ಏಕರೂಪ ನಾಗರಿಕ ನೀತಿಸಂಹಿತೆ ಜಾರಿಗೆ ತರಲು ಸಕಾಲ: ಗಿರಿರಾಜ್ ಸಿಂಗ್

ನವದೆಹಲಿ, ಫೆಬ್ರವರಿ 11: ದೇಶದ ಹಲವು ಭಾಗಗಳಲ್ಲಿ ನಡೆಯುತ್ತಿರುವ ಹಿಜಾಬ್ ಪರ-ವಿರೋಧ ಚರ್ಚೆ ಮತ್ತು ಸಂಬಂಧಿತ ಪ್ರತಿಭಟನೆಗಳ ನಡುವೆ, ಭಾರತೀಯ ಜನತಾ ಪಕ್ಷದ ಫೈರ್‌ಬ್ರಾಂಡ್ ನಾಯಕ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಶುಕ್ರವಾರ ಏಕರೂಪ ನಾಗರಿಕ ಸಂಹಿತೆ ಸಮಯದ ಅಗತ್ಯ ಎಂದು ಹೇಳಿದ್ದಾರೆ. ದೇಶಕ್ಕೆ ಎಲ್ಲ ಸಮುದಾಯಗಳಿಗೂ ಅನ್ವಯವಾಗುವ ಒಂದೇ ಕಾನೂನು ಅಗತ್ಯವಿದೆ ಎಂದಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಇಂದಿನ ಅಗತ್ಯವಾಗಿದೆ, ದೇಶ ಒಂದೇ ಆದ್ದರಿಂದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದರು.

ಯುಸಿಸಿಯನ್ನು ಈ "ಸಮಯದ ಅಗತ್ಯ" ಎಂದು ಕರೆದಿರುವ ಗಿರಿರಾಜ್ ಸಿಂಗ್, "ಧರ್ಮ ಮತ್ತು ಪ್ರದೇಶದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ" ಎಂದು ಹೇಳಿದರು.

Hijab Row: Uniform Civil Code Is Need of the Hour, Says Union Minister Giriraj Singh

"ಯುಸಿಸಿ ಸಮಯದ ಅಗತ್ಯವಾಗಿದೆ ಎಂಬ ಪರಿಸ್ಥಿತಿಯನ್ನು ರಚಿಸಲಾಗುತ್ತಿದೆ" ಎಂದು ಅವರು ಹೇಳಿದರು, "ಒಂದು ರಾಷ್ಟ್ರ, ಒಂದು ಕಾನೂನು" ಗೆ ಕರೆ ನೀಡಿದರು.

ಏಕರೂಪ ನಾಗರಿಕ ಸಂಹಿತೆಯು ವಿಭಿನ್ನ ನಂಬಿಕೆಗಳ ಜನರಿಗೆ ವಿಭಿನ್ನ ವೈಯಕ್ತಿಕ ಕಾನೂನುಗಳನ್ನು ಅನುಮತಿಸುವ ಬದಲು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ಮತ್ತು ಇತರ ವೈಯಕ್ತಿಕ ವಿಷಯಗಳನ್ನು ನಿಯಂತ್ರಿಸುವ ಕಾನೂನುಗಳ ಸಾಮಾನ್ಯ ಗುಂಪಾಗಿದೆ. ಸಮಾನತೆಯನ್ನು ಖಚಿತಪಡಿಸುವುದು ಗುರಿಯಾಗಿದೆ.

ಬಿಜೆಪಿ ಸರ್ಕಾರ ಸಂಸತ್ತಿನಲ್ಲಿ ಕಾನೂನನ್ನು ತರಲು ಒತ್ತಾಯಿಸುತ್ತಿದೆ. 2019 ರ ಲೋಕಸಭಾ ಚುನಾವಣೆಯ ಕೇಸರಿ ಪಕ್ಷದ ಪ್ರಣಾಳಿಕೆಯಲ್ಲಿಯೂ ಏಕರೂಪ ನಾಗರಿಕ ಸಂಹಿತೆ ಕಾಣಿಸಿಕೊಂಡಿದೆ.

ಏಕರೂಪ ನಾಗರಿಕ ನೀತಿಸಂಹಿತೆ ಎಂದರೇನು?: ಜನರು ಒಳಪಡುವ ಧರ್ಮ, ಜಾತಿ ಮತ್ತು ಜನಾಂಗ/ಬುಡಕಟ್ಟುಗಳ ಹೊರತಾಗಿ ಎಲ್ಲಾ ಜನರಿಗೆ ಅನ್ವಯಿಸುವ ಒಂದೇ ವರ್ಗದ ಜಾತ್ಯತೀತ ಪೌರ ಕಾನೂನುಗಳ ಮೂಲಕ ಆಡಳಿತ ನಡೆಸುತ್ತದೆ. ಈ ಕಾನೂನು ತಮ್ಮ ಧರ್ಮ ಅಥವಾ ಜಾತಿ ಅಥವಾ ಜನಾಂಗ/ಬುಡಕಟ್ಟುಗಳ ಮೇಲೆ ಆಧಾರಿತವಾಗಿ ಪ್ರತ್ಯೇಕ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ಆಡಳಿತಕ್ಕೊಳಪಡುವ ನಾಗರಿಕರ ಹಕ್ಕನ್ನು ರದ್ದುಗೊಳಿಸುತ್ತದೆ. ಅಂತಹಾ ಸಂಹಿತೆಗಳು ಬಹುತೇಕ ಆಧುನಿಕ ರಾಷ್ಟ್ರಗಳಲ್ಲಿ ಈಗಾಗಲೇ ಜಾರಿಯಲ್ಲಿವೆ. ನಾಗರಿಕ ನೀತಿಸಂಹಿತೆಯ ವ್ಯಾಪ್ತಿಯಲ್ಲಿ ಒಳಪಡುವ ಸಾಮಾನ್ಯ ಕ್ಷೇತ್ರಗಳೆಂದರೆ ಆಸ್ತಿಪಾಸ್ತಿಗಳ ಸ್ವಾಧೀನಪಡಿಸಿಕೊಳ್ಳುವಿಕೆ ಮತ್ತು ಆಡಳಿತ, ಮದುವೆ, ವಿಚ್ಛೇದನ ಮತ್ತು ದತ್ತುಸ್ವೀಕಾರಗಳಾಗಿವೆ.

"118ನೇ ವಿಧಿಯಲ್ಲಿನ ಭಾರತೀಯ ಉತ್ತರಾಧಿಕಾರ ಕಾಯ್ದೆಯು ಅಸಂವಿಧಾನಾತ್ಮಕ ಎಂದು ಘೋಷಿಸಿದ ನ್ಯಾಯಪೀಠ- 44ನೇ ವಿಧಿಯನ್ವಯ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು ಸರ್ಕಾರದ ಕರ್ತವ್ಯ" ಎಂದು ನ್ಯಾಯಮೂರ್ತಿ ವಿ.ಎಸ್ ಖಾರೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು 2003ರಲ್ಲಿ ಅಭಿಪ್ರಾಯಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.

ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಕುರಿತು ಭಾರತೀಯ ಜನತಾ ಪಕ್ಷ ದಶಕಗಳಿಂದ ಆಸಕ್ತಿ ತೋರುತ್ತಾ ಬಂದಿದೆ. ಆದರೆ, ಕಾಂಗ್ರೆಸ್‌ ಸೇರಿದಂತೆ ಪ್ರಮುಖ ಪ್ರತಿ ಪಕ್ಷಗಳು ಏಕರೂಪ ನಾಗರಿಕ ಸಂಹಿತೆಯ ವಿರೋಧಿ ನಿಲುವು ತಳೆದಿವೆ.

ಕರ್ನಾಟಕದ ಹಿಜಾಬ್ ಕೇಸ್: ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧ ಮಾಡಿರುವ ವಿಚಾರವನ್ನು ನಿರ್ಧರಿಸುವವರೆಗೆ ಹಿಜಾಬ್, ಕೇಸರಿ ಶಾಲು (ಭಾಗ್ವಾ) ಅಥವಾ ಬೇರಾವುದೇ ಧಾರ್ಮಿಕ ಬಾವುಟಗಳನ್ನು ಇಟ್ಟುಕೊಂಡು ಕಾಲೇಜಿಗೆ ತೆರಳದಂತೆ ವಿದ್ಯಾರ್ಥಿಗಳಿಗೆ ಆದೇಶಿಸಿ ಕರ್ನಾಟಕ ಹೈಕೋರ್ಟ್‌ ಗುರುವಾರ ಮಧ್ಯಂತರ ಆದೇಶ ಮಾಡಿದೆ.

ವಿದ್ಯಾರ್ಥಿಗಳಿಗೆ ಸಮವಸ್ತ್ರ ಸಂಹಿತೆ ವಿಧಿಸಿ ಕಾಲೇಜು ಅಭಿವೃದ್ಧಿ ಸಮಿತಿಗಳು ಆದೇಶ ಮಾಡಲ್ಪಟ್ಟಿರುವ ಕಾಲೇಜುಗಳಿಗೆ ಆದೇಶ ಅನ್ವಯಿಸುತ್ತದೆ ಎಂದು ಪೀಠವು ಆದೇಶದಲ್ಲಿ ಸ್ಪಷ್ಟಪಡಿಸಿದೆ. ಹೀಗಾಗಿ, ಸಮವಸ್ತ್ರ ಸಂಹಿತೆ ವಿಧಿಸದ ಕಾಲೇಜುಗಳಿಗೆ ನ್ಯಾಯಾಲಯದ ಆದೇಶ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.

"ನಮ್ಮದು ಹಲವು ಸಂಸ್ಕೃತಿಗಳನ್ನು ಒಳಗೊಂಡ ಬಹುಸಂಸ್ಕೃತಿಯ ನಾಡು ಎಂದು ವಿವರಿಸುವ ಅಗತ್ಯವಿಲ್ಲ. ಜಾತ್ಯತೀತವಾದ ನಮ್ಮ ರಾಷ್ಟ್ರವು ಯಾವುದೇ ಒಂದು ನಿರ್ದಿಷ್ಟ ಧರ್ಮದ ಜೊತೆ ಗುರುತಿಸಿಕೊಳ್ಳುವುದಿಲ್ಲ. ಪ್ರತಿಯೊಬ್ಬ ಪ್ರಜೆಯು ತಮ್ಮ ಇಚ್ಛೆಯ ನಂಬಿಕೆ ಪಾಲಿಸುವ ಹಕ್ಕು ಹೊಂದಿದ್ದಾರೆ ಎಂಬುದು ಸತ್ಯ. ಅದಾಗ್ಯೂ, ಅದು ಪರಿಪೂರ್ಣವಾಗಿಲ್ಲ. ನಿರ್ದಿಷ್ಟ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ ಎಂದು ಸಂವಿಧಾನದಲ್ಲಿ ಹೇಳಲಾಗಿದೆ" ಎಂದು ಪೀಠವು ವಿವರಿಸಿದೆ.

Recommended Video

      ತಕ್ಷಣವೇ Ukraine ತೊರೆಯುವಂತೆ ಅಮೆರಿಕನ್ನರಿಗೆ ಎಚ್ಚರಿಕೆ ಕೊಟ್ಟ Joe Biden | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+