ಕೇರಳದ ಮಳೆಗೆ ಕಂಗಾಲಾದ ಬೆಂಗಳೂರಿನ ಅಯ್ಯಪ್ಪ ಮಾಲಾಧಾರಿ ತಂಡ
"ಕೇರಳವೇ ಬಚ್ಚಲು ಮನೆ ಆದಂತೆ ಆಗಿಬಿಟ್ಟಿದೆ. ಕೊಟ್ಟಾಯಂನ ರೈಲ್ವೆ ಸ್ಟೇಷನ್ ಬಿಟ್ಟ ಕ್ಷಣದಿಂದ ಮಳೆಯೋ ಮಳೆ. ಶಬರಿ ಮಲೆಗೆ ಹೋಗುವ ದಾರಿಯಲ್ಲಿ ನೀಲಕಲ್ ಅಂತ ಸಿಗುತ್ತದೆ. ಅದಕ್ಕೆ ಆರೇಳು ಕಿಲೋಮೀಟರ್ ದೂರದಲ್ಲಿ ಲ್ಯಾಂಡ್ ಸ್ಲೈಡಿಂಗ್ (ಭೂ ಕುಸಿತ) ಆಗಿದೆ. ಉದ್ದಕ್ಕೂ ವಾಹನಗಳು ನಿಂತಿವೆ."
-ಹೀಗೆ ಒಂದೇ ಉಸುರಿನಲ್ಲಿ ಮಾತನಾಡಿದರು ಎಸ್.ಅನಿಲ್. ಬೆಂಗಳೂರಿನ ಹೆಮ್ಮಿಗೆಪುರದ ಗೊಲ್ಲಹಳ್ಳಿಯಲ್ಲಿ ಅವರ ಮನೆ. ಕ್ಯಾಪ್ ಜೆಮಿನಿ ಬಿಪಿಒ ಕಂಪೆನಿಯ ಉದ್ಯೋಗಿಯಾದ ಅವರು ಶನಿವಾರ ರಾತ್ರಿ ಬೆಂಗಳೂರಿನಿಂದ ಶಬರಿಮಲೆಗೆ ಹೊರಟಿದ್ದರು. ಭಾನುವಾರ ಬೆಳಗ್ಗೆ ಕೊಟ್ಟಾಯಂನ ರೈಲು ನಿಲ್ದಾಣದಲ್ಲಿ ಇಳಿದ ಕ್ಷಣದಿಂದ ಬೀಳುತ್ತಿರುವ ಮಳೆಗೆ ಅವರ ಇಡೀ ತಂಡ ಕಂಗಾಲಾಗಿದೆ.

ತಮ್ಮ ಜತೆಗೆ ಅಡುಗೆಯವರನ್ನು ಕರೆದುಕೊಂಡು ಹೋಗಿದ್ದರೂ ಎಲ್ಲಿಯೂ ಅಡುಗೆ ಮಾಡಿಕೊಳ್ಳಲು ಸಾಧ್ಯವಾಗದಂಥ ವಾತಾವರಣ ಎದುರಾಗಿದೆ. ಶಬರಿ ಮಲೆಗೆ ಹೋಗುವ ದಾರಿಯಲ್ಲಿ ನೀಲಕಲ್ ಎಂಬ ಸ್ಥಳಕ್ಕೆ ಆರೇಳು ಕಿಲೋಮಿಟರ್ ಹಿಂದೆ ಭೂ ಕುಸಿತವಾಗಿ ಮರಗಳು ಬುಡಸಮೇತ ರಸ್ತೆಗೆ ಬಿದ್ದಿವೆ. ಸುಮಾರು ಒಂದೆರಡು ಗಂಟೆ ಕಾಲ ಶ್ರಮ ಪಟ್ಟು ಸಾರ್ವಜನಿಕರೇ ತೆರವುಗೊಳಿಸಿದ್ದಾರೆ.

ಸಂಜೆ ನಾಲ್ಕರ ಹೊತ್ತಿಗೆ ಮಂಜು ಮುಸುಕಿದ ವಾತಾವರಣ ಇದೆ. ಶಬರಿ ಮಲೆನಲ್ಲಿ ಬೆಟ್ಟದ ಮೇಲೆ ಅಡುಗೆ ಮಾಡಿಕೊಳ್ಳುವಂತಿಲ್ಲ. ಬೆಟ್ಟದ ಕೆಳಗೆ ಅಡುಗೆ ಮಾಡಿಕೊಳ್ಳಬೇಕಿತ್ತು. ಆದರೆ ನೀರಿನ ವ್ಯವಸ್ಥೆಗೆ ಸಮಸ್ಯೆಯಾಗಿದೆ. ಪಂಪಾ ನದಿ ಉಕ್ಕಿ ಹರಿಯುತ್ತಿದ್ದು, ಆ ನೀರನ್ನು ಬಳಸಿಕೊಳ್ಳುವುದಕ್ಕೂ ಸಾಧ್ಯವಾಗುತ್ತಿಲ್ಲ ಎಂದು ಅನಿಲ್ ಒನ್ಇಂಡಿಯಾ ಕನ್ನಡ ಜತೆಗೆ ಮಾತನಾಡಿದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications