರ ಸಮಸ್ಯೆ ಏನು? ಅವರು ಓದುವುದಿಲ್ಲವೇ? ಅವರಿಗೆ ಅರ್ಥವಾಗುತ್ತಿಲ್ಲವೇ?,'' ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಹಾಗೆಯೇ ''ದುರಹಂಕಾರ ಮತ್ತು ಅಜ್ಞಾನದ ವೈರಸ್ಗೆ ಲಸಿಕೆ ಇಲ್ಲ, ಕಾಂಗ್ರೆಸ್ ತನ್ನ ನಾಯಕತ್ವದ ಕೂಲಂಕುಷ ಪರೀಕ್ಷೆಯ ಬಗ್ಗೆ ಯೋಚಿಸಬೇಕು,'' ಎಂದು ಲೇವಡಿ ಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications