Kedarnath Helicopter Crash: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ಪತನ: ಪೈಲಟ್ ಸೇರಿ ಪ್ರಯಾಣಿಕರೆಲ್ಲಾ ಸಾವು
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನದಿಂದ ಇದುವರೆಗೂ 274 ಜನ ಸಾವನಪ್ಪಿದ್ದಾರೆ. ಈ ದುರಂತ ಮಾಸುವ ಮುನ್ನವೇ ಉತ್ತರಾಖಂಡ್ನಲ್ಲಿ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್ವೊಂದು ಪತನವಾಗಿದೆ. ಘಟನೆಯಲ್ಲಿ ಎಲ್ಲಾ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉತ್ತರಾಖಾಂಡನ ಕೇದಾರನಾಥದ ಬಳಿ ಗೌರಿ ಕೊಂಡ ಅರಣ್ಯದಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ನಲ್ಲಿ ಪೈಲಟ್ ಓರ್ವ ಮಗು ಸೇರಿದಂತೆ 7 ಮಂದಿ ಪ್ರಯಾಣ ಮಾಡುತ್ತಿದ್ದರು. ಘಟನೆಯಲ್ಲಿ ಎಲ್ಲರೂ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಗೌರಿ ಕುಂಡ್ನಲ್ಲಿ ಕಾಣೆಯಾಗಿದ್ದ ಪತನಗೊಂಡ ಹೆಲಿಕಾಪ್ಟರ್ನಲ್ಲಿ ಆರು ಜನ ಪ್ರಯಾಣಿಕರಿದ್ದರು. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ಉತ್ತರಾಖಂಡ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿ, ಡಾ.ವಿ.ಮುರುಗೇಶನ್ ಅವರು ಮಾಹಿತಿ ನೀಡಿದ್ದಾರೆ. ಈ ಘಟನೆ ಇಂದು (ಜೂನ್ 15) ಬೆಳಗ್ಗೆ 5:20ರ ಸುಮಾರಿಗೆ ಕೇದಾರನಾಥ ಧಾಮದಿಂದ ಗುಪ್ತಕಾಶಿಗೆ ಹೋಗುತ್ತಿದ್ದ ವೇಳೆ ನಡೆದಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮುಂದುವರೆಸಿವೆ ಎಂದು ತಿಳಿದುಬಂದಿದೆ.
ಈ ದುರಂತ ಹವಾಮಾನ ವೈಪರೀತ್ಯದದಿಂದ ಸಂಭವಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ರುದ್ರಪ್ರಯಾಗ್ ಜಿಲ್ಲೆಯಲ್ಲಿ ಬೆಳಗಿನ ಜಾವ ಈ ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್ ಹೊತ್ತಿ ಉರಿದಿದೆ. ಘಟನೆ ಕುರಿತು ಕಮೀಷನರ್ ವಿನಯ್ ಶಂಕರ್ ಪಾಂಡೆ ಪ್ರತಿಕ್ರಿಯಿಸಿ, ಹೆಲಿಕ್ಯಾಪ್ಟರ್ ದುರಂತದಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ. ಪೈಲಟ್ ಚೌಹನ್, ಒಂದು ಮಗು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಕೇದಾರನಾಥ್ ದೇವಸ್ಥಾನ ಸಮಿತಿಯ ಸದಸ್ಯರೊಬ್ಬರು ಸಹ ಇದೇ ಹೆಲಿಕಾಪ್ಟರ್ನಲ್ಲಿದ್ದರು. ಈ ಹೆಲಿಕಾಪ್ಟರ್ ಆರ್ಯನ್ ಕಂಪನಿಗೆ ಸೇರಿದೆ ಎಂದು ತಿಳಿಸಿದ್ದಾರೆ.
ಹೆಲಿಕಾಪ್ಟರ್ ದುರಂತದ ಬಗ್ಗೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಮ್ಮ ಟ್ವೀಟ್ ಖಾತೆ ಮೂಲಕ ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಮನಸಿಗೆ ತುಂಬಾ ನೋವಾಗಿದೆ. ಸ್ಥಳೀಯ ರಕ್ಷಣಾ ತಂಡಗಳು ಹಾಗೂ ಆಡಳಿತಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಅಂತಲೂ ಬರೆದುಕೊಂಡಿದ್ದಾರೆ.
ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಷ: ಜೂನ್ 13ರಂದು ಮತ್ತೊಂದು ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಷ ಮಾಡಿದ ಘಟನೆ ಥಾಯ್ಲೆಂಡ್ನಲ್ಲಿ ನಡೆದಿದೆ. ಹಾಗಾದ್ರೆ ಇದಕ್ಕೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಥಾಯ್ಲೆಂಡ್ನ ಫುಕೆಟ್ ದ್ವೀಪದಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಆದ್ದರಿಂದ ಥೈಲ್ಯಾಂಡ್ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ತಿಳಿಸಿದ್ದರು.
AI 379 ಏರ್ ಇಂಡಿಯಾ ವಿಮಾನ ಹಾರಾಟ ಮಾಡುತ್ತಿದ್ದ ವೇಳೆ ಈ ಬೆದರಿಕೆ ಬಂದಿದೆ. ಆದ್ದರಿಂದ ತಕ್ಷಣವೇ ಭೂಸ್ಪರ್ಶಕ್ಕೆ ಮನವಿ ಮಾಡಲಾಗಿದೆ. ಈ ವೇಳೆ ಇದರಲ್ಲಿ 156 ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ರಂದು ತಿಳಿದುಬಂದಿದೆ. ಅಹಮದಾಬಾದ್ ವಿಮಾನ ಭೀಕರ ದುರಂತ ಮಾಸಿಲ್ಲ. ಈ ಸಮಯದಲ್ಲೇ ವಿಮಾನಕ್ಕೆ ಬೆದರಿಕೆ ಕರೆ ಬಂದಿದೆ.
ಗುಜ್ರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಗುರುವಾರ ಏರ್ ಇಂಡಿಯಾ ವಿಮಾನ ಪತನ ಆಗಿತ್ತು. ಈ ದುರಂತದ ಬೆನ್ನಲ್ಲೇ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಇದೀಗ ಈ ವಿಚಾರ ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು.
ಬಾಂಬ್ ಬೆದರಿಕೆ ಬಳಿಕ ಏರ್ ಇಂಡಿಯಾ ವಿಮಾನ ಸಿಬ್ಬಂದಿ ವಿಮಾನ AI 379ನಿಂದ ಪ್ರಯಾಣಿಕರನ್ನು ಹೊರಕ್ಕೆ ಕರದುಕೊಂಡು ಬಂದಿದ್ದಾರೆ ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದರು.
ಆದರೆ, ಪ್ರಾಥಮಿಕ ಶೋಧಕಾರ್ಯಚರಣೆ ಬಳಿಕ ಆ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ವಿಮಾನದಲ್ಲಿ 156 ಪ್ರಯಾಣಿಕರಿದ್ದು, ಈ ವೇಳೆ ಯಾರು ಭಯಪಡಬೇಡಿ, ಪ್ರಯಾಣಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications