Himachal Pradesh: ಸಿಎಂ ರೇಸ್ನಿಂದ ಹೊರಗುಳಿದ ಪ್ರತಿಭಾ ಸಿಂಗ್
ಶಿಮ್ಲಾ, ಡಿಸೆಂಬರ್ 10: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಪಟ್ಟಾಭಿಷೇಕಕ್ಕೆ ಹೊಸ ತಿರುವು ಸಿಕ್ಕಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿ ರೇಸ್ನಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ನಡೆದ ಕಾಂಗ್ರೆಸ್ ಸಭೆಗೂ ಮುನ್ನ ಪ್ರತಿಭಾ ಸಿಂಗ್ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದರು.
'ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಹೆಸರನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಾಗಿದೆ. ಆ ಹಿನ್ನೆಲೆಯಲ್ಲಿ ವೀರಭದ್ರ ಸಿಂಗ್ ಕುಟುಂಬವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ' ಎಂದು ಪ್ರತಿಭಾ ಸಿಂಗ್ ಹೇಳಿದ್ದರು.
'ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ನನಗೆ ದೊಡ್ಡ ಜವಾಬ್ದಾರಿಗಳನ್ನು ನೀಡಿದ್ದಾರೆ. ಅವರು ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷಳನ್ನಾಗಿ ಆಯ್ಕೆ ಮಾಡಿದ್ದಾರೆ. ಆ ನಂತರ ರಾಜ್ಯದ ಎಲ್ಲಾ 68 ಕ್ಷೇತ್ರಗಳಿಗೆ ಭೇಟಿ ನೀಡಿದ್ದೇನೆ. ರಾಜ್ಯದಲ್ಲಿ ಪಕ್ಷ ಗೆಲ್ಲುವುದು ಖಚಿತವೆಂದು ನನಗೆ ತಿಳಿದಿತ್ತು. ನಾನು ನನ್ನ ಕೆಲಸವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ' ಎಂದು ತಿಳಿಸಿದ್ದರು.

ಆದರೆ, ಈಗ ಪ್ರತಿಭಾ ಸಿಂಗ್ ಅವರೇ ಸಿಎಂ ರೇಸ್ನಿಂದ ಹೊರಗುಳಿದಿರುವುದು ಅಚ್ಚರಿಗೆ ಕಾರಣವಾಗಿದೆ. ಅವರು ಹೊಸದಾಗಿ ಆಯ್ಕೆಯಾಗಿರುವ ನಲವತ್ತು ಶಾಸಕರ ಬೆಂಬಲವನ್ನು ಹೊಂದಿಲ್ಲವೆಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಅವರನ್ನು ಸ್ಪರ್ಧೆಯಿಂದ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
25 ಕ್ಕೂ ಹೆಚ್ಚು ಶಾಸಕರ ಬೆಂಬಲವನ್ನು ಹೊಂದಿರುವ ಮಾಜಿ ರಾಜ್ಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಈಗ ಮುಖ್ಯಮಂತ್ರಿ ಹುದ್ದೆಗೆ ನೆಚ್ಚಿನವರಾಗಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಕೂಡ ರೇಸ್ನಲ್ಲಿದ್ದಾರೆ.

ಹಮೀರ್ಪುರ ಜಿಲ್ಲೆಯ ನಾದೌನ್ನಿಂದ ಮೂರನೇ ಬಾರಿ ಶಾಸಕರಾದ ಸುಖವಿಂದರ್ ಸಿಂಗ್ ಸುಖು ಅವರು ವೃತ್ತಿಯಿಂದ ವಕೀಲರಾಗಿದ್ದಾರೆ. ಕಾಂಗ್ರೆಸ್ ಸ್ಟೂಡೆಂಟ್ ವಿಂಗ್ ಅನ್ನು ಅವರು ಮುನ್ನಡೆಸಿದ್ದರು.
ಎರಡು ದಶಕಗಳ ಹಿಂದೆ ಪತ್ರಿಕೋದ್ಯಮದಿಂದ ರಾಜಕೀಯಕ್ಕೆ ಕಾಲಿಟ್ಟ ನಂತರ ಮುಖೇಶ್ ಅಗ್ನಿಹೋತ್ರಿ ಅವರು ತಮ್ಮ ಐದನೇ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications