ಹಿಜಾಬ್ ವಿವಾದ: ಹೈಕೋರ್ಟ್ ಏನೇ ನಿರ್ಧಾರ ಕೈಗೊಂಡರೂ ರಾಜಕೀಯ ಲಾಭ ಎಂದ ಬಿಜೆಪಿ
ನವದೆಹಲಿ, ಫೆಬ್ರವರಿ 17: ಕೆಲವು ವಾರಗಳಿಂದ ಕರ್ನಾಟಕದಲ್ಲಿ ಹಿಜಾಬ್ ವಿವಾದ ಭಾರೀ ಸುದ್ದಿ ಮಾಡುತ್ತಿದೆ. ಈ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದರೂ, ಶಾಲೆಗಳಲ್ಲಿ ಬಿಗುವಿನ ಪರಿಸ್ಥಿತಿ ಮುಂದುವರಿದಿದೆ. ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಲೆಕ್ಕಿಸದೆ ಸೋಮವಾರ 40 ಯುವತಿಯರು ತಮ್ಮ ಹಿಜಾಬ್ಗಳನ್ನು ತೆಗೆದುಹಾಕುವ ಬದಲು ಮನೆಗೆ ಮರಳಲು ನಿರ್ಧಾರ ಮಾಡಿದ್ದಾರೆ. ಈ ನಡುವೆ ಹೈಕೋರ್ಟ್ನ ಯಾವುದೇ ನಿರ್ಧಾರ ಕೈಗೊಂಡರೂ ರಾಜಕೀಯ ಲಾಭವಾಗಲಿದೆ ಎಂದು ಬಿಜೆಪಿ ಹೇಳಿಕೊಂಡಿದೆ.
ಫೆಬ್ರವರಿ 16 ರಂದು ಕಾಲೇಜುಗಳು ಪುನರಾರಂಭವಾಗಿದ್ದು ತರಗತಿ ಕೊಠಡಿಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸಬಾರದು ಎಂಬ ಕರ್ನಾಟಕ ಹೈಕೋರ್ಟ್ ಆದೇಶವು ಅನ್ವಯವಾಗುತ್ತದೆ. ಈ ನಡುವೆ ಆಡಳಿತಾರೂಢ ಬಿಜೆಪಿಗೆ, ನ್ಯಾಯಾಲಯಗಳು ಅಂತಿಮವಾಗಿ ಯಾವ ರೀತಿಯಲ್ಲಿ ತೀರ್ಪು ನೀಡಿದರೂ, ಇದು ರಾಜಕೀಯ ಲಾಭವನ್ನು ಮಾತ್ರ ಪಡೆಯುವ ವಿವಾದವಾಗಿದೆ ಎಂದು ಬಿಜೆಪಿ ಹಿರಿಯ ನಾಯಕರು ಹೇಳಿರುವುದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
"ರಾಜ್ಯದಲ್ಲಿ ಹಿಜಾಬ್ ವಿಚಾರವು ತಮ್ಮ ಹಿಂದುತ್ವದ ಯೋಜನೆಯ ಭಾಗವಲ್ಲ. ಇದನ್ನು ನಾವು ಪ್ರಾರಂಭ ಮಾಡಿದಲ್ಲ," ಎಂದು ಹೇಳುವ ಬಿಜೆಪಿ ಹಿರಿಯ ನಾಯಕರೊಬ್ಬರು, "ಇದನ್ನು ಆರಂಭ ಮಾಡಿದ್ದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿ ಘಟಕವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ). ಇದರಿಂದಾಗಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿವಾದ ಹುಟ್ಟಿಕೊಂಡಿತು. ಇದು ಕರಾವಳಿ ಕರ್ನಾಟಕದಲ್ಲಿ ರಾಜಕೀಯ ಲಾಭ ಪಡೆಯಲು ಸಿಎಫ್ಐ ಪ್ರಯತ್ನದ ಭಾಗವಾಗಿದೆ. ಆದರೆ ರಾಜ್ಯವ್ಯಾಪಿ ವಿಷಯವಾಗಿ ಬಿ.ಜೆ.ಪಿ.ಗೆ ಅವಕಾಶವಾಗಿದೆ," ಎಂಬುವುದನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯು ಉಲ್ಲೇಖ ಮಾಡಿದೆ.

ಈ ವಿವಾದವನ್ನು ಆರಂಭ ಮಾಡಿದ್ದು ಯಾರು?: ಬಿಜೆಪಿ ಹೇಳುವುದು ಹೀಗೆ
"ಸಮಸ್ಯೆಯನ್ನು ನಾವು ಆರಂಭಿಸಿಲ್ಲ. ಸಿಎಫ್ಐ ಮತ್ತು ಎಸ್ಡಿಪಿಐ ಈ ವಿಷಯವನ್ನು ಬಳಸಿಕೊಂಡು ಕರಾವಳಿ ಕರ್ನಾಟಕದಲ್ಲಿ ರಾಜಕೀಯ ಲಾಭ ಪಡೆಯಲು ಬಯಸಿದ್ದವು. ಆದರೆ ನಮಗೆ ಈ ಅವಕಾಶವನ್ನು ಈಗ ನೀಡಲಾಗಿದೆ," ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದರು. "ಇತರ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅನುಮತಿ ನೀಡಬೇಕು ಎಂದು ಒತ್ತಾಯಿಸಲು ಪ್ರಾರಂಭಿಸಿದ ನಂತರ ಇದು ದೊಡ್ಡ ಸಮಸ್ಯೆಯಾಯಿತು ಮತ್ತು ಅದರೊಂದಿಗೆ ಹಿಂದೂ ವಿದ್ಯಾರ್ಥಿಗಳು ತಮ್ಮ ಕೇಸರಿ ಶಾಲು ಪ್ರತಿಭಟನೆಯಿಂದ ಹಿಂದೆ ಸರಿಯದಂತಹ ನಿಲುವು ತೆಗೆದುಕೊಂಡದರು," ಎಂದು ಹೆಸರು ಉಲ್ಲೇಖಿಸಲು ಬಯಸದ ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯಾದ್ಯಂತ ಕಾಲೇಜುಗಳಲ್ಲಿ ಸಾವಿರಾರು ಯುವಕರು ಹಿಂದುತ್ವದ ಪರ ನಿಲುವು ತಳೆದಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಮತಬ್ಯಾಂಕ್ ಆಗಲಿದೆ ಎಂದು ಕೂಡಾ ಬಿಜೆಪಿ ಆಶಯ ಹೊಂದಿರುವಂತೆ ಕಂಡು ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಹಿರಿಯ ನಾಯಕರು, "ವಿದ್ಯಾರ್ಥಿಗಳು ಈಗ ಬಿಜೆಪಿ ಮತ್ತು ಸಂಘದ ಸೈದ್ಧಾಂತಿಕ ನಿಲುವಿಗೆ ತೆರೆದುಕೊಂಡಿದ್ದಾರೆ ಮತ್ತು ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ. ಅವರಲ್ಲಿ ಹಲವರು ವಿಧಾನಸಭೆ, ಇತರೆ ಚುನಾವಣೆಗಳಲ್ಲಿ ನಮಗೆ ಮತ ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ ಎಂದು ನಾವು ಭಾವಿಸುತ್ತೇವೆ," ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ವಿಭಜನೆ
"ನಾವು ಕೆಲವು ವಿದ್ಯಾರ್ಥಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ಅವರು ಎಷ್ಟು ಸ್ಪಷ್ಟವಾಗಿದ್ದಾರೆ ಮತ್ತು ಅವರು ಎಷ್ಟು ಬದ್ಧರಾಗಿದ್ದಾರೆಂದು ನೋಡಿದಾಗ ನಮಗೆ ಆಶ್ಚರ್ಯವಾಗುತ್ತದೆ. ಅವರಲ್ಲಿ ಹಲವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸದಸ್ಯರೂ ಅಲ್ಲ. ಅವರನ್ನೂ ರಾಜಕೀಯವಾಗಿ ಬೆಳೆಸಲು ಇದು ಖಂಡಿತಾ ಅವಕಾಶವಾಗಿದೆ. ಈಗ ವಿದ್ಯಾರ್ಥಿಗಳಲ್ಲಿ ಈಗ ಭಿನ್ನಾಭಿಪ್ರಾಯವಿದೆ. ಅಕ್ಕಪಕ್ಕದಲ್ಲಿ ಕುಳಿತಿದ್ದ ಮುಸ್ಲಿಮರು ಮತ್ತು ಹಿಂದೂ ವಿದ್ಯಾರ್ಥಿಗಳು ಹಗೆತನ ತೋರಿದ್ದಾರೆ. ಮತ್ತು ಇದು ಬಿಜೆಪಿಯ ತಯಾರಿಕೆಯಲ್ಲದಿದ್ದರೂ, ಇದನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ," ಎಂದು ಹೇಳಿದ್ದಾರೆ. (ಒನ್ಇಂಡಿಯಾ ಸುದ್ದಿ)
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications