ಬಿಸಿ ಗಾಳಿ ಭಯ: ಉತ್ತರ ಭಾರತದಾದ್ಯಂತ ರೆಡ್ ಅಲರ್ಟ್ ಘೋಷಣೆ
ನವದೆಹಲಿ, ಮೇ 25: ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಮೂರು ದಿನ ಉಷ್ಣಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Recommended Video
ಹೀಗಾಗಿ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೂ ಜನರಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.ಕರ್ನಾಟಕದ ಕಲಬುರಗಿಯಲ್ಲೂ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅದರ ಜೊತೆಗೆ ದಖ್ಖನ್ ಪ್ರಸ್ಥಭೂಮಿಯಲ್ಲಿರುವ ನೆರೆಯ ಆಂಧ್ರದ ರಾಯಲಸೀಮಾ, ಯಾಣಂ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಛತ್ತೀಸ್ಗಢ, ಒಡಿಶಾ, ರಾಜಸ್ಥಾನ, ಪಂಜಾಬ್,ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿಯೂ ಬಿಸಿಗಾಳಿ ಬೀಸಲಿದೆ ಎಂದು ಐಎಂಡಿ ಎಚ್ಚರಿಸಿದೆ.
ಕಲಬುರಗಿಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 44.4 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗಿತ್ತು. ದೇಶದ ಹಲವೆಡೆ ಗರಿಷ್ಠ ಉಷ್ಠಾಂಶ ಏರಿಕೆಯಾಗಿದೆ. ಪಶ್ಚಿಮ ರಾಜಸ್ಥಾನದ ಚುರುವಿನಲ್ಲಿ 47.4 ಡಿಗ್ರಿ ಸೆ. ದಾಖಲಾಗಿತ್ತು. ಕಲಬುರಗಿಯಲ್ಲಿ ಭಾನುವಾರ ಬಿಸಿಲಿನ ಝಳ ಜೋರಾಗಿಯೇ ಇತ್ತು.
ಇಲ್ಲಿ ರಾಜ್ಯದ ಅತಿ ಗರಿಷ್ಠ 44.5 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ಗರಿಷ್ಠ ತಾಪ ಮಾನದಲ್ಲಿ 4.2 ಡಿಗ್ರಿ ಸೆ. ಹೆಚ್ಚಳವಾಗಿದೆ. ರಾಯಚೂರಿನಲ್ಲಿ 43 ಡಿಗ್ರಿ ಸೆ. ಮತ್ತು ವಿಜಯಪುರದಲ್ಲಿ 41.8 ಡಿ.ಸೆ. ತಾಪಮಾನ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

ಇನ್ನೊಂದು ದಿನದಲ್ಲಿ ಉಷ್ಣಾಂಶ 47 ಡಿಗ್ರಿ ಏರಿಕೆ
ಈಗಾಗಲೇ ದೇಶದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶ 45-46 ಡಿಗ್ರಿ ತಲುಪಿದೆ ಮೇ 26-27ರ ಹೊತ್ತಿಗೆ 47 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.

ಉಷ್ಣಗಾಳಿಯ ವೇಗ ಏನು?
ಉಷ್ಣಗಾಳಿಯ ವೇಗ ಪ್ರತಿ ಗಂಟೆಗೆ 20 ಕಿ.ಮೀ ಇರುತ್ತದೆ. ದೆಹಲಿ, ಪಂಜಾಬ್, ಹರ್ಯಾಣಾ, ಚಂಡೀಗಢ, ರಾಜಸ್ಥಾನದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ ಈಗ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ಇದೆ.

ಬಿಸಿಗಾಳಿ ಎಂದರೆ ಚಂಡಮಾರತವಲ್ಲ
ಬಿಸಿಗಾಳಿ ಎಂದರೆ ಚಂಡಮಾರುತದ ಮಾದರಿಯಲ್ಲಿ ವೇಗವಾಗಿ ಬೀಸುವುದಿಲ್ಲ, ಬೀಸುವ ಗಾಳಿಯಲ್ಲಿ ಉಷ್ಣಾಂಶ ಹೆಚ್ಚಿದ್ದು, ತೀವ್ರ ಸೆಕೆಯ ಅನುಭವವಾಗುತ್ತದೆ. ಹಾಗಾಗಿ ವಯೋವೃದ್ಧರು ಮತ್ತು ಮಕ್ಕಳು ಹಗಲಿನ ವೇಳೆಯಲ್ಲಿ ಹೊರಗೆ ಸುತ್ತಾಡುವುದನ್ನು ನಿಯಂತ್ರಿಸಿದರೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಹೆಚ್ಚಿನ ಪ್ರಮಾಣದಲ್ಲಿ ದ್ರವ ರೂಪದ ಆಹಾರ ಮತ್ತು ನೀರು ಕುಡಿಯುವುದು ಉತ್ತಮ.

ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಳ
ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದೆ. ಅದರಂತೆ ಗರಿಷ್ಠ ಉಷ್ಣಾಂಶದ ಪ್ರಮಾಣ ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಿದೆ.ಹಾಗಾಗಿ ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಉತ್ತರ ಭಾರತ ಹಾಗೂ ರಾಯಲ್ಸೀಮಾ ಪ್ರದೇಶದ ರಾಜ್ಯಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಟಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications