ತಮಿಳುನಾಡಿನಲ್ಲಿ ಮಹಾಮಳೆ: ಶಾಲಾ-ಕಾಲೇಜು ಬಂದ್; ಹಲವೆಡೆ ರೆಡ್ ಅಲರ್ಟ್
ಭಾರತದ ದಕ್ಷಿಣ ಭಾಗಗಳಲ್ಲಿ ಮತ್ತೆ ಮಳೆಯ ಅರ್ಭಟ ಜೋರಾಗಿದೆ. ಇದರಿಂದಾಗಿ ಜನಜೀವನ ನರಕಕ್ಕೆ ತಳ್ಳಿದಂತಾಗಿದೆ. ಮಳೆಗಾಲದಲ್ಲಿನ ಮುಂಗಾರಿನ ಪರಿಣಾಮದಿಂದ ಜನ ಇನ್ನೂ ಚೇತರಿಸಿಕೊಳ್ಳಲಾಗುತ್ತಿಲ್ಲ. ಇನ್ನೇನು ಮಳೆಗಾಲ ಮುಗಿತು ಅನ್ನೋ ಹೊತ್ತಿಗೆ ವರುಣ ಮತ್ತೆ ಚುರುಕುಗೊಂಡು ಅಪಾರ ಹಾನಿಯನ್ನುಂಟು ಮಾಡಿದೆ. ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಇಂದೂ ಕೂಡ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ತೀವ್ರ ಮಳೆ ಮುನ್ಸೂಚನೆ ಇರುವುದರಿಂದ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ತಮಿಳುನಾಡು ಮತ್ತು ಪುದುಚೇರಿಯ ಹಲವಾರು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿವೆ. ಕೆಲ ದಿನಗಳಿಂದ ತಮಿಳುನಾಡಿನಲ್ಲಿ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು ಜನಜೀವನ ಅಸ್ಥವ್ಯಸ್ಥಗೊಂಡಿದೆ.

ಶಾಲಾ-ಕಾಲೇಜು ಬಂದ್
ಭಾರತೀಯ ಮಾಪನ ಇಲಾಖೆ (ಐಎಂಡಿ) ಶುಕ್ರವಾರದಂದು ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುಪತ್ತೂರು, ರಾಣಿಪೇಟ್, ತಿರುವಣ್ಣಾಮಲೈ ಜಿಲ್ಲೆಗಳು ಮತ್ತು ಪುದುಚೇರಿಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲದೆ ಮಳೆಯಿಂದಾಗಿ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವರೂರು, ನಾಗಪಟ್ಟಿಣಂ, ತಂಜಾವೂರು, ವಿಲ್ಲುಪುರಂ ಮತ್ತು ಅರಿಯಲೂರು ಜಿಲ್ಲೆಗಳಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಗುಡುಗು ಮತ್ತು ಮಿಂಚು ಸಹಿತ ತೀವ್ರ ಮಳೆ
ರಾಣಿಪ್ಪೆಟ್ಟೈ ತಿರುವಣ್ಣಾಮಲೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಲ್ಲಕ್ಕುರಿಚಿ, ಕಡಲೂರು, ಅರಿಯಲೂರ್, ಪೆರಂಬಲೂರ್, ತಂಜಾವೂರು, ಮೈಲಾಡು, ತಿರುವರುರೈ, ತಿರುವರುರೈ, ರಾಣಿಪ್ಪೆಟ್ಟೈ ತಿರುವಣ್ಣಾಮಲೈನಲ್ಲಿ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ತೀವ್ರ ಮಳೆಯಾಗಲಿದೆ ಎಂದು ಭಾರತೀಯ ಮಾಪನ ಇಲಾಖೆ (IMD) ಮುನ್ಸೂಚನೆ ನೀಡಿದೆ. ತಮಿಳುನಾಡಿನ ಪುದುಕ್ಕೊಟ್ಟೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಅಲ್ಲದೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡಿನ ತಿರುವಳ್ಳೂರು ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಿದೆ.

ಬೆಳೆ ಹಾನಿಯಾಗುವ ಸಾಧ್ಯತೆ
ರೆಡ್ ಅಲರ್ಟ್ನ ಸಂಭವನೀಯ ಪರಿಣಾಮವೆಂದರೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತದೆ. ಬೆಳೆಗಳಿಗೆ ತೀವ್ರ ಹಾನಿಯಾಗುವ ಸಾಧ್ಯತೆ ಇದೆ. ಮಾತ್ರವಲ್ಲದೆ ಮರಗಳು ಧರೆಗುರುಳುವ ಸಾಧ್ಯತೆ ಕೂಡ ಇದೆ. ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಂತೆ ಪಾಂಡಿಚೇರಿಯಲ್ಲಿಯೂ ಕಳೆದ ದಿನ ಅಧಿಕ ಮಳೆಯಾಗಿದೆ. ಇದರ ಬೆನ್ನಲ್ಲೆ ಪದುಚೇರಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ಮಳೆ ರಜೆ ನೀಡಲಾಗಿದೆ.

ಕರ್ನಾಟಕದ ಹಲವೆಡೆ ಮಳೆ ಸೂಚನೆ
ಮುಂಗಾರು ಹಿಮ್ಮುಖದಿಂದ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಬೆಂಗಳೂರಿನಲ್ಲಿ ಪ್ರಾರಂಭವಾಗುವ ಲಕ್ಷಣಗಳು ಕಾಣೀಸುತ್ತಿವೆ. ಇಂದು ಮುಂಜಾನೆಯಿಂದ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಹಲವೆಡೆ ಜಿಟಿ ಜಿಟಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಕರ್ನಾಟಕದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications