ಹಿಜಾಬ್ ವಿವಾದ: ಪಿಎಫ್ಐ ನಿಷೇಧಿಸಲು ಸೂಫಿ ಅಸೋಸಿಯೇಷನ್ ಆಗ್ರಹ
ನವದೆಹಲಿ, ಫೆಬ್ರವರಿ 17: ಕರ್ನಾಟಕದಲ್ಲಿ ಹಿಜಾಬ್ ವಿವಾದವು ಪ್ರಸ್ತುತ ಹೈಕೋರ್ಟ್ನ ವಿಚಾರಣೆಗೆ ಒಳಪಟ್ಟಿದೆ. ಈ ನಡುವೆ ಹಲವಾರು ನಾಯಕರುಗಳು ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಆಗ್ರಹ ಮಾಡಿದೆ. ಈಗ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಯನ್ನು ನಿಷೇಧಿಸುವಂತೆ ಸೂಫಿ ಖಾನ್ಖಾಹ್ ಅಸೋಸಿಯೇಷನ್ನ ಸದಸ್ಯರು ಒತ್ತಾಯಿಸುತ್ತಿದ್ದಾರೆ.
ಪಿಎಫ್ಐ ಮತ್ತು ಅದರ ಇಸ್ಲಾಂ ಪ್ರಾತಿನಿಧ್ಯದ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಸಂಘಟನೆಯು ಉತ್ತರ ಪ್ರದೇಶದಾದ್ಯಂತ ಯಾತ್ರೆಗಳನ್ನು ನಡೆಸುತ್ತಿದೆ. ನಿಷೇಧಕ್ಕೆ ಆಗ್ರಹಿಸಿ ಎಲ್ಗರ್ ಯಾತ್ರೆ ನಡೆಸುತ್ತಿರುವ ಸದಸ್ಯರು ಶೀಘ್ರದಲ್ಲೇ ದೆಹಲಿ ತಲುಪಲಿದ್ದಾರೆ ಎಂದು ವರದಿಯು ಉಲ್ಲೇಖ ಮಾಡಿದೆ.
ಪಾಕಿಸ್ತಾನ ಮತ್ತು ಟರ್ಕಿಯ ಆಜ್ಞೆಯ ಮೇರೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪವನ್ನು ಮಾಡಿರುವ ಸೂಫಿ ಖಾನ್ಖಾಹ್ ಅಸೋಸಿಯೇಷನ್, ಈ ಸಂಘಟನೆಯು ತಪ್ಪಾಗಿ ಇಸ್ಲಾಂ ಧರ್ಮವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ಅಪ್ರಸ್ತುತ ಭಾರತ ವಿರೋಧಿ ಕಾರ್ಯಸೂಚಿಯನ್ನು ಹೊಂದಿದ್ದಾರೆ ಎಂದು ಕೂಡಾ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸೂಫಿ ಮೊಹಮ್ಮದ್ ಕೌಸರ್ ಹಸನ್ ಮಜಿದಿ ಮಾತನಾಡಿ, "ನೂರಾರು ವರ್ಷಗಳಿಂದ ಜೊತೆಯಾಗಿ ಇರುವುದು ಭಾರತದ ಆಚರಣೆಯಾಗಿದೆ. ಆದರೆ ರಾಷ್ಟ್ರೇತರ ಶಕ್ತಿಗಳ ನೆರವಿನೊಂದಿಗೆ ಪಿಎಫ್ಐ ಭಯಭೀತ ವಿಚಾರಗಳನ್ನು ಪ್ರಚಾರ ಮಾಡುವ ಮೂಲಕ ರಾಷ್ಟ್ರಕ್ಕೆ ಹಾನಿ ಮಾಡುತ್ತಿದೆ. ಆದ್ದರಿಂದ ಕೂಡಲೇ ಈ ಸಂಘಟನೆಯನ್ನು ನಿಷೇಧಿಸಬೇಕು," ಎಂದು ಆಗ್ರಹ ಮಾಡಿದ್ದಾರೆ.

ಪಿಎಫ್ಐ ಬ್ಯಾನ್ಗೆ ಆಗ್ರಹ ಮಾಡಿದ್ದ ಪ್ರತಾಪ್ ಸಿಂಹ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಕರ್ನಾಟಕ ಫೋರಂ ಫಾರ್ ಡಿಗ್ನಿಟಿ (ಕೆಎಫ್ಡಿ)ಯನ್ನು ನಿಷೇಧಿಸುವಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಆಗ್ರಹ ಮಾಡಿದ್ದರು. ರಾಜ್ಯದಲ್ಲಿ ಎರಡು ಸಂಘಟನೆಗಳು ತೊಂದರೆಯನ್ನುಂಟುಮಾಡುತ್ತಿವೆ ಎಂದು ಇತ್ತೀಚಿಗೆ ಆರೋಪಿಸಿದ್ದಾರೆ.
ಎರಡು ಗುಂಪುಗಳು ಕೂಡ ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಬೆಂಗಳೂರಿನಲ್ಲಿ ಗಲಭೆ ಸೃಷ್ಟಿ ಮಾಡಿದೆ, ಈ ನಿಟ್ಟಿನಲ್ಲಿ ಗಲಭೆ, ಸಂಘಟನೆಗಳ ಚಟುವಟಿಕೆಗೆ ಕಡಿವಾಣ ಹಾಕಲು ಸರಕಾರ ನಿಷೇಧ ಹೇರಬೇಕು. ಬೆಂಗಳೂರು ಹಿಂಸಾಚಾರದ ನಂತರ ಶೀಘ್ರದಲ್ಲೇ ಅವರನ್ನು ನಿಷೇಧಿಸಬೇಕಾಗಿತ್ತು ಮತ್ತು ಅವರು ಹಿಜಾಬ್ ವಿಷಯದ ಬಗ್ಗೆ ತೊಂದರೆ ನೀಡಲು ಕರ್ನಾಟಕದಲ್ಲಿ ವಿದ್ಯಾರ್ಥಿ ಸಮುದಾಯವನ್ನು ಪ್ರಚೋದಿಸುತ್ತಿದ್ದಾರೆ," ಎಂದು ಆರೋಪ ಮಾಡಿದರು. ಕೇರಳ ಮೂಲದ ಎರಡು ಸಂಘಟನೆಗಳು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯನ್ನು ಪ್ರವೇಶಿಸಿ ರಾಜ್ಯದಾದ್ಯಂತ ಗಲಭೆ ಸೃಷ್ಟಿಸಲು ತಮ್ಮ ಪ್ರಭಾವವನ್ನು ಹರಡಿದ್ದು, ಅವುಗಳನ್ನು ನಿಷೇಧಿಸಬೇಕು ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಪಿಎಫ್ಐ ನಿಷೇಧಕ್ಕೆ ಒತ್ತಾಯಿಸಿ ಸೂಫಿ ಇಸ್ಲಾಮಿಕ್ ಬೋರ್ಡ್ನಿಂದ ಕೇಂದ್ರಕ್ಕೆ ಪತ್ರ
ವಾದಾತ್ಮಕ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮೇಲೆ ರಾಷ್ಟ್ರವ್ಯಾಪಿ ನಿಷೇಧದ ಬೇಡಿಕೆಗಳು ಈ ಹಿಂದೆ ಕೇಳಿ ಬಂದ ಸಂದರ್ಭದಲ್ಲಿ ಸೂಫಿ ಇಸ್ಲಾಮಿಕ್ ಬೋರ್ಡ್, ಭಯೋತ್ಪಾದಕ ಮತ್ತು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಮತ್ತು ಮುಸ್ಲಿಮರನ್ನು ತೀವ್ರಗಾಮಿಗೊಳಿಸುವ ಸಂಘಟನೆಯನ್ನು ಕೇಂದ್ರವು ನಿಷೇಧಿಸಬೇಕು ಎಂದು ಆಗ್ರಹ ಮಾಡಿದೆ. ಗುಜರಾತ್ ಘಟಕದ ಅಧ್ಯಕ್ಷ ಪಿರ್ ಸೂಫಿ ಸೈಯದ್ ಖಾಲಿದ್ ನಕ್ವಿ ಅಲ್ ಹುಸೇನಿ ಅವರು ತಮ್ಮ ಸಂಘಟನೆಯು ಈಗಾಗಲೇ #banPFI ಅಭಿಯಾನವನ್ನು ನಡೆಸುತ್ತಿದೆ ಎಂದು ತಿಳಿಸಿದ್ದರು.
"ಸರ್ಕಾರದ ವಿವಿಧ ವರದಿಗಳು ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳು ಪಿಎಫ್ಐ ಮತ್ತು ಟರ್ಕಿಯಂತಹ ಭಾರತ ವಿರೋಧಿ ದೇಶಗಳ ನಡುವಿನ ಸಂಪರ್ಕವನ್ನು ಎತ್ತಿ ತೋರಿಸುತ್ತದೆ. ಅಲ್ ಖೈದಾ ಮತ್ತು ಐಸಿಸ್ ಅನ್ನು ಬೆಂಬಲಿಸುವ ಟರ್ಕಿಯ ಭಯೋತ್ಪಾದಕ ಸಂಘಟನೆ ಎಚ್ಐಎಚ್ನೊಂದಿಗೆ ಪಿಎಫ್ಐನ ಉನ್ನತ ನಾಯಕರ ನಡುವಿನ ಸಭೆಯು ಗಂಭೀರ ಕಳವಳಕಾರಿ ವಿಷಯವಾಗಿದೆ," ಎಂದು ಹೇಳಿದೆ. (ಒನ್ಇಂಡಿಯಾ ಸುದ್ದಿ)
-
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications