ಕೊಪ್ಪಳದ ಮಲ್ಲಮ್ಮ ಬಗ್ಗೆ 'ಮನ್ ಕೀ ಬಾತ್'ನಲ್ಲಿ ಮಾತನಾಡಿದ ಮೋದಿ
ಬೆಂಗಳೂರು, ಆಗಸ್ಟ್ 28 : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶವನ್ನು ಉದ್ದೇಶಿಸಿ 'ಮನ್ ಕೀ ಬಾತ್' ಮೂಲಕ ಮಾತನಾಡಿದರು. ತಮ್ಮ ತಿಂಗಳ ರೆಡಿಯೋ ಕಾರ್ಯಕ್ರಮದಲ್ಲಿ ಮೋದಿ ಕರ್ನಾಟಕದ ಬಾಲಕಿಯ ಸಾಧನೆಯನ್ನು ಪ್ರಸ್ತಾಪಿಸಿದರು.
ರೆಡಿಯೋ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡುವ ಪ್ರಧಾನಿ ಮೋದಿ ಅವರ ತಿಂಗಳ ಕಾರ್ಯಕ್ರಮ ಭಾನುವಾರ ನಡೆಯಿತು. 'ಮನ್ ಕೀ ಬಾತ್' ಸರಣಿಯ 23ನೇ ಕಾರ್ಯಕ್ರಮದಲ್ಲಿ ಮೋದಿ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದರು.[ಶೌಚಾಲಯಕ್ಕಾಗಿ ಉಪವಾಸ ಕುಳಿತ ವಿದ್ಯಾರ್ಥಿನಿ ಮಲ್ಲಮ್ಮ!]

ತಮ್ಮ ಭಾಷಣದಲ್ಲಿ ಮೋದಿ ಶೌಚಾಲಯಕ್ಕಾಗಿ ಉಪವಾಸ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕೊಪ್ಪಳದ ಮಲ್ಲಮ್ಮ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಮನೆಯಲ್ಲಿ ಶೌಚಾಲಯ ನಿರ್ಮಿಸುವಂತೆ ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ 10ನೇ ತರಗತಿ ಮಲ್ಲಮ್ಮ ಉಪವಾಸ ಕುಳಿತು ಸುದ್ದಿ ಮಾಡಿದ್ದಳು.[ವಿದ್ಯಾರ್ಥಿ ಮಲ್ಲಮ್ಮಳ ಉಪವಾಸಕ್ಕೆ ಫಲ ಸಿಕ್ಕಿತ್ತು]
ವಿದ್ಯಾರ್ಥಿನಿ ಮಲ್ಲಮ್ಮ ಬೇಡಿಕೆ ಈಡೇರಿದ್ದು, ಕೊಪ್ಪಳ ಜಿಲ್ಲಾ ಪಂಚಾಯಿತಿ ಸಿಇಓ ಆರ್. ರಾಮಚಂದ್ರನ್ ಮತ್ತು ಗ್ರಾಮ ಪಂಚಾಯಿತಿ ಸಹಕಾರದಿಂದ ಮಲ್ಲಮ್ಮ ಮನೆಯಲ್ಲಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶೌಚಾಲಯ ನಿರ್ಮಾಣ ಮಾಡಿಕೊಟ್ಟ ಗ್ರಾಮಸ್ಥರಿಗೆ ಮೋದಿ ಧನ್ಯವಾದ ಅರ್ಪಿಸಿದರು.
ಮೋದಿ ಭಾಷಣದ ಮುಖ್ಯಾಂಶಗಳು
* ಒಲಂಪಿಕ್ನಲ್ಲಿ ಸಾಧನೆ ಮಾಡುವ ಮೂಲಕ ನಮ್ಮ ಪುತ್ರಿಯರು ನಾವು ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡಲು ನಾವು ಸಮಿತಿ ರಚನೆ ಮಾಡಿದ್ದೇವೆ.
* ಓದಿನ ಜೊತೆಗೆ ಕ್ರೀಡೆಗೂ ನಾವು ಹೆಚ್ಚಿನ ಗಮನವನ್ನು ಕೊಡಬೇಕು. ಆಗಸ್ಟ್ 29 ಹಾಕಿ ದಂತಕತೆ ಧ್ಯಾನ್ಚಂದ್ ಹುಟ್ಟು ಹಬ್ಬ. ಅದನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಣೆ ಮಾಡೋಣ
* ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ. ನಮ್ಮ ಜೀವನದಲ್ಲಿ ತಾಯಿ ಬಳಿಕ ಮಹತ್ವದ ಪಾತ್ರ ವಹಿಸುವುದು ಶಿಕ್ಷಕರು.
ವಿದ್ಯಾರ್ಥಿಗಳನ್ನು ಬೆಳೆಸಲು ಶಿಕ್ಷಕರು ತಮ್ಮ ಜೀವನವನ್ನು ಮುಡುಪಾಗಿಡುತ್ತಾರೆ.
ಮೋದಿ ಭಾಷಣ ಕೇಳಿ
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications