ದೇಶಾದ್ಯಂತ 820 ಪಾರಂಪರಿಕ ತಾಣಗಳು ಇಂದಿನಿಂದ ಓಪನ್
ನವದೆಹಲಿ, ಜೂನ್ 8: ಲಾಕ್ಡೌನ್ ಸಡಿಲಿಕೆ ಬಳಿಕ ಸತತ ಎರಡೂವರೆ ತಿಂಗಳ ನಂತರ ಇಂದಿನಿಂದ (ಜೂನ್ 8) ಪಾರಂಪರಿಕ ತಾಣಗಳನ್ನು ತೆರೆಯಲು ಅನುಮತಿ ದೊರೆತಿದೆ.
ಜೂನ್ 8 ರಿಂದ ಭಾರತೀಯ ಪುರಾತತ್ವ ಸಮೀಕ್ಷೆ ಅಡಿಯಲ್ಲಿ ಬರುವ 820 ಸಂರಕ್ಷಿತ ಸ್ಮಾರಕಗಳನ್ನು ಪುನಃ ತೆರೆಯಲು ಕೇಂದ್ರ ಸಂಸ್ಕೃತಿ ಸಚಿವಾಲಯ ಭಾನುವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ತಿಳಿಸಿದ್ದಾರೆ.
'ಸಂಸ್ಕೃತಿ ಸಚಿವಾಲಯವು ಜೂನ್ 8 ರಿಂದ ಎಎಸ್ಐ ಅಡಿಯಲ್ಲಿ ತನ್ನ 820 ಸ್ಮಾರಕಗಳನ್ನು ತೆರೆಯಲು ಅನುಮೋದನೆ ನೀಡಿದೆ. ಎಂಹೆಚ್ಎ ಮತ್ತು ಆರೋಗ್ಯ ಸಚಿವಾಲಯ ಹೊರಡಿಸಿದ ಎಲ್ಲಾ ನಿಯಮಾವಳಿಗಳನ್ನು ಅನುಸರಿಸಲಾಗುವುದು."ಎಂದು ಸಚಿವ ಪ್ರಹ್ಲಾದ್ ಪಟೇಲ್ ಅವರು ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವಾಲಯದ ಸೂಚನೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಧಾರ್ಮಿಕ ಪೂಜೆ ನಡೆಯುವ ಎಎಸ್ಐ ನಿರ್ವಹಿಸುವ ಸ್ಮಾರಕಗಳನ್ನು ಮಾತ್ರ ತೆರೆಯಲು ಸಂಸ್ಕೃತಿ ಸಚಿವಾಲಯ ನಿರ್ಧರಿಸಿದೆ. ತಾಜ್ ಮಹಲ್, ಹೌಜ್ ಖಾಸ್ ಎನ್ಕ್ಲೇವ್ನಲ್ಲಿರುವ ನಿಲಾ ಮಸೀದಿ, ಕುತುಬ್ ಪುರಾತತ್ವ ಪ್ರದೇಶ, ದೆಹಲಿಯ ಲಾಲ್ ಗುಂಬಾದ್ ಅನ್ನು ಜೂನ್ 8 ರಿಂದ ಮತ್ತೆ ತೆರೆಯಲು ಅನುಮತಿ ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ಆರೋಗ್ಯ ಸಚಿವಾಲಯ ಹೊರಡಿಸಿದ ಎಲ್ಲಾ ಕೊರೊನಾವೈರಸ್ ಸಂಬಂಧಿತ ನಿಯಮಗಳನ್ನು ಸ್ಮಾರಕ ಅಧಿಕಾರಿಗಳು ಅನುಸರಿಸುತ್ತಾರೆ ಮತ್ತು ಅಂತಹ ಸ್ಥಳಗಳಲ್ಲಿ ಮಾಸ್ಕ್ಗಳನ್ನು ಧರಿಸುವುದು ಸಂದರ್ಶಕರಿಗೆ ಕಡ್ಡಾಯವಾಗಿರುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು ದೇಶದಲ್ಲಿ 3691 ಸ್ಮಾರಕಗಳಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications