Get Updates
Get notified of breaking news, exclusive insights, and must-see stories!

ಮುಂಗಾರು: ಭಾರೀ ಮಳೆಗೆ ನಿದ್ದೆಯಿಂದ ಎದ್ದ ದೆಹಲಿ, ದೇಶದ ಹಲವೆಡೆ ವರುಣನ ಆರ್ಭಟ

ನವದೆಹಲಿ, ಜುಲೈ. 09: ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಮತ್ತು ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಶನಿವಾರ ಮತ್ತು ಭಾನುವಾರ ಬೆಳಗ್ಗೆ ಭಾರೀ ಮಳೆಯಾಗಿದ್ದು, ಅನೇಕ ಸ್ಥಳಗಳು ಜಲಾವೃತವಾಗಿದ್ದು, ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಲಾಹುಲ್ ಮತ್ತು ಸ್ಪಿತಿ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಮತ್ತು ಹಿಮಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿದ್ದು, ಭಾನುವಾರ ದೆಹಲಿಗೆ "ಹಳದಿ" ಎಚ್ಚರಿಕೆ ನೀಡಲಾಗಿದೆ.

ಕೇರಳದ ಕೆಲವು ಭಾಗಗಳಲ್ಲಿಯೂ ಸಹ ಭಾರೀ ಮಳೆ ಮುಂದುವರೆದಿದೆ, ಇದರಿಂದಾಗಿ ಟ್ರಾಫಿಕ್ ಅಸ್ತವ್ಯಸ್ತತೆ ಮತ್ತು ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಕಾಶ್ಮೀರದಲ್ಲಿ ಝೀಲಂ ನದಿ ಮತ್ತು ಅದರ ಉಪನದಿಗಳು ಭಾರೀ ಮಳೆಯಿಂದ ತುಂಬಿದ್ದು, ನೀರಿನ ಮಟ್ಟದಲ್ಲಿ ತ್ವರಿತ ಏರಿಕೆ ಕಂಡಿದೆ. ಜಲಮೂಲಗಳ ಬಳಿ ವಾಸಿಸುವ ಜನರು ಜಾಗರೂಕರಾಗಿರಲು ಮತ್ತು ನೀರಿನ ಸಮೀಪಕ್ಕೆ ಹೋಗಬಾರದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Heavy Rain in Delhi

ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ಪಂಜಾಬ್ ಮತ್ತು ಕರ್ನಾಟಕದ ಕೆಲವು ಭಾಗಗಳು ಭಾರೀ ಮಳೆಗೆ ಸಾಕ್ಷಿಯಾಗಿವೆ. ಭೂಕುಸಿತ ಮತ್ತು ಹಠಾತ್ ಪ್ರವಾಹಗಳು ವಿವಿಧ ಪ್ರದೇಶಗಳಲ್ಲಿ ರಸ್ತೆಗಳನ್ನು ಬಂದ್ ಮಾಡಿವೆ.

ಸೋಮವಾರದವರೆಗೆ ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕ ಪ್ರದೇಶಗಳಲ್ಲಿ ಮತ್ತು ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ದೆಹಲಿ ಮತ್ತು ಪಂಜಾಬ್‌ನಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Heavy Rain in Delhi

ದೆಹಲಿ: 21 ವರ್ಷಗಳಲ್ಲೇ ಜುಲೈನಲ್ಲಿ ಅತಿ ಹೆಚ್ಚು ಮಳೆ

ದೆಹಲಿಯು 21 ವರ್ಷಗಳಲ್ಲಿ ಜುಲೈನಲ್ಲಿ ಭಾರೀ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಶನಿವಾರ 126.1 ಮಿಮೀ ಮಳೆಯಾಗಿದ್ದು, ರಾತ್ರಿ 8.30 ರಿಂದ ಸಂಜೆ 5.30 ರ ನಡುವೆ ಮಳೆ ದಾಖಲಾಗಿದೆ. ವರುಣನ ಆರ್ಭಟಕ್ಕೆ ರಾಜಧಾನಿಯ ಬೀದಿಗಳಲ್ಲಿ ಅವ್ಯವಸ್ಥೆಯನ್ನು ತಂದಿದೆ. ಹೀಗಾಗಿ ಹವಾಮಾನ ಇಲಾಖೆ ಶನಿವಾರ ಮಧ್ಯಾಹ್ನ ರೆಡ್ ಅಲರ್ಟ್ ನೀಡಿತ್ತು.

ಶನಿವಾರದಂತೆಯೇ, ಭಾನುವಾರ ಬೆಳಗ್ಗೆ ದೆಹಲಿಯು ಮಯೂರ್ ವಿಹಾರ್ ಹಂತ ಸೇರಿದಂತೆ ನಗರದ ಹಲವಾರು ಭಾಗಗಳಲ್ಲಿ ಜನರು ಮಳೆಯಿಂದ ಎಚ್ಚರವಾಗಿದ್ದಾರೆ. ಶನಿವಾರದ ಮಳೆಯನ್ನು 'ಅತಿ ಭಾರೀ' ವರ್ಗದಲ್ಲಿ ವರ್ಗೀಕರಿಸಲಾಗಿದೆ. ಶನಿವಾರ ಸಂಚಾರ ವಿಭಾಗಕ್ಕೆ ರಸ್ತೆ ಜಲಾವೃತ ಸಂಬಂಧ 56, ಬಿದ್ದ ಮರಗಳ ಕುರಿತು ಆರು ಹಾಗೂ ಗುಂಡಿಗಳಿಗೆ ಸಂಬಂಧಿಸಿದ ಐದು ದೂರುಗಳು ಬಂದಿವೆ.

Heavy Rain in Delhi

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಿಂಟೋ ಸೇತುವೆಯ ಅಂಡರ್‌ಪಾಸ್‌ನಲ್ಲಿ ವಾಹನ ಸಂಚಾರ ಬಂದ್‌ ಆಗಿದ್ದು, ಜಲಾವೃತವಾಗಿದೆ. ತಿಲಕ್ ಬ್ರಿಡ್ಜ್ ಅಂಡರ್‌ಪಾಸ್‌ನಿಂದಲೂ ಭಾರಿ ನೀರು ನಿಂತಿದೆ. ಪಾಂಡವನಗರ ಅಂಡರ್‌ಪಾಸ್, ಪುರಾಣ ಕ್ವಿಲಾ ರಸ್ತೆ, ದ್ವಾರಕಾ ಲಿಂಕ್ ರಸ್ತೆ, ಶಿವಮೂರ್ತಿ ಬಳಿಯ NH-48, ರೋಹ್ಟಕ್ ರಸ್ತೆ, ವಿಕಾಸ್ ಮಾರ್ಗ, ಏಮ್ಸ್ ಮೇಲ್ಸೇತುವೆ ಅಡಿಯಲ್ಲಿ, ಮೂಲ್‌ಚಂದ್ ಮೇಲ್ಸೇತುವೆ ಅಡಿಯಲ್ಲಿ, ಮದರ್ ತೆರೇಸಾ ಕ್ರೆಸೆಂಟ್-ಸರ್ದಾರ್ ಪಟೇಲ್ ಮಾರ್ಗ ಮತ್ತು ತಿಲಕ್ ಅಡಿಯಲ್ಲಿ ನೀರು ನಿಂತಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಜುಲೈನಲ್ಲಿ, ವಾಯುವ್ಯ ಭಾರತದಲ್ಲಿ ಪ್ರಸ್ತುತ ಸಾಮಾನ್ಯ ಮಾನ್ಸೂನ್ ಮಳೆ ದಾಖಲಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. "ವಾಯುವ್ಯ ಭಾರತದ ಬಹುತೇಕ ಭಾಗಗಳು ಈಗಾಗಲೇ ತಿಂಗಳ ಸಾಮಾನ್ಯ ಮಳೆಯ ಮಾರ್ಕ್ ಅನ್ನು ದಾಟಿವೆ. ಇದೇ ರೀತಿಯ ತೀವ್ರತೆಯ ಮಳೆ ಇನ್ನೂ ಎರಡು ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಕಾಣಿಸುತ್ತಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

Heavy Rain in Delhi

ಹಿಮಾಚಲ ಪ್ರದೇಶದಲ್ಲಿ ರೆಡ್ ಅಲರ್ಟ್

ಉನಾ, ಹಮೀರ್‌ಪುರ್, ಬಿಲಾಸ್‌ಪುರ್, ಚಂಬಾ, ಕಂಗ್ರಾ, ಕುಲು ಮತ್ತು ಮಂಡಿ ಏಳು ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ ಮತ್ತು ಲಾಹುಲ್ ಮತ್ತು ಸ್ಪಿತಿ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಮತ್ತು ಹಿಮಕುಸಿತಗಳ ಬಗ್ಗೆ ಎಚ್ಚರಿಕೆ ನೀಡಿದೆ. ಅತ್ಯಂತ ಭಾರೀ ಮಳೆಯ 'ಕೆಂಪು' ಎಚ್ಚರಿಕೆಯು ಒಂದು ದಿನದಲ್ಲಿ 204 ಮಿಮೀಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತದೆ.

ಕರೋಲ್‌ಬಾಗ್‌ನಲ್ಲಿ 58 ವರ್ಷದ ಮಹಿಳೆಯೊಬ್ಬರ ಮೇಲೆ ಫ್ಲಾಟ್‌ನ ಮೇಲ್ಛಾವಣಿ ಕುಸಿದು ಸಾವನ್ನಪ್ಪಿದ್ದಾರೆ. ಮಹಿಳೆ ಮನೆಯೊಳಗೆ ಇದ್ದಾಗ ಈ ಘಟನೆ ನಡೆದಿದ್ದು, ಸೀಲಿಂಗ್ ಕುಸಿದಿದೆ. ದೇಶಬಂಧು ಗುಪ್ತಾ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹತ್ಯೆಗೀಡಾದವರನ್ನು ಜ್ಞಾನ್ ಸಿಂಗ್ ಅವರ ಪತ್ನಿ ರಂಜಿತ್ ಕೌರ್ ಎಂದು ಗುರುತಿಸಲಾಗಿದೆ.

ರಾಜಸ್ಥಾನದ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತ

ರಾಜಸ್ಥಾನದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಕಳೆದ 24 ಗಂಟೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನಾಲ್ಕು ಸಾವುಗಳು ಸಂಭವಿಸಿವೆ. ರಸ್ತೆಗಳು ಜಲಾವೃತಗೊಂಡಿದ್ದರಿಂದ ಹಲವಾರು ಪ್ರದೇಶಗಳಲ್ಲಿ ಜನ ಜೀವನವು ಅಸ್ತವ್ಯಸ್ತಗೊಂಡಿದೆ. ಪ್ರದೇಶದಲ್ಲಿ ನಿರಂತರ ಮಳೆಯ ನಂತರ ಸಿಕಾರ್ ಜಲಾವೃತವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+