ಲಸಿಕೆ ಅಭಿಯಾನದಿಂದ ಹೊರಗುಳಿದರೇ ನಿರ್ಗತಿಕರು; ಆರೋಗ್ಯ ಸಚಿವಾಲಯದ ಸ್ಪಷ್ಟನೆ
ನವದೆಹಲಿ, ಜೂನ್ 23: ಕೆಲವು ಕಾರಣಗಳಿಂದಾಗಿ ದೇಶದಲ್ಲಿ ನಿರ್ಗತಿಕರನ್ನು, ದುರ್ಬಲರನ್ನು ಲಸಿಕಾ ಕಾರ್ಯಕ್ರಮದಿಂದ ಹೊರಗುಳಿಸಲಾಗಿದೆ. ಲಸಿಕಾ ಅಭಿಯಾನದ ನೋಂದಣಿ ಸಾಧ್ಯವಾಗದೇ ಅವರನ್ನು ಕೈಬಿಡಲಾಗಿದೆ ಎಂಬ ಮಾಧ್ಯಮ ವರದಿಗಳ ಆರೋಪವನ್ನು ತಳ್ಳಿಹಾಕಿರುವ ಆರೋಗ್ಯ ಸಚಿವಾಲಯ ಇದಕ್ಕೆ ಸ್ಪಷ್ಟನೆ ನೀಡಿದೆ. ನಿರ್ಗತಿಕರಿಗೆ ಲಸಿಕೆ ನೀಡಲಾಗುತ್ತಿಲ್ಲ ಎನ್ನುವುದು ಆಧಾರರಹಿತ ವರದಿ ಎಂದು ಹೇಳಿದೆ.
ಡಿಜಿಟಲ್ ರೂಪದಲ್ಲಿ ನೋಂದಣಿ ಮಾಡಿಕೊಳ್ಳುವುದು, ಇಂಗ್ಲಿಷ್ ಭಾಷೆ ಹಾಗೂ ಕಂಪ್ಯೂಟರ್, ಮೊಬೈಲ್ ಈ ಅಂಶಗಳಿಂದಾಗಿ ಲಸಿಕೆ ಹಾಕಿಸಿಕೊಳ್ಳುವುದರಿಂದ ನಿರ್ಗತಿಕರು ವಂಚಿತರಾಗುತ್ತಿದ್ದಾರೆ. ಅವರು ಲಸಿಕಾ ಅಭಿಯಾನದಿಂದ ಹೊರಗುಳಿದಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಈ ವರದಿ ತಳ್ಳಿಹಾಕಿರುವ ಕೇಂದ್ರ, ಈಗ ಲಸಿಕೆ ಪಡೆದುಕೊಳ್ಳಲು ಕೋವಿನ್ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂಬುದನ್ನು ಗಮನಿಸಬೇಕು ಎಂದಿದೆ.

"ಮೊಬೈಲ್ ಫೋನ್ ಮಾಹಿತಿ ಕೊರೊನಾ ಲಸಿಕೆ ಪಡೆದುಕೊಳ್ಳಲು ಪೂರ್ವಾಪೇಕ್ಷಿತವಲ್ಲ. ಈಗ ವಿಳಾಸ ಪುರಾವೆ ಕೂಡ ಕಡ್ಡಾಯವಲ್ಲ. ಬಳಕೆದಾರರ ಅನುಕೂಲಕ್ಕಾಗಿ ಕೋವಿನ್ನಲ್ಲಿ ಹಿಂದಿ, ಮಲಯಾಳಂ, ತಮಿಳು, ತೆಲುಗು, ಕನ್ನಡ, ಮರಾಠಿ, ಗುಜರಾತ್, ಒಡಿಯಾ, ಬಂಗಾಳಿ, ಅಸ್ಸಾಮಿ, ಪಂಜಾಬಿ ಹಾಗೂ ಇಂಗ್ಲಿಷ್, 12 ಭಾಷೆಗಳಲ್ಲಿ ಮಾಹಿತಿ ನೀಡಲಾಗುತ್ತಿದೆ. ಇವೆಲ್ಲವೂ ಎಲ್ಲರಿಗೂ ಅನುಕೂಲವಾಗಲೆಂದು" ಎಂದಿದೆ.
ಕೋವಿನ್ ವೇದಿಕೆ ಒಂದು ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯಾಗಿದ್ದು, ದೇಶದ ಕುಗ್ರಾಮಗಳಿಗೆ, ದುರ್ಬಲರಾಗಿರುವವರಿಗೆ ಲಸಿಕೆ ನೀಡಲು ಅಗತ್ಯವಿರುವ ಎಲ್ಲಾ ಅಂಶಗಳು, ಮಾಹಿತಿಗಳನ್ನು ಹೊಂದಿದೆ ಎಂದು ಸಚಿವಾಲಯ ವಿವರಿಸಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications