ಹಿಜಾಬ್ ವಿವಾದ: 'ಇದು ಯೋಜಿತ ಪಿತೂರಿ' ಎಂದ ಸಚಿವ ನಖ್ವಿ
ನವದೆಹಲಿ, ಫೆಬ್ರವರಿ 14: ಕರ್ನಾಟಕದ ಹಿಜಾಬ್ ವಿವಾದವು ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ. ಈಗಾಗಲೇ ಹಲವಾರು ಮಂದಿ ರಾಷ್ಟ್ರೀಯ ನಾಯಕರು ಹಿಜಾಬ್ ಪರವಾಗಿ ಹಾಗೂ ವಿರೋಧವಾಗಿ ಹೇಳಿಕೆ ನೀಡಿದ್ದಾರೆ. ಈ ನಡುವೆ ಈ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, "ಹಿಜಾಬ್ ವಿವಾದವು ಯೋಜಿತ ಪಿತೂರಿ," ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, "ಹಿಜಾಬ್ ವಿವಾದವು ಯೋಜಿತ ಪಿತೂರಿ ಎಂಬುವುದು ಸ್ಪಷ್ಟವಾಗಿದೆ. ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣವನ್ನು ಹೇಗೆ ನಿಲ್ಲಿಸುವುದು ಎಂಬ ಮನಸ್ಥಿತಿ ಇದರ ಹಿಂದೆ ಇದೆ," ಎಂದು ಆರೋಪ ಮಾಡಿದ್ದಾರೆ. ಹಾಗೆಯೇ ಈ ಪಿತೂರಿ ಯಶಸ್ವಿಯಾಗದು ಎಂದು ಕೂಡಾ ಹೇಳಿದ್ದಾರೆ.
"ಇದು ಯೋಜಿತ ಪಿತೂರಿ ಆಗಿದೆ. ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣವನ್ನು ಹೇಗೆ ನಿಲ್ಲಿಸುವುದು ಎಂಬ ಪಿತೂರಿ ಇದಾಗಿದೆ. ಆದರೆ ಈ ಹಿಜಾಬ್ ವಿವಾದ ಸೃಷ್ಟಿಯ ಪಿತೂರಿ ಯಶಸ್ವಿ ಆಗದು. ಹಿಜಾಬ್ ತಮ್ಮ ಸಾಂವಿಧಾನಿಕ ಹಕ್ಕು ಎಂದು ಹಲವರು ಹೇಳುತ್ತಿದ್ದಾರೆ. ಆದರೆ ನಿಮ್ಮ ಕರ್ತವ್ಯಗಳ ಬಗ್ಗೆ ಏನು ಹೇಳುವಿರಿ," ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಪ್ರಶ್ನೆ ಮಾಡಿದ್ದಾರೆ.
Recommended Video

ವಸ್ತ್ರ ಸಂಹಿತೆಯನ್ನು ನಾವು ಅಲ್ಲಗಳೆಯುವಂತಿಲ್ಲ ಎಂದ ಮುಖ್ತಾರ್ ಅಬ್ಬಾಸ್ ನಖ್ವಿ
ಶಿಕ್ಷಣ ಸಂಸ್ಥೆಗಳ ವಸ್ತ್ರ ಸಂಹಿತೆಯನ್ನು ನಾವು ಅಲ್ಲಗಳೆಯುವಂತಿಲ್ಲ ಎಂದು ಕೂಡಾ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಒತ್ತಿ ಹೇಳಿದ್ದಾರೆ. "ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾತನಾಡುವವರು ತಮ್ಮ ಸಾಂವಿಧಾನಿಕ ಕರ್ತವ್ಯಗಳ ಬಗ್ಗೆಯೂ ಮಾತನಾಡಬೇಕು. ಶಿಕ್ಷಣ ಸಂಸ್ಥೆಗಳ ವಸ್ತ್ರ ಸಂಹಿತೆಯನ್ನು ಕೂಡಾ ನಾವು ನಿರಾಕರಿಸುವಂತಿಲ್ಲ. ಸಂವಿಧಾನವು ಈ ಎರಡೂ ವಿಷಯಗಳ ಬಗ್ಗೆ ಮಾತನಾಡುತ್ತದೆ. ಸಂವಿಧಾನವು -ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಮಾತನಾಡುತ್ತದೆ," ಎಂದು ತಿಳಿಸಿದ್ದಾರೆ.
ಈ ವರ್ಷದ ಜನವರಿಯಲ್ಲಿ ರಾಜ್ಯದ ಉಡುಪಿ ಜಿಲ್ಲೆಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ತರಗತಿಗಳಿಗೆ ಹಾಜರಾಗದಂತೆ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಕಾಲೇಜಿನ ಹೊರಗೆ ಪ್ರತಿಭಟನೆ ಆರಂಭ ಮಾಡಿದ್ದಾರೆ. ಈ ಬಳಿಕ ರಾಜ್ಯದಲ್ಲಿ ಹಿಜಾಬ್ ವಿವಾದವು ಭುಗಿಳೆದ್ದಿದೆ. ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದ ಕಾರಣದಿಂದಾಗಿ ಕಾಲೇಜಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಈ ನಡುವೆ ಹಲವಾರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಲ್ಯ ಧರಿಸುತ್ತೇವೆ ಎಂದು ಹೇಳಿಕೊಂಡು ಕೇಸರಿ ಶಲ್ಯವನ್ನು ಧರಿಸಿ ಬರಲು ಆರಂಭ ಮಾಡಿದ್ದಾರೆ. ಈ ಬೆನ್ನಲ್ಲೇ ಈ ವಿವಾದವು ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ನಡುವೆ ಶಾಲಾ ಆಡಳಿತ ಮಂಡಳಿ ಅನುಮೋದಿಸಿದ ಸಮವಸ್ತ್ರವನ್ನು ಮಾತ್ರವೇ ವಿದ್ಯಾರ್ಥಿಗಳು ಧರಿಸಬಹುದು ಮತ್ತು ಇತರೆ ಯಾವುದೇ ಧಾರ್ಮಿಕ ಆಚರಣೆಗಳಿಗೆ ಕಾಲೇಜುಗಳಲ್ಲಿ ಅವಕಾಶ ನೀಡುವುದಿಲ್ಲ ಎಂದು ವಿವಿ ಪೂರ್ವ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿತ್ತು.
ಈ ನಡುವೆ ರಾಜ್ಯದಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ವಿವಿಧ ಅರ್ಜಿಗಳನ್ನು ಆಲಿಸಿ ಕರ್ನಾಟಕ ಹೈಕೋರ್ಟ್ ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಹೈಕೋರ್ಟ್ ಮನವಿ ಮಾಡಿದೆ. ಹಾಗೆಯೇ ಮಧ್ಯಂತರ ತೀರ್ಪು ನೀಡಿದ್ದು, ಮುಂದಿನ ತೀರ್ಪಿನವರೆಗೆ ಯಾವುದೇ ಧಾರ್ಮಿಕ ಸಂಕೇತಗಳನ್ನು ಕಾಲೇಜುಗಳಲ್ಲಿ ಧರಿಸುವಂತಿಲ್ಲ ಎಂದು ಹೇಳಿದೆ. ಹೈಕೋರ್ಟ್ನ ಈ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಆದರೆ ಸುಪ್ರೀಂ ಈ ಪ್ರಕರಣದ ತುರ್ತು ವಿಚಾರಣೆಗೆ ನಕಾರ ಎಂದಿದೆ. ಹಾಗೆಯೇ ಈ ವಿಚಾರವನ್ನು ರಾಷ್ಟ್ರ ಮಟ್ಟಕ್ಕೆ ತರದಂತೆ ಮನವಿ ಮಾಡಿದೆ. (ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications