ದೆಹಲಿಯಲ್ಲಿ ಬಿಸಿಗಾಳಿ: 4 ದಿನಗಳವರೆಗೆ ಆರೆಂಜ್ ಅಲರ್ಟ್
ನವದೆಹಲಿ ಜೂನ್ 6: ದೆಹಲಿ ಮತ್ತೊಮ್ಮೆ ಹೊತ್ತಿ ಉರಿಯುತ್ತಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಇತ್ತೀಚಿನ ಅಪ್ಡೇಟ್ನಲ್ಲಿ ಈ ಇಡೀ ವಾರ, ದೆಹಲಿಯು ತೀವ್ರ ಶಾಖವನ್ನು ಎದುರಿಸಲಿದೆ ಮತ್ತು ಜನರು ಶಾಖದ ಅಲೆಯನ್ನು ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ. ದೆಹಲಿ, ಹರಿಯಾಣ, ಪಂಜಾಬ್, ಯುಪಿ ಮತ್ತು ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ತೀವ್ರ ಶಾಖದ ಅಲೆಯನ್ನು (Heat Wave) ಅನುಭವಿಸುವ ನಿರೀಕ್ಷೆಯಿದೆ. ಈ ನಾಲ್ಕು ದಿನಗಳಲ್ಲಿ ತಾಪಮಾನವು 44 ° -47 ° C ನಡುವೆ ಇರುತ್ತದೆ ಎಂದು IMD ಹಿರಿಯ ವಿಜ್ಞಾನಿ ಆರ್ಕೆ ಜೆನಾಮಣಿ ಹೇಳಿದ್ದಾರೆ. ಹಾಗಾಗಿ ಎಲ್ಲರೂ ತುಂಬಾ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಬಿಸಿಗಾಳಿ ಹೆಚ್ಚಾಗಿದೆ. ಜೂನ್ 11 ರ ಮೊದಲು ದೆಹಲಿಯಲ್ಲಿ ಮಳೆ ನಿರೀಕ್ಷಿಸಲಾಗಿಲ್ಲ, ಜೂನ್ 25-30 ರೊಳಗೆ ಮುಂಗಾರು ದೆಹಲಿ-ಎನ್ಸಿಆರ್ ತಲುಪುವ ನಿರೀಕ್ಷೆಯಿದೆ.
ಮತ್ತೊಂದೆಡೆ ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಈಶಾನ್ಯ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕೇರಳ, ಲಕ್ಷದ್ವೀಪ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಸಿಕ್ಕಿಂ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ತಿಳಿಸಿದೆ.
Delhi | Orange alert in Delhi. Severe heatwave from June 4 in Haryana, Punjab, Delhi, UP & parts of MP, Rajasthan. Temp varying b/w 44°-47°. Shall continue for 4 more days. We advise people to venture out carefully as heat spell very severe: RK Jenamani, senior scientist IMD pic.twitter.com/04YwyVE6F1
— ANI (@ANI) June 6, 2022

ಆದರೆ ದೆಹಲಿ, ಯುಪಿ, ಬಿಹಾರ, ಎಂಪಿ ಮತ್ತು ಛತ್ತೀಸ್ಗಢದಲ್ಲಿ ತುಂಬಾ ಬಿಸಿಲಿರಲಿದೆ. ಜನರು ಬಿಸಿಲನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಕೊಂಕಣ ಮತ್ತು ಮಹಾರಾಷ್ಟ್ರದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳನ್ನು ಕಾಣಬಹುದು. ಸಾಮಾನ್ಯವಾಗಿ ಮುಂಗಾರು ಜೂನ್ 5-15 ರ ನಡುವೆ ಮಹಾರಾಷ್ಟ್ರವನ್ನು ತಲುಪುತ್ತದೆ ಆದರೆ ಈ ಬಾರಿ ಸ್ವಲ್ಪ ತಡವಾಗಬಹುದು. ಮುಂಗಾರು ಪೂರ್ವ ಮಳೆಯಿಂದಾಗಿ ಜನರು ನಿರಾಳರಾಗುತ್ತಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications