ಹೆಲಿಕಾಪ್ಟರ್ ಪತನ, ವೈಷ್ಣೋದೇವಿ ಭಕ್ತರು ಸೇರಿ 7 ಜನ ಸಾವು
ಕಟ್ರಾ(ಜಮ್ಮು), ನ.23: ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರನ್ನು ಕೊಂಡೊಯ್ಯುತ್ತಿದ್ದ ಹಿಮಾಲಯನ್ ಹೆಲಿಕಾಪ್ಟರ್ ಸೋಮವಾರ ಜಮ್ಮುವಿನ ಕಟ್ರಾದಲ್ಲಿ ಪತನಗೊಂಡಿದೆ. ಪ್ರಯಾಣಿಕರು, ಮಹಿಳಾ ಪೈಲಟ್ ಒಬ್ಬರು ಸೇರಿದಂತೆ ಒಟ್ಟು ಏಳು ಜನ ಮೃತಪಟ್ಟಿದ್ದಾರೆ.
ಹಿಮಾಲಯ ಹೆಲಿ ಸರ್ವಿಸ್ ಖಾಸಗಿ ಸಂಸ್ಥೆಯ ಈ ಹೆಲಿಕಾಪ್ಟರ್ ನಲ್ಲಿ ಆರು ಮಂದಿ ಭಕ್ತರು ಪ್ರಯಾಣಿಸುತ್ತಿದ್ದರು. ಸಾಂಚಿಚಾಟ್ ನಿಂದ ರೇಯಾಸಿ ಜಿಲ್ಲೆಯ ಕಟ್ರಾಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ವಿಪರೀತ ಮಂಜು ಮುಸುಕಿದ ವಾತಾವರಣ, ಪ್ರತಿಕೂಲ ಹವಾಮಾನದ ನಡುವೆ ಹೆಲಿಕಾಪ್ಟರ್ ಸಂಚಾರ ಕಷ್ಟವಾಗಿತ್ತು. ಹೆಲಿಕಾಪ್ಟರ್ ಕೆಳಗೆ ಬಿದ್ದ ನಂತರ ಬೆಂಕಿ ಹೊತ್ತಿಕೊಂಡಿರುವುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
6 persons, including pilot, killed as chopper crashes in Katra, the base camp of Vaishnodevi shrinehttps://t.co/Mr5c8pWuqU
— TIMES NOW (@TimesNow) ನವೆಂಬರ್ 23, 2015 ಹೆಲಿಕಾಪ್ಟರ್ ಪೈಲಟ್ ಸುಮಿತ್ರಾ ವಿಜಯನ್ ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ. ಶವಗಳನ್ನು ಹೊರತೆಗೆಯಲಾಗಿದೆ. ಚಾರ್ ಧಾಮ್ ಯಾತ್ರಾಕ್ಕೂ ಕೂಡಾ ಹೆಲಿಕಾಪ್ಟರ್ ಸೇವೆ ಒದಗಿಸುತ್ತಿರುವ ಹಿಮಾಲಯನ್ ಹೆಲಿ ಸರ್ವೀಸ್ ನ ಪ್ರಕಾರ ಹೆಲಿಕಾಪ್ಟರ್ ನಲ್ಲಿನ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಹೆಲಿಕಾಪ್ಟರ್ ಗೆ ಸುಮಿತ್ರಾ ಅವರು ಮುಖ್ಯ ಪೈಲಟ್ ಆಗಿದ್ದರು. ಪ್ರಾಥಮಿಕ ತನಿಖೆಯಿಂದ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬ್ಲಾಕ್ ಬಾಕ್ಸ್ ಪತ್ತೆಯಾದ ನಂತರ ನಿಜವಾದ ಕಾರಣ ತಿಳಿಯಲಿದೆ ಎಂದು ಡಿಐಜಿ ಉಧಂಪುರ್ ರಿಯಾಸಿ ಪ್ರಾಂತ್ಯದ ಸುರೀಂಧರ್ ಗುಪ್ತಾ ಹೇಳಿದ್ದಾರೆ.
Very sorry to hear about the chopper crash in Katra. My prayers are with the families of the victims. RIP
— Omar Abdullah (@abdullah_omar) November 23, 2015 ಸಮುದ್ರಮಟ್ಟದಿಂದ ಸುಮಾರು 5300 ಅಡಿ ಎತ್ತರದಲ್ಲಿರುವ ಹಿಮಾಲಯದ ತಪ್ಪಲಿನ ತ್ರಿಕೂಟ ಪರ್ವತದಲ್ಲಿರುವ ಈ ಶಕ್ತಿ ದೇಗುಲಕ್ಕೆ ಟ್ರೆಕ್ ಮಾಡಿಕೊಂಡು ಕೂಡಾ ಹೋಗಬಹುದು. ಅದರೆ, ಸುಮಾರು 8-10 ಕಿ.ಮೀ ದೂರ ನಡೆಯಲು ಆಗದ ಭಕ್ತರು ಹೆಲಿಕಾಪ್ಟರ್ ಸೇವೆಯನ್ನು ಬಯಸುತ್ತಾರೆ. ಇಲ್ಲಿಗೆ ಕಟ್ರಾ ಮುಖ್ಯ ಪಟ್ಟಣವಾಗಿದ್ದು, ಜಮ್ಮುವಿನಿಂದ 50 ಕಿ.ಮೀ ದೂರದಲ್ಲಿದೆ.
ಘಟನೆ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ, ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications