ಕೇರಳದಲ್ಲಿ ಭಾರೀ ಮಳೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್- ಕರಾವಳಿ ಕರ್ನಾಟಕದಲ್ಲಿಯೂ ಮಳೆ ಮುನ್ಸೂಚನೆ
ತಿರುವನಂತಪುರಂ, ಸೆಪ್ಟೆಂಬರ್ 15: ಕೇರಳದ ದಕ್ಷಿಣ ವಲಯದ ಮೂರು ಜಿಲ್ಲೆಗಳನ್ನು ಹೊರತುಪಡಿಸಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಪೂರ್ವ ಮಧ್ಯಪ್ರದೇಶದ ಮೇಲಿನ ಚಂಡಮಾರುತದ ಪರಿಚಲನೆಯ ಪ್ರಭಾವದಿಂದಾಗಿ ಕೇರಳದಲ್ಲಿ ಪ್ರತ್ಯೇಕವಾದ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಕೇರಳದಲ್ಲಿ ಸೆ.21ರವರೆಗೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನೈಋತ್ಯ ಮಾನ್ಸೂನ್ ಕೊರತೆಯು ( ಈ ತಿಂಗಳ ಆರಂಭದಿಂದ ) ಶೇಕಡಾ 49 ರಿಂದ ಶೇಕಡಾ 40 ಕ್ಕೆ ಕಡಿಮೆಯಾಗಿದೆ. ಕೇರಳದಲ್ಲಿ ಸರಾಸರಿ 1888.2 ಮಿ.ಮೀ ಮಳೆಯಾಗಬೇಕಿತ್ತು. ಸೆಪ್ಟೆಂಬರ್ 15ರ ವರೆಗೆ ಕೇವಲ 1126.7 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನೈರುತ್ಯ ಮುಂಗಾರು ಚುರುಕಾಗಿದೆ. ಕಣ್ಣೂರು ಜಿಲ್ಲೆಯ ಕಣ್ಣೂರು ತಲಶ್ಶೇರಿ, ಕಾಸರಗೋಡು ಜಿಲ್ಲೆಯ ಹೊಸದುರ್ಗ ಮತ್ತು ಬಾಯಾರ್ನಲ್ಲಿ 7 ಸೆಂ.ಮೀ ಭಾರೀ ಮಳೆಯಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ 3-4 ದಿನಗಳಲ್ಲಿ ಕಡಿಮೆ ಒತ್ತಡದ ಪ್ರದೇಶವು ಪಶ್ಚಿಮ ಮಧ್ಯಪ್ರದೇಶ ಮತ್ತು ಗುಜರಾತ್ನಾದ್ಯಂತ ಚಲಿಸುವ ಸಾಧ್ಯತೆಯಿದೆ. ಇದು ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಳೆಯನ್ನು ತರಲಿದೆ ಎಂದು ಹೇಳಲಾಗುತ್ತಿದೆ.
ಇದೇ ರೀತಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕದಲ್ಲಿ ನಿನ್ನೆ ಸುರಿದ ಮಳೆ ಪ್ರಮಾಣ
ಉತ್ತರ ಕನ್ನಡ: 165.5 ಮಿ.ಮೀ
ದಕ್ಷಿಣ ಕನ್ನಡ: 103 ಮಿ.ಮೀ
ಶಿವಮೊಗ್ಗ: 56.5 ಮಿ.ಮೀ
ಉಡುಪಿ: 54.5 ಮಿ.ಮೀ
ಕೊಡಗು: 43.5 ಮಿ.ಮೀ
ಹಾಸನ: 38 ಮಿ.ಮೀ
ಚಿಕ್ಕಮಗಳೂರು: 34.5 ಮಿ.ಮೀ
ಹೆಚ್ಚು ಮಳೆ ಬಿದ್ದ ಸ್ಥಳಗಳು
ದೇವಗಿರಿ: 165.5 ಮಿ.ಮೀ
ಹಳದೀಪುರ: 132.5 ಮಿ.ಮೀ
ಕಡ್ಲೆ: 130.5 ಮಿ.ಮೀ
ಕಡತೋಕ: 127 ಮಿ.ಮೀ
ಚಂದಾವರ: 109.5 ಮಿ.ಮೀ
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications