Get Updates
Get notified of breaking news, exclusive insights, and must-see stories!

ವಾಯುಭಾರ ಕುಸಿತ: ಆಂಧ್ರ, ಒಡಿಶಾಗೆ ಚಂಡಮಾರುತ ಭೀತಿ

ಒಡಿಶಾ, ಅಕ್ಟೋಬರ್ 10: ಒಡಿಶಾ ಹಾಗೂ ಆಂಧ್ರಪ್ರದೇಶಕ್ಕೆ ಟಿಟ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆಯನ್ನು ಭುವನೇಶ್ವರ ಹವಾಮಾನ ಕೇಂದ್ರ ನೀಡಿದೆ.

ಗಜಪತಿ, ಗಂಜಾಮ್, ಪುರಿ, ಜಗತ್‌ಸಿಂಗ್‌ಪುರ, ಭದ್ರಕ್ ಹಾಗೂ ಇನ್ನಿತರೆ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಒಡಿಶಾಕ್ಕೆ ಭಾರಿ ಚಂಡಮಾರುತ ಅಪ್ಪಳಿಸುವ ಎಲ್ಲಾ ಸಾಧ್ಯತೆಗಳಿವೆ. ಈಗಾಗಲೇ ಒಡಿಶಾ ಕರಾವಳಿಯನ್ನು ಪ್ರವೇಶಿಸಿದೆ.ಬಂಗಾಳಕೊಲ್ಲಿಯಲ್ಲಿ ಉಗಮವಾಗಿರುವ ಈ ಚಂಡಮಾರುತಕ್ಕೆ 'ಟಿಟ್ಲಿ' ಎಂದು ಹೆಸರು ನೀಡಲಾಗಿದೆ.

Heavy rainfall forecast in Odisha and AP

ಅಷ್ಟೇ ಅಲ್ಲದೆ ಅರಬ್ಬಿ ಸಮುದ್ರದಲ್ಲಿ ಲುಬಾನ್ ಚಂಡಮಾರುತ ಅಪ್ಪಳಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಮಂಗಳೂರು ಭಾಗಗಳಲ್ಲೂ ಚಂಡಮಾರುತ ಭೀತಿ ಎದುರಾಗಿದೆ. ತೀರದಿಂದ 500 ಕಿ.ಮೀ ದೂರದಲ್ಲಿದ್ದ ಚಂಡಮಾರುತವು 10 ಕಿ,ಮೀ ವೇಗದಲ್ಲಿ ಆಂಧ್ರಪ್ರದೇಶದ ಕಡೆ ಚಲಿಸುತ್ತಿದೆ. ಆದ್ದರಿಂದ ಮುಂದಿನ 24 ಗಂಟೆಯೊಳಗಾಗಿ ಇನ್ನುಷ್ಟು ವೇಗವನ್ನು ಪಡೆದುಕೊಂಡು ಭಾರಿ ಮಳೆಯಾಗಬಹುದು ಎಂಬ ಮಾಹಿತಿ ಲಭ್ಯವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+