ಹೆಲಿಕಾಪ್ಟರ್ ಪತನ, ವೈಷ್ಣೋದೇವಿ ಭಕ್ತರು ಸೇರಿ 7 ಜನ ಸಾವು
ಕಟ್ರಾ(ಜಮ್ಮು), ನ.23: ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರನ್ನು ಕೊಂಡೊಯ್ಯುತ್ತಿದ್ದ ಹಿಮಾಲಯನ್ ಹೆಲಿಕಾಪ್ಟರ್ ಸೋಮವಾರ ಜಮ್ಮುವಿನ ಕಟ್ರಾದಲ್ಲಿ ಪತನಗೊಂಡಿದೆ. ಪ್ರಯಾಣಿಕರು, ಮಹಿಳಾ ಪೈಲಟ್ ಒಬ್ಬರು ಸೇರಿದಂತೆ ಒಟ್ಟು ಏಳು ಜನ ಮೃತಪಟ್ಟಿದ್ದಾರೆ.
ಹಿಮಾಲಯ ಹೆಲಿ ಸರ್ವಿಸ್ ಖಾಸಗಿ ಸಂಸ್ಥೆಯ ಈ ಹೆಲಿಕಾಪ್ಟರ್ ನಲ್ಲಿ ಆರು ಮಂದಿ ಭಕ್ತರು ಪ್ರಯಾಣಿಸುತ್ತಿದ್ದರು. ಸಾಂಚಿಚಾಟ್ ನಿಂದ ರೇಯಾಸಿ ಜಿಲ್ಲೆಯ ಕಟ್ರಾಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ವಿಪರೀತ ಮಂಜು ಮುಸುಕಿದ ವಾತಾವರಣ, ಪ್ರತಿಕೂಲ ಹವಾಮಾನದ ನಡುವೆ ಹೆಲಿಕಾಪ್ಟರ್ ಸಂಚಾರ ಕಷ್ಟವಾಗಿತ್ತು. ಹೆಲಿಕಾಪ್ಟರ್ ಕೆಳಗೆ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
6 persons, including pilot, killed as chopper crashes in Katra, the base camp of Vaishnodevi shrinehttps://t.co/Mr5c8pWuqU
— TIMES NOW (@TimesNow) ನವೆಂಬರ್ 23, 2015 ಹೆಲಿಕಾಪ್ಟರ್ ಪೈಲಟ್ ಸುಮಿತ್ರಾ ವಿಜಯನ್ ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ. ಶವಗಳನ್ನು ಹೊರತೆಗೆಯಲಾಗಿದೆ. ಚಾರ್ ಧಾಮ್ ಯಾತ್ರಾಕ್ಕೂ ಕೂಡಾ ಹೆಲಿಕಾಪ್ಟರ್ ಸೇವೆ ಒದಗಿಸುತ್ತಿರುವ ಹಿಮಾಲಯನ್ ಹೆಲಿ ಸರ್ವೀಸ್ ನ ಪ್ರಕಾರ ಹೆಲಿಕಾಪ್ಟರ್ ನಲ್ಲಿನ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್ ಗೆ ಸುಮಿತ್ರಾ ಅವರು ಮುಖ್ಯ ಪೈಲಟ್ ಆಗಿದ್ದರು. ಪ್ರಾಥಮಿಕ ತನಿಖೆಯಿಂದ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬ್ಲಾಕ್ ಬಾಕ್ಸ್ ಪತ್ತೆಯಾದ ನಂತರ ನಿಜವಾದ ಕಾರಣ ತಿಳಿಯಲಿದೆ ಎಂದು ಡಿಐಜಿ ಉಧಂಪುರ್ ರಿಯಾಸಿ ಪ್ರಾಂತ್ಯದ ಸುರೀಂಧರ್ ಗುಪ್ತಾ ಹೇಳಿದ್ದಾರೆ.
Very sorry to hear about the chopper crash in Katra. My prayers are with the families of the victims. RIP
— Omar Abdullah (@abdullah_omar) November 23, 2015 ಸಮುದ್ರಮಟ್ಟದಿಂದ ಸುಮಾರು 5300 ಅಡಿ ಎತ್ತರದಲ್ಲಿರುವ ಹಿಮಾಲಯದ ತಪ್ಪಲಿನ ತ್ರಿಕೂಟ ಪರ್ವತದಲ್ಲಿರುವ ಈ ಶಕ್ತಿ ದೇಗುಲಕ್ಕೆ ಟ್ರೆಕ್ ಮಾಡಿಕೊಂಡು ಕೂಡಾ ಹೋಗಬಹುದು. ಅದರೆ, ಸುಮಾರು 8-10 ಕಿ.ಮೀ ದೂರ ನಡೆಯಲು ಆಗದ ಭಕ್ತರು ಹೆಲಿಕಾಪ್ಟರ್ ಸೇವೆಯನ್ನು ಬಯಸುತ್ತಾರೆ. ಇಲ್ಲಿಗೆ ಕಟ್ರಾ ಮುಖ್ಯ ಪಟ್ಟಣವಾಗಿದ್ದು, ಜಮ್ಮುವಿನಿಂದ 50 ಕಿ.ಮೀ ದೂರದಲ್ಲಿದೆ.
ಘಟನೆ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ, ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications