ಡೆಲ್ಟಾ ಪ್ಲಸ್ ಪ್ರಕರಣ; ಕರ್ನಾಟಕ ಸೇರಿ 8 ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಎಚ್ಚರಿಕೆ
ನವದೆಹಲಿ, ಜೂನ್ 25: ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾಗಿರುವ ಜಿಲ್ಲೆಗಳಲ್ಲಿ ತಕ್ಷಣವೇ ಕೊರೊನಾ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸುವಂತೆ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಏಳು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್, ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಶೀಘ್ರವೇ ಸೋಂಕು ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವಂತೆ ಆದೇಶಿಸಿದ್ದಾರೆ.
ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿರುವ ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪಂಜಾಬ್, ಹರಿಯಾಣ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಜನರು ಒಂದೆಡೆ ಸೇರುವುದನ್ನು ನಿರ್ಬಂಧಿಸಲು ಸೂಚಿಸಿದೆ.

"INSACOG ಈ ರೂಪಾಂತರದ ಜೆನೋಮ್ ಸೀಕ್ವೆನ್ಸಿಂಗ್ ನಡೆಸುವ ಕಾರ್ಯದಲ್ಲಿ ತೊಡಗಿಕೊಂಡಿರುವುದು ನಿಮಗೆಲ್ಲಾ ತಿಳಿದಿದೆ. ಸಂಸ್ಥೆ ರೂಪಾಂತರದ ಬಗ್ಗೆ ಸಮಯೋಚಿತ ಮಾಹಿತಿ, ಸಲಹೆಗಳನ್ನೂ ಒದಗಿಸುತ್ತಿದೆ" ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
"INSACOG ಡೆಲ್ಟಾ ಪ್ಲಸ್ ರೂಪಾಂತರದ ಬಗ್ಗೆ ಮೂರು ಮುಖ್ಯ ಸಂಗತಿಗಳನ್ನು ತಿಳಿಸಿದೆ. ಮೊದಲನೆಯದು, ಇದು ವೇಗವಾಗಿ ಹರಡಬಲ್ಲದು. ಎರಡನೆಯದು, ಶ್ವಾಸಕೋಶಗಳ ಮೇಲೆ ಪರಿಣಾಮ ಬೀರಬಲ್ಲದು. ಕೊನೆಯದಾಗಿ ಮೋನೊಕ್ಲೊನಾಲ್ ಪ್ರತಿಕಾಯ ಪ್ರತಿಕ್ರಿಯೆಗೆ ಕಡಿಮೆ ಸ್ಪಂದನೆ ಎಂಬುದು" ಎಂದು ರಾಜೇಶ್ ಭೂಷಣ್ ತಿಳಿಸಿದ್ದಾರೆ.
ಅತಿ ಹೆಚ್ಚು ಪರೀಕ್ಷೆಗಳನ್ನು ನಡೆಸಬೇಕು. ಆದ್ಯತೆ ಮೇರೆಗೆ ಲಸಿಕೆಗಳನ್ನು ತ್ವರಿತಗತಿಯಲ್ಲಿ ನೀಡಬೇಕು, ಸೋಂಕಿತರ ಪತ್ತೆ ಕಾರ್ಯ ನಡೆಯಬೇಕು ಎಂದು ಸೂಚನೆ ನೀಡಿದ್ದು, ಸೋಂಕಿನ ಪ್ರಕರಣ ಕಂಡುಬಂದಿರುವ ಜಿಲ್ಲೆ ಅಥವಾ ಪ್ರದೇಶದಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ತಿಳಿಸಿದ್ದಾರೆ.
ಯಾವ ಜಿಲ್ಲೆಗಳಲ್ಲಿ ಕಠಿಣ ಕ್ರಮದ ಸೂಚನೆ?
ತಮಿಳುನಾಡಿನಲ್ಲಿ ಮಧುರೈ, ಕಂಚೀಪುರಂ ಹಾಗೂ ಚೆನ್ನೈ, ಕರ್ನಾಟಕದಲ್ಲಿ ಮೈಸೂರು, ಆಂಧ್ರಪ್ರದೇಶದಲ್ಲಿ ತಿರುಪತಿ, ಗುಜರಾತ್ನಲ್ಲಿ ಸೂರತ್, ಹರಿಯಾಣದಲ್ಲಿ ಫರೀದಾಬಾದ್, ಪಂಜಾಬ್ನ ಪಟಿಯಾಲಾ, ಲೂಧಿಯಾನಾ ಹಾಗೂ ಜಮ್ಮು ಕಾಶ್ಮೀರದ ಕಾತ್ರಾದಲ್ಲಿ ಕಠಿಣ ನಿಯಮಗಳನ್ನು ಹೇರಬೇಕು ಎಂದು ಸೂಚಿಸಲಾಗಿದೆ.
ಇದುವರೆಗೂ 45000 ಮಾದರಿಗಳನ್ನು ಪರೀಕ್ಷಿಸಿದ್ದು, 12 ರಾಜ್ಯಗಳಿಂದ 51 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 22, ತಮಿಳುನಾಡಿನಲ್ಲಿ 9, ಮಧ್ಯಪ್ರದೇಶದಲ್ಲಿ 7, ಕೇರಳದಲ್ಲಿ 3, ಪಂಜಾಬ್, ಗುಜರಾತ್ನಲ್ಲಿ 2, ಕರ್ನಾಟಕ, ಆಂಧ್ರ, ಒಡಿಶಾ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಹರಿಯಾಣದಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications