IMD Weather Forecast: ಅಕ್ಟೋಬರ್ 11ರವರೆಗೆ ಈ ಭಾಗಗಳಲ್ಲಿ ಗುಡುಗು ಸಹಿತ ರಣಮಳೆ...Rain Alert
ಬೆಂಗಳೂರು, ಅಕ್ಟೋಬರ್ 06: ಹಿಂಗಾರು ಮಳೆ ಆರಂಭವಾಗುವ ಮೊದಲೇ ದೇಶಾದ್ಯಂತ ಭಾರೀ ಮಳೆ ಅಬ್ಬರ ಮತ್ತೆ ಶುರುವಿಟ್ಟುಕೊಂಡಿದೆ. ಮಳೆ ತೀವ್ರಗೊಳ್ಳಲು ಅರಬ್ಬಿ ಸಮುದ್ರ ಮಟ್ಟದಲ್ಲಿ ಸೃಷ್ಟಿಯಾಗಿರುವ "ಶಕ್ತಿ' ಚಂಡಮಾರುತದ ಪ್ರಭಾವವೇ ಕಾರಣವಾಗಿದೆ. ಮುಂದಿನ ಒಂದು ವಾರಗಳ ಕಾಲ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ರಣ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದ ಮಧ್ಯ-ಪಶ್ಚಿಮ ಹಾಗೂ ಉತ್ತರ-ಪಶ್ಚಿಮ ಭಾಗದಲ್ಲಿ ರೂಪಗೊಂಡಿದ್ದ ತೀವ್ರ ಚಂಡಮಾರುತ "ಶಕ್ತಿ' ನಿಧಾನವಾಗಿ ದುರ್ಬಲಗೊಂಡು ಈಗ ಸೈಕ್ಲೋನಿಕ್ ಸ್ಟಾರ್ಮ್ ಆಗಿ ಬದಲಾಗಿದೆ. ಒಮಾನ್ ಪ್ರದೇಶದಿಂದ 200 ಕಿಮೀ ಆಗ್ನೇಯ ಅರಬ್ಬಿ ಸಮುದ್ರದಲ್ಲಿ ನೆಲಗೊಂಡಿದೆ. ಪಾಕಿಸ್ತಾನ ಕರಾಚಿಯಿಂದ 910 ಕಿಮೀ ದಕ್ಷಿಣ-ಪಶ್ಚಿಮ ಮತ್ತು ದ್ವಾರಕಾದಿಂದ 950 ಕಿಮೀ ಪಶ್ಚಿಮ-ದಕ್ಷಿಣ-ಪಶ್ಚಿಮ ದಿಕ್ಕಿನಲ್ಲಿ ಇದೆ. ಅಕ್ಟೋಬರ್ 7ರಂದು ಈ ಚಂಡಮಾರುತ ಕಡಿಮೆ ಒತ್ತಡದ ಪ್ರದೇಶವಾಗಿ ದುರ್ಬಲಗೊಳ್ಳುವ ಲಕ್ಷಣ ಇದೆ.

ಎಲ್ಲೆಲ್ಲಿ ಭಾರೀ ಮಳೆ ಆಗುತ್ತೆ?
ಉತ್ತರ ಅಫ್ಘಾನಿಸ್ತಾನ್ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ 3 ರಿಂದ 6 ಕಿಮೀ ಎತ್ತರದಲ್ಲಿ ಸ್ಟ್ರಫ್ ಉಂಟಾಗಿದೆ. ಇದರ ಗಾಳಿಯ ವೇಗ ತೀವ್ರಗೊಳ್ಳುತ್ತಿದೆ. ಈಶಾನ್ಯ ಬಿಹಾರ ಪ್ರದೇಶದಲ್ಲಿ ಈ ಬಿರುಗಾಳಿ ಮುಂದುವರಿದಿದೆ. ಅದೇ ರೀತಿ ದಕ್ಷಿಣ ತಮಿಳುನಾಡು ಕರಾವಳಿ ಬಳಿ ಬಂಗಾಳಕೊಲ್ಲಿಯ ಸುಳಿಗಾಳಿ ಎದ್ದಿದೆ. ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಪ್ರದೇಶಗಳಲ್ಲಿ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ. ಮುಂದಿನ ಮೂರು-ನಾಲ್ಕು ದಿನ ಈ ಮಳೆ ಮುಂದುವರಿಯಲಿದ್ದು, ಪ್ರತಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ಅಕ್ಟೋಬರ್ 7ರಿಂದ 11ರವರೆಗೆ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ಉತ್ತರ ಪ್ರದೇಶದ ಪಶ್ಚಿಮ ಭಾಗಗಳಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಯೂ ಆಗಲಿದೆ. ಅಷ್ಟೇ ಅಲ್ಲದೇ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಅತ್ಯಧಿಕ ಭಾರೀ ಮಳೆ ಆಗಲಿದ್ದು, "ಯೆಲ್ಲೋ ಅಲರ್ಟ್' ನೀಡಲಾಗಿದೆ.
ಕರ್ನಾಟಕ ಸೇರಿ ಕರಾವಳಿ ರಾಜ್ಯಗಳಿಗೆ ಭಾರೀ ಮಳೆ
ಇನ್ನೂ ಅಕ್ಟೋಬರ್ 9ರವರೆಗೆ ತಮಿಳುನಾಡು, ಕೇರಳ, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ರಣ ಮಳೆ ಆಗಲಿದೆ. ಗಂಟೆಗೆ ಗರಿಷ್ಠ 40 ಕಿಲೋ ಮೀಟರ್ ವೇಗದ ಗಾಳಿ ಸಹಿತ ಮಳೆ ಅಬ್ಬರಿಸಲಿದೆ. ಕೇರಳ ಮತ್ತು ತಮಿಳುನಾಡು ಕರಾವಳಿಯಲ್ಲಿ ಹೆಚ್ಚಿನ ಮಳೆ ಮುಂದುವರಿಯುವ ನಿರೀಕ್ಷೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications