ಮಾ.31ರೊಳಗೆ ಪ್ಯಾನ್- ಆಧಾರ್ ಜೋಡಣೆಯಾಗದಿದ್ದರೆ ಭಾರಿ ದಂಡ ಬೀಳಲಿದೆ!
ನವದೆಹಲಿ, ಮಾರ್ಚ್ 2: ಪ್ಯಾನ್ ಕಾರ್ಡ್ ಬಳಕೆದಾರರು ಮಾರ್ಚ್ 31ರೊಳಗೆ ಪ್ಯಾನ್ ಕಾರ್ಡ್ಗೆ ಆಧಾರ್ ಗುರುತಿನ ಸಂಖ್ಯೆಯನ್ನು ಜೋಡಿಸಬೇಕು ಎಂದು ಸಿಬಿಡಿಟಿ ಸ್ಪಷ್ಟಪಡಿಸಿದೆ. ಒಂದು ವೇಳೆ ನಿಗದಿತ ಅವಧಿಯಲ್ಲಿಆಧಾರ್ ಜೊತೆ ಪಾನ್ ಲಿಂಕ್ ಆಗಿಲ್ಲದಿದ್ದಲ್ಲಿ ಭಾರಿ ದಂಡ ಕಟ್ಟಬೇಕಾಗುತ್ತದೆ. ಆರ್ಥಿಕ ವ್ಯವಹಾರಗಳಿಗೆ ಈ ಜೋಡಣೆ ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ 10,000 ರು ದಂಡ ತೆರಬೇಕಾಗುತ್ತದೆ.
ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 139 ಎಎ(2) ಪ್ರಕಾರ ಎಲ್ಲಾ ಪ್ಯಾನ್ ಕಾರ್ಡ್ ಬಳಕೆದಾರರು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಜೋಡಿಸಬೇಕು ಎಂದು 2017ರ ಜುಲೈ 1ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಆಧಾರ್ ಜೋಡಣೆ ಪ್ರಕ್ರಿಯೆ ಸಂವಿಧಾನಾತ್ಮಕವಾಗಿದೆ, ತೆರಿಗೆದಾರರ ಹಕ್ಕುಗಳ ಉಲ್ಲಂಘನೆ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಿಬಿಡಿಟಿಯು ನಿಮ್ಮ ಪ್ಯಾನ್ ಕಾರ್ಡ್ ಮತ್ತು ಆಧಾರ್ ಮಿಸ್ ಮ್ಯಾಚ್ ವಿಧಾನವನ್ನು ಸೂಚಿಸಿದೆ. ನೀವು ಪ್ಯಾನ್ ವಿತರಕ ಬಳಿ ತೆರಳಿ ಸಂಬಂಧಿಸಿದ ಪ್ಯಾನ್ ಮತ್ತು ಆಧಾರ್ ದಾಖಲಾತಿಯ ಪ್ರತಿಗಳನ್ನು ಸಲ್ಲಿಸಿ ಲಿಂಕ್ ಮಾಡಬಹುದು. ಪ್ಯಾನ್ ವಿವರ ಬದಲಾವಣೆಗೆ 110 ರೂ, ಶುಲ್ಕವಿರುತ್ತದೆ. ಆಧಾರ್ ವಿವರ ಪರಿಷ್ಕರಣೆಗೆ 25 ರೂ, ಶುಲ್ಕವಿರುತ್ತದೆ.

ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 272 ಬಿ ಅಡಿಯಲ್ಲಿ ನಿಗದಿತ ಗಡುವು ಮುಗಿದ ನಂತರ ಪಾನ್ ಜೊತೆ ಆಧಾರ್ ಲಿಂಕ್ ಆಗಿಲ್ಲವೆಂದರೆ ಅಂಥ ಪಾನ್ ಕಾರ್ಡನ್ನು ನಿಷ್ಕ್ರಿಯಗೊಳಿಸಲಾಗುವುದು, ಯಾವುದೇ ವ್ಯವಹಾರಕ್ಕೂ ಬಳಸಲು ಸಾಧ್ಯವಾಗುವುದಿಲ್ಲ.
ಸದ್ಯದ ಮಾಹಿತಿಯಂತೆ ಸುಮಾರು 120 ಕೋಟಿ ಆಧಾರ್ ಸಂಖ್ಯೆಗಳನ್ನು ನೀಡಲಾಗಿತ್ತು, 41 ಕೋಟಿ ಪ್ಯಾನ್ ನಂಬರ್ ವಿತರಣೆಯಾಗಿದೆ. ಆದರೆ, ಈ ಪೈಕಿ 22 ಕೋಟಿ ಪ್ಯಾನ್- ಆಧಾರ್ ಮಾತ್ರ ಜೋಡಣೆಯಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications