ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ಲಷ್ಕರ್ ಬೆದರಿಕೆ ಪತ್ರ
ನವದೆಹಲಿ, ಸೆಪ್ಟೆಂಬರ್ 26 : ಅಕ್ಟೋಬರ್ 20ರೊಳಗೆ ದೇಶದ ವಿವಿಧ ರೈಲು ನಿಲ್ದಾಣದಲ್ಲಿ ಸ್ಫೋಟಗಳನ್ನು ನಡೆಸಲಾಗತ್ತದೆ ಎಂದು ಬೆದರಿಕೆ ಪತ್ರ ಬಂದಿದೆ. ಲಷ್ಕರ್ ಏ ತೋಯ್ಬಾ ಸಂಘಟನೆ ಈ ಬೆದರಿಕೆ ಹಾಕಿದೆ ಎಂದು ಶಂಕಿಸಲಾಗಿದೆ.
ಬುಧವಾರ ಹರ್ಯಾಣದ ಅಂಬಾಲ ರೈಲು ನಿಲ್ದಾಣದಲ್ಲಿ ಬೆದರಿಕೆ ಪತ್ರ ಪೊಲೀಸರಿಗೆ ಸಿಕ್ಕಿದೆ. ಪಾಕಿಸ್ತಾನದ ಕರಾಚಿಯಿಂದ ಪತ್ರ ಬಂದಿದೆ. ಪತ್ರ ಸಿಕ್ಕ ಬಳಿಕ ಅಂಬಾಲ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಅಕ್ಟೋಬರ್ 20ರೊಳಗೆ ರೈಲು ನಿಲ್ದಾಣದಲ್ಲಿ ಸ್ಫೋಟಗಳನ್ನು ನಡೆಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಪತ್ರ ಹುಸಿ ಬೆದರಿಕೆಯೇ ಎಂದು ಸಹ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಒನ್ ಇಂಡಿಯಾದ ಜೊತೆ ಮಾತನಾಡಿದ ಪೊಲೀಸರು, 'ಜನರಲ್ಲಿ ಆತಂಕ ಮೂಡಿಸಲು ಈ ರೀತಿಯ ಪತ್ರವನ್ನು ಕಳಿಸಿರಬಹುದು. ಹಲವು ರೈಲು ನಿಲ್ದಾಣದಲ್ಲಿ ಸ್ಫೋಟ ನಡೆಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ' ಎಂದು ಹೇಳಿದ್ದಾರೆ.
ರೈಲು ನಿಲ್ದಾಣಗಳು ಮೊದಲಿನಿಂದಲೂ ಉಗ್ರರ ಟಾರ್ಗೆಟ್. ಮುಂಬೈ ಸೇರಿದಂತೆ ದೇಶದ ವಿವಿಧ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಉದಾಹರಣೆಗಳು ಇವೆ. ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಕೆಲವು ದಿನಗಳ ಹಿಂದೆ ದೆಹಲಿಯಿಂದ ಹೊರಟ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇದೆ ಎಂಬ ಕರೆ ಬಂದಿತ್ತು. ಸುಮಾರು ಎರಡೂವರೆ ಗಂಟೆಗಳ ಕಾಲ ರೈಲಿನಲ್ಲಿ ತಪಾಸಣೆ ನಡೆಸಲಾಗಿತ್ತು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications