ಭೀಕರ ಬರ, ಮಳೆ ಕೊಯ್ಲು, ನದಿ ಸ್ವಚ್ಛತೆ ಬಗ್ಗೆ ಮೋದಿ
ನವದೆಹಲಿ, ಏಪ್ರಿಲ್ 24: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಿಂಗಳ ಬಾನುಲಿ ಕಾರ್ಯಕ್ರಮ 'ಮನ್ ಕಿ ಬಾತ್' ನ 19ನೇ ಸಂಚಿಕೆಯಲ್ಲಿ ನೀರಿನ ಮಹತ್ವದ ಬಗ್ಗೆ ಭಾನುವಾರ ಮಾತನಾಡಿದರು.
ದೇಶದ ಹಲವೆಡೆ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಜಲ ಕ್ಷಾಮ, ಪಂಚಾಯತ್ ರಾಜ್, ಮಳೆ ಕೊಯ್ಲು, ನದಿ ಸ್ವಚ್ಛತೆ ಬಗ್ಗೆ ಮಾತನಾಡಿದರು. ಮನ್ ಕಿ ಬಾತ್ ಸಂಚಿಕೆಯ ಮುಖ್ಯಾಂಶಗಳು ಹೀಗಿದೆ:
* ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿ ಬರ ಪರಿಸ್ಥಿತಿ ಎದುರಿಸಲು ಅಲ್ಲಿನ ಜನರು ತಮ್ಮ ಬೆಳೆಪದ್ಧತಿಯನ್ನೇ ಬದಲಾಯಿಸಿದ್ದಾರೆ. ತಮ್ಮ ಜಮೀನಿನಲ್ಲಿ ನೀರಿಂಗಿಸುವ ಹೊಂಡಗಳನ್ನು ನಿರ್ಮಿಸಿದ್ದಾರೆ. ಗಿಡಗಳನ್ನು ಬೆಳೆಸಲು ಅವರಿಗೆ ಹೆಚ್ಚು ನೀರು ಬೇಕಿಲ್ಲ
* ಈ ಬಾರಿ ಉತ್ತಮ ಮುಂಗಾರುಮಳೆ ನಿರೀಕ್ಷೆಯಿದೆ. ಜೊತೆಗೆ ಬೆಳೆ ಉತ್ಪಾದನೆ ಹೆಚ್ಚಳ ಮಾಡಬೇಕಾದ ಹೊಣೆಗಾರಿಕೆಯೂ ಇದೆ.
* ನೀರಿನ ಸಮಸ್ಯೆ ನಿವಾರಿಸಲು ದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಬೇಕಿದೆ.

* ಮಳೆನೀರಿನ ಕೊಯ್ಲಿನಿಂದ ಭೂಮಿಯ ಜಲಮಟ್ಟ ಏರುತ್ತದೆ. ನೀರಿನ ಗುಣಮಟ್ಟ ಸುಧಾರಿಸುತ್ತದೆ. ಸ್ವಚ್ಛ ನೀರಿನಿಂದ ಆರೋಗ್ಯವೂ ಸುಧಾರಿಸುತ್ತದೆ. ಹಳ್ಳಿಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಲು ಪ್ರಚಾರ ಅಭಿಯಾನ ಕೈಗೆತ್ತಿಕೊಳ್ಳಬೇಕು
* ಗಂಗಾನದಿ ನಮ್ಮ ಪ್ರಮುಖ ಜಲ ಸಂಪನ್ಮೂಲ. ಗಂಗಾನದಿ ಸ್ವಚ್ಛತೆಗೆ ಕ್ರಮ ಕೈಗೊಂಡು, ಸ್ವಚ್ಛತೆಯ ಏಜೆಂಟರಾಗಬೇಕು.
* ಪಂಚಾಯ್ತಿ ರಾಜ್ ವ್ಯವಸ್ಥೆಯು ಗ್ರಾಮಗಳಲ್ಲಿ ಪ್ರಜಾತಾಂತ್ರಿಕ ಮೌಲ್ಯಗಳು ಜನರಿಗೆ ತಲುಪಲು ನೆರವಾಗಿದೆ
* ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳದ ಬಗ್ಗೆ ಪೋಷಕರಿಗೆ ಅರಿವು ಅಗತ್ಯ. ಮಕ್ಕಳೊಡನೆ ನಿರಂತರ ಮಾತುಕತೆಯಿಂದ ದೈನಂದಿನ ಆಗು ಹೋಗುಗಳು ತಿಳಿಯಲಿದೆ.
* ಶಿಕ್ಷಣದ ಜೊತೆಗೆ ಕೌಶಲ್ಯ ಅಭಿವೃದ್ಧಿ ಮುಖ್ಯ, ಶಿಕ್ಷಣದ ಗುಣಮಟ್ಟ ಹೆಚ್ಚಳದಲ್ಲಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸಲಿದೆ. ವಿಡಿಯೋ ಇಲ್ಲಿದೆ:
More From
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications