ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಯಾವತಿ ನಡೆಗೆ ಅಸಲಿ ಕಾರಣ ಬಿಚ್ಚಿಟ್ಟ ಕಾಂಗ್ರೆಸ್ ಮುಖಂಡ

|
Google Oneindia Kannada News

ಭೋಪಾಲ್, ಅಕ್ಟೋಬರ್ 04: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧಿಸಲು ಬಹುಜನ ಸಮಾಜವಾದಿ ಪಕ್ಷ ನಿರ್ಧರಿಸಿರುವುದಕ್ಕೆ ನಿಜವಾದ ಕಾರಣವೇನು ಎಂಬುದನ್ನು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಬಿಚ್ಚಿಟ್ಟಿದ್ದಾರೆ.

"ಬಿಎಸ್ಪಿ ತನ್ನ ಪಕ್ಷದ ಅಭ್ಯರ್ಥಿಗಳನ್ನು ಯಾವೆಲ್ಲ ಕ್ಷೇತ್ರದಲ್ಲಿ ಕಣಕ್ಕಿಳಿಸಿಸಲು ನಿರ್ಧರಿಸಿತ್ತೋ ಅಲ್ಲೆಲ್ಲೂ ಬಿಎಸ್ಪಿ ಗೆಲ್ಲುವುದಕ್ಕೆ ಸಾಧ್ಯವಿರಲಿಲ್ಲ. ಆ ಎಲ್ಲ ಕ್ಷೇತ್ರಗಳಲ್ಲೂ ಬಿಎಸ್ಪಿಗೆ ಉತ್ತಮ ಬೆಂಬಲ ಇರಲಿಲ್ಲ. ಆದರೆ ಎಲ್ಲೆಲ್ಲಿ ಬಿಎಸ್ಪಿ ಗೆಲ್ಲಲು ಸಾಧ್ಯವಿತ್ತೋ, ಆ ಕ್ಷೇತ್ರಗಳಲ್ಲಿ ಅದು ತನ್ನ ಅಭ್ಯರ್ಥಿಗಳ ಹೆಸರನ್ನು ಸೂಚಿಸಿರಲಿಲ್ಲ. ಅದು ಸಿದ್ಧಪಡಿಸಿದ ಪಟ್ಟಿಯನ್ನು ನೋಡಿ ನಮಗೆ ಅಚ್ಚರಿಯಾಯಿತು" ಎಂದು ಕಮಲ್ ನಾಥ್ ಹೇಳಿದ್ದಾರೆ.

ಮಾಯಾವತಿ ಜೊತೆ ಮತ್ತದೇ ಮಿಸ್ಟೇಕ್ ಮಾಡುತ್ತಿರುವ ರಾಹುಲ್ಮಾಯಾವತಿ ಜೊತೆ ಮತ್ತದೇ ಮಿಸ್ಟೇಕ್ ಮಾಡುತ್ತಿರುವ ರಾಹುಲ್

'ಆದ್ದರಿಂದಲೇ ಬಿಎಸ್ಪಿಗೆ ಸೋಲಬಹುದಾದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಬಾರದೆಂದು ಕಾಂಗ್ರೆಸ್ ಮನವಿ ಮಾಡಿತ್ತು. ಆದರೆ ಇದಕ್ಕೆ ಒಪ್ಪಲು ಬಿಎಸ್ಪಿ ಅಧಿನಾಯಕಿ ಮಾಯಾವತಿಯವರಿಗೆ ಇಷ್ಟವಿರಲಿಲ್ಲ. ಮೈತ್ರಿ ಮಾಡಿಕೊಳ್ಳದೆ ಹೊರನಡೆದರು' ಎಂದು ಅವರು ತಿಳಿಸಿದ್ದಾರೆ.

Here is the reason for Mayawatis decision to stay away from Congress

'ಕಾಂಗ್ರೆಸ್ ಮೈತ್ರಿಕೂಟ ಕನಸು ಭಗ್ನ, ಮಾಯಾವತಿಯಿಂದ ಹಿಂದೇಟು''ಕಾಂಗ್ರೆಸ್ ಮೈತ್ರಿಕೂಟ ಕನಸು ಭಗ್ನ, ಮಾಯಾವತಿಯಿಂದ ಹಿಂದೇಟು'

ಇದೇ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ಚುನಾವಣೆಗಳಲ್ಲಿ ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಆದರೆ ಈ ಮೈತ್ರಿಗೆ ಒಲ್ಲೆ ಎಂದು ಬಿಎಸ್ಪಿ ಹೇಳಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಕೈಜೋಡಿಸುವುದಿಲ್ಲ ಎಂದು ಬುಧವಾರ ಮಾಯಾವತಿ ಸ್ಪಷ್ಟಪಡಿಸಿದ್ದರು.

English summary
The list of seats which BSP had given us where they had no chance of winning and the seats which they could have won they had not included in the list: Madhya Pradesh Congress Chief Kamal Nath
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X