Breaking ತೀವ್ರ ಚಳಿ: ದೆಹಲಿ ಖಾಸಗಿ ಶಾಲೆಗಳಿಗೆ ಜ.15ರವರೆಗೆ ರಜೆ ಘೋಷಿಸಿದ ಶಿಕ್ಷಣ ನಿರ್ದೇಶನಾಲಯ
ನವದೆಹಲಿ, ಜನವರಿ 08: ರಾಷ್ಟ್ರ ರಾಜಧಾನಿ ನವದೆಹಲಿ ದಿನೇ ದಿನ ಚಳಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ತಕ್ಷಣದಿಂದ ಜನವರಿ 15ರವರೆಗೆ ರಜೆ ಘೋಷಿಸಿ ಶಿಕ್ಷಣ ನಿರ್ದೇಶನಾಲಯ ಭಾನುವಾರ ಆದೇಶ ಹೊರಡಿಸಿದೆ.
ನವದೆಹಲಿ ಕೆಲವು ವಾರಗಳಿಂದಲೂ ನಿರಂತರವಾಗಿ ತೀವ್ರ ಚಳಿಗೆ ತತ್ತರಿಸಿ ಹೋಗಿದೆ. ಇಂದು (ಜ.8) ಭಾನುವಾರ ದೆಹಲಿಯ ಸಫ್ದರ್ಜಂಗ್ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್ಗೆ ತೀವ್ರ ಹಂತಕ್ಕೆ ಇಳಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಜನವರಿ 15ರವರೆಗೆ ದೆಹಲಿಯ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೆಹಲಿ ಸರ್ಕಾರದ ಸೂಚನೆಯ ಮೇರೆಗೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದೆ.

ಖಾಸಗಿ ಶಾಲೆಯ 9ನೇ ತರಗತಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿವೆ. ರಜೆ ಇದ್ದರೂ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುವುದು ಎಂದು ಶಿಕ್ಷಣ ನಿರ್ದೇಶನಾಲಯ ಹೇಳಿದೆ.
ಭಾನುವಾರ ಬೆಳಗ್ಗೆ ದೆಹಲಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿತ್ತು. ಎದುರಿನ ವ್ಯಕ್ತಿ ಕಾಣದಂತೆ ಮಂಜು ಕವಿದ ವಾತಾವರಣ ಕಂಡು ಬಂತು. ಇಲ್ಲಿನ ಜನರು ತೀವ್ರ ಚಳಿಗೆ ತತ್ತರಿಸಿ ಹೋಗಿದ್ದಾರೆ. ಬೆಳಗ್ಗೆ ಯಾರು ಸಹ ಮನೆಯಿಂದ ಹೊರ ಬರುತ್ತಿಲ್ಲ. ಈ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇತರೆಡೆಗೆ ಪ್ರಯಾಣಿ ಕೈಗೊಳ್ಳಬೇಕಿದ್ದ ಸುಮಾರು 20 ವಿಮಾನಗಳ ಹಾರಾಟದಲ್ಲಿ ಸ್ಥಗಿತಗೊಂಡಿತ್ತು ಎನ್ನಲಾಗಿದೆ.
ವಿಮಾನವಷ್ಟೇ ಅಲ್ಲದೇ ಮಂಜಿನ ವಾತಾವರಣದಿಂದಾಗಿ 42 ರೈಲುಗಳು ಸಂಚಾರವು ಸಮಯಕ್ಕೆ ಸರಿಯಾಗಿ ನಡೆದಿಲ್ಲ ಎಂದು ಉತ್ತರ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ದೆಹಲಿ ಭಾಗದಲ್ಲಿ ಚಳಿ ಹೆಚ್ಚಾಗುತ್ತಲೆ ಇದೆ. ಇದು ಹೀಗೆ ಮುಂದುವರಿಯವ ನಿರೀಕ್ಷೆ ಇದೆ. ಈ ಕಾರಣಕ್ಕೆ ಜನರು ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ದೆಹಲಿ ಸರ್ಕಾರ ಮನವಿ ಮಾಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications