Get Updates
Get notified of breaking news, exclusive insights, and must-see stories!

ಬಿಸಿ ಗಾಳಿ ಭಯ: ಉತ್ತರ ಭಾರತದಾದ್ಯಂತ ರೆಡ್‌ ಅಲರ್ಟ್ ಘೋಷಣೆ

ನವದೆಹಲಿ, ಮೇ 25: ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಮೂರು ದಿನ ಉಷ್ಣಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Recommended Video

      ದೇವಸ್ಥಾನಕ್ಕೆ ಹೋಗ್ಬೆಕಾಗಿಲ್ಲ ಇನ್ಮುಂದೆ ದೇವ್ರೇ ನಿಮ್ಮ ಮನೆಗೆ ಬರ್ತಾನೆ | Oneindia Kannada

      ಹೀಗಾಗಿ ಮಧ್ಯಾಹ್ನ 1 ರಿಂದ ಸಂಜೆ 5 ಗಂಟೆಯವರೆಗೂ ಜನರಿಗೆ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ.ಕರ್ನಾಟಕದ ಕಲಬುರಗಿಯಲ್ಲೂ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

      ಅದರ ಜೊತೆಗೆ ದಖ್ಖನ್ ಪ್ರಸ್ಥಭೂಮಿಯಲ್ಲಿರುವ ನೆರೆಯ ಆಂಧ್ರದ ರಾಯಲಸೀಮಾ, ಯಾಣಂ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾ, ರಾಜಸ್ಥಾನ, ಪಂಜಾಬ್‌,ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿಯೂ ಬಿಸಿಗಾಳಿ ಬೀಸಲಿದೆ ಎಂದು ಐಎಂಡಿ ಎಚ್ಚರಿಸಿದೆ.

      ಕಲಬುರಗಿಯಲ್ಲಿ ಭಾನುವಾರ ಗರಿಷ್ಠ ಉಷ್ಣಾಂಶ 44.4 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿತ್ತು. ದೇಶದ ಹಲವೆಡೆ ಗರಿಷ್ಠ ಉಷ್ಠಾಂಶ ಏರಿಕೆಯಾಗಿದೆ. ಪಶ್ಚಿಮ ರಾಜಸ್ಥಾನದ ಚುರುವಿನಲ್ಲಿ 47.4 ಡಿಗ್ರಿ ಸೆ. ದಾಖಲಾಗಿತ್ತು. ಕಲಬುರಗಿಯಲ್ಲಿ ಭಾನುವಾರ ಬಿಸಿಲಿನ ಝಳ ಜೋರಾಗಿಯೇ ಇತ್ತು.

      ಇಲ್ಲಿ ರಾಜ್ಯದ ಅತಿ ಗರಿಷ್ಠ 44.5 ಡಿಗ್ರಿ ಸೆ. ತಾಪಮಾನ ದಾಖಲಾಗಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ಗರಿಷ್ಠ ತಾಪ ಮಾನದಲ್ಲಿ 4.2 ಡಿಗ್ರಿ ಸೆ. ಹೆಚ್ಚಳವಾಗಿದೆ. ರಾಯಚೂರಿನಲ್ಲಿ 43 ಡಿಗ್ರಿ ಸೆ. ಮತ್ತು ವಿಜಯಪುರದಲ್ಲಿ 41.8 ಡಿ.ಸೆ. ತಾಪಮಾನ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

      ಇನ್ನೊಂದು ದಿನದಲ್ಲಿ ಉಷ್ಣಾಂಶ 47 ಡಿಗ್ರಿ ಏರಿಕೆ

      ಇನ್ನೊಂದು ದಿನದಲ್ಲಿ ಉಷ್ಣಾಂಶ 47 ಡಿಗ್ರಿ ಏರಿಕೆ

      ಈಗಾಗಲೇ ದೇಶದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶ 45-46 ಡಿಗ್ರಿ ತಲುಪಿದೆ ಮೇ 26-27ರ ಹೊತ್ತಿಗೆ 47 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ.

      ಉಷ್ಣಗಾಳಿಯ ವೇಗ ಏನು?

      ಉಷ್ಣಗಾಳಿಯ ವೇಗ ಏನು?

      ಉಷ್ಣಗಾಳಿಯ ವೇಗ ಪ್ರತಿ ಗಂಟೆಗೆ 20 ಕಿ.ಮೀ ಇರುತ್ತದೆ. ದೆಹಲಿ, ಪಂಜಾಬ್‌, ಹರ್ಯಾಣಾ, ಚಂಡೀಗಢ, ರಾಜಸ್ಥಾನದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದೆಹಲಿಯಲ್ಲಿ ಈಗ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ಇದೆ.

      ಬಿಸಿಗಾಳಿ ಎಂದರೆ ಚಂಡಮಾರತವಲ್ಲ

      ಬಿಸಿಗಾಳಿ ಎಂದರೆ ಚಂಡಮಾರತವಲ್ಲ

      ಬಿಸಿಗಾಳಿ ಎಂದರೆ ಚಂಡಮಾರುತದ ಮಾದರಿಯಲ್ಲಿ ವೇಗವಾಗಿ ಬೀಸುವುದಿಲ್ಲ, ಬೀಸುವ ಗಾಳಿಯಲ್ಲಿ ಉಷ್ಣಾಂಶ ಹೆಚ್ಚಿದ್ದು, ತೀವ್ರ ಸೆಕೆಯ ಅನುಭವವಾಗುತ್ತದೆ. ಹಾಗಾಗಿ ವಯೋವೃದ್ಧರು ಮತ್ತು ಮಕ್ಕಳು ಹಗಲಿನ ವೇಳೆಯಲ್ಲಿ ಹೊರಗೆ ಸುತ್ತಾಡುವುದನ್ನು ನಿಯಂತ್ರಿಸಿದರೆ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಹೆಚ್ಚಿನ ಪ್ರಮಾಣದಲ್ಲಿ ದ್ರವ ರೂಪದ ಆಹಾರ ಮತ್ತು ನೀರು ಕುಡಿಯುವುದು ಉತ್ತಮ.

      ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಳ

      ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಳ

      ವರ್ಷದಿಂದ ವರ್ಷಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದೆ. ಅದರಂತೆ ಗರಿಷ್ಠ ಉಷ್ಣಾಂಶದ ಪ್ರಮಾಣ ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಿದೆ.ಹಾಗಾಗಿ ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ಉತ್ತರ ಭಾರತ ಹಾಗೂ ರಾಯಲ್‌ಸೀಮಾ ಪ್ರದೇಶದ ರಾಜ್ಯಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಟಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+