ಬಾಬಾ ರಹೀಂನ ಎರಡು ಕೊಲೆ ಕೇಸ್ ವಿಚಾರಣೆ ಇಂದಿನಿಂದ
ನವದೆಹಲಿ/ಪಂಚಕುಲ, ಸೆಪ್ಟೆಂಬರ್ 16: ಬಾಬಾ ರಾಮ್ ರಹೀಂನ ಎರಡು ಕೊಲೆ ಕೇಸ್ ಗಳ ವಿಚಾರಣೆಯು ಸೆಪ್ಟೆಂಬರ್ 16ರಿಂದ ಶುರುವಾಗಲಿದೆ.
ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಯೆಂದು ಪರಿಗಣಿಸಿ ರೋಹ್ಟಕ್ ಜೈಲಿನಲ್ಲಿ ಬಂಧಿಯಾಗಿರುವ ರಾಮ್ ರಹೀಂ, 15 ವರ್ಷಗಳ ಹಿಂದೆ ನಡೆದಿದ್ದ ಎರಡು ಕೊಲೆ ಕೇಸ್ ಗಳಲ್ಲಿಯೂ ಆರೋಪ ಹೊತ್ತಿದ್ದರು. ಆ ಪ್ರಕರಣಗಳೂ ಈಗ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಲಿದ್ದು, ಸೆ. 16ರಿಂದ ಅವುಗಳ ವಿಚಾರಣೆ ಆರಂಭವಾಗಲಿದೆ. ರೋಹ್ಟಕ್ ಜೈಲಿನಿಂದಲೇ ರಾಮ್ ದೇವ್ ಬಾಬಾ, ವಿಡಿಯೋ ಕಾನ್ಫರೆನ್ಸ್ ಮೂಲಕ ಈ ವಿಚಾರಣೆಯಲ್ಲಿ ಭಾಗಿಯಾಗಲಿದ್ದಾನೆ.

2002ರಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಪತ್ರಕರ್ತ ಛತ್ರಪತಿ ಹಾಗೂ ಬಾಬಾ ರಹೀಂ ಭಕ್ತನೇ ಆಗಿದ್ದ ರಂಜಿತ್ ಸಿಂಗ್ ಎಂಬುವರ ಕೊಲೆಯಾಗಿತ್ತು.
ರಾಮ್ ರಹೀಂನ ಆಶ್ರಮದಲ್ಲಿ ನಡೆಯುತ್ತಿದ್ದ ಅವ್ಯವಹಾರಗಳು ಹಾಗೂ ಸಾಧ್ವಿಗಳನ್ನು ತನ್ನ ಕಾಮತೃಷೆಗಾಗಿ ರಾಮ್ ರಹೀಂ ಬಳಸಿಕೊಳ್ಳುತ್ತಿದ್ದನ್ನು ಆಶ್ರಮದ ಸನ್ಯಾಸಿನಿಯೊಬ್ಬರು ಅಂದಿನ ಪ್ರಧಾನಿ ವಾಜಪೇಯಿ ಅವರಿಗೆ ಪತ್ರವೊಂದನ್ನು ಬರೆದಿದ್ದರು. ಆ ಪತ್ರವು, ಪತ್ರಕರ್ತ ಛತ್ರಪತಿಗೆ ಸಿಕ್ಕು ಅದನ್ನು ಯಥಾವತ್ತಾಗಿ ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ (2002ರ ಅಕ್ಟೋಬರ್ 24) ಅವರ ಕೊಲೆಯಾಗಿತ್ತು.
ಆ ಪತ್ರವನ್ನು ಸಾಧ್ವಿಯ ಕೋರಿಕೆಯ ಮೇಲೆ ಬರೆದಿದ್ದನೆಂಬ ಅನುಮಾನದಲ್ಲಿ ರಂಜಿತ್ ಸಿಂಗ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಎರಡೂ ಪ್ರಕರಣಗಳ ವಿಚಾರಣೆಯನ್ನು ಸಿಬಿಐ ಕೋರ್ಟ್ ಸೆ. 16ರಂದು ಆರಂಭಿಸಲಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications