ಹೈಜಾಕ್ ಬೆದರಿಕೆ, ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್
ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ಏರ್ಪೋರ್ಟ್ ಗಳಲ್ಲಿ ವಿಮಾನ ಹೈಜಾಕ್ ಮಾಡಲಾಗುವುದು ಎಂದು ಬೆದರಿಕೆ ಬಂದಿದ್ದರಿಂದ ಈ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಮುಂಬೈ, ಏಪ್ರಿಲ್ 16: ವಿಮಾನ ಹೈಜಾಕ್ ಮಾಡುವುದಾಗಿ ಬೆದರಿಕೆ ಇ-ಮೇಲ್ ಬಂದ ಹಿನ್ನಲೆಯಲ್ಲಿ ದೇಶದ ಪ್ರಮುಖ ಮೂರು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಮುಖವಾಗಿ ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ಏರ್ಪೋರ್ಟ್ ಗಳಲ್ಲಿ ವಿಮಾನ ಹೈಜಾಕ್ ಮಾಡಲಾಗುವುದು ಎಂದು ಬೆದರಿಕೆ ಬಂದಿದ್ದರಿಂದ ಈ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

"ಸುಮಾರು 23 ಜನರ ತಂಡವೊಂದು ವಿವಿಧ ಏರ್ಪೋರ್ಟ್ ಗಳಿಂದ ವಿಮಾನಗಳನ್ನು ಅಪಹರಣ ನಡೆಸಲಿದೆ," ಎಂದು ಹೈದರಾಬಾದ್ ಮಹಿಳೆಯಿಂದ ಮುಂಬೈ ಪೊಲೀಸರಿಗೆ ಇ-ಮೇಲ್ ಬಂದಿತ್ತು. ಇದಾದ ಬೆನ್ನಿಗೆ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ಇ-ಮೇಲ್ ನಲ್ಲಿ ಮಹಿಳೆಯು, "ಆರು ಜನ ವಿಮಾನ ಹೈಜಾಕ್ ಮಾಡುವ ಕುರಿತು ಚರ್ಚಿಸುತ್ತಿದ್ದರು," ಎಂದು ಉಲ್ಲೇಖಿಸಿದ್ದಾರೆ. ಮುಂಬೈ ಪೊಲೀಸರು ಈ ಇ-ಮೇಲನ್ನು ಗುಪ್ತಚರ ಇಲಾಖೆ ಸೇರಿದಂತೆ ಏರ್ಪೋರ್ಟ್ ಗಳಿಗೆ ರವಾನಿಸಿದ್ದಾರೆ. ಇನ್ನು ಪೊಲೀಸರು ಇ-ಮೇಲ್ ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮೂರು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು ಸೇರಿದಂತೆ ದೇಶದ ಇತರ ವಿಮಾನ ನಿಲ್ದಾಣಗಳಲ್ಲಿಯೂ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೆದರಿಕೆ ಹಿನ್ನಲೆಯಲ್ಲಿ ವಿಶೇಷ ವಿಮಾನ ನಿಲ್ದಾಣ ಭದ್ರತಾ ಸಮಿತಿ ಸಭೆಯನ್ನು ನಿನ್ನೆ ರಾತ್ರಿ ಆಯಾ ವಿಮಾನ ನಿಲ್ದಾಣಗಳಲ್ಲಿ ನಡೆಸಲಾಗಿದೆ. ಈ ಸಮಿತಿಯು ಭದ್ರತೆ ನಿರ್ವಹಿಸುವ ಸಿಬ್ಬಂದಿಗಳಿಗೆ ಮೈಯೆಲ್ಲಾ ಕಣ್ಣಾಗಿರುವಂತೆ ಸೂಚನೆ ನೀಡಿದೆ.
ಪ್ರಯಾಣಿಕರನ್ನು ಸಂಪುರ್ಣ ಪರಿಶೀಲನೆ ಮಾಡಿ. ಕೊನೆಯ ಕ್ಷಣದಲ್ಲಿ ಚೆಕ್ ಇನ್ ಗೊಂದಲಗಳನ್ನು ತಪ್ಪಿಸಿ. ಏರ್ಪೋರ್ಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಿ ಎಂದು ಕಟ್ಟಪ್ಪಣೆ ಹೊರಡಿಸಲಾಗಿದೆ.
ಜತೆಗೆ ಶ್ವಾನದಳ, ಕ್ಷಿಪ್ರ ಕಾರ್ಯಾಚರಣೆ ಪಡೆಗಳನ್ನೂ ಏರ್ಪೋರ್ಟಿಗೆ ಕಳುಹಿಸಿಕೊಡಲಾಗಿದೆ. "ಚೆನ್ನೈ, ಮುಂಬೈ, ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಭದ್ರತೆಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಲಾಗಿದೆ ," ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾ ನಿರ್ದೇಶಕ ಒ.ಪಿ.ಸಿಂಗ್ ತಿಳಿಸಿದ್ದಾರೆ.
ಹೀಗಿದ್ದೂ, "ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಯಾರೂ ಚಿಂತಿಸುವ ಅಗತ್ಯವಿಲ್ಲ," ಎಂದು ಹಿರಿಯ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಹೇಳಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications