ಹಿಮಾಚಲ, ಗುಜರಾತ್ ಚುನಾವಣೆ: ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟಣೆಗೆ ನಿಷೇಧ
ಇನ್ನು ಕೆಲವೇ ದಿನಗಳಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಚುನಾವಣೋತ್ತರ ಸಮೀಕ್ಷೆ ನಡೆಸುವ ಮತ್ತು ಯಾವುದೇ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸುವುದನ್ನು ನಿಷೇಧಿಸಿದೆ. ಹಿಮಾಚಲ ಪ್ರದೇಶದ ಎಲ್ಲಾ 68 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಒಂದೇ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಈ ನಿಷೇಧಾಜ್ಞೆ ಹೊರಡಿಸಲಾಗಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮೀಕ್ಷೆಗಳನ್ನು ನಡೆಸುವುದು ಅಥವಾ ಪ್ರಕಟಿಸುವುದನ್ನು ನವೆಂಬರ್ 12 ರಿಂದ ನಿಷೇಧಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 5ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಚುನಾವಣಾ ಆಯೋಗ "12-11-2022 ರಂದು ಬೆಳಿಗ್ಗೆ 8 ರಿಂದ 05-12-2022 ರಂದು ಸಂಜೆ 5.30 ರ ನಡುವಿನ ಅವಧಿಯಲ್ಲಿ ಯಾವುದೇ ಎಕ್ಸಿಟ್ ಪೋಲ್ ನಡೆಸುವ ಮತ್ತು ಯಾವುದೇ ಎಕ್ಸಿಟ್ ಪೋಲ್ನ ಫಲಿತಾಂಶವನ್ನು ಪ್ರಕಟಿಸುವಂತಿಲ್ಲ'' ಎಂದಿದೆ.

ಬಿಸಿಯೇರಿದ ರಾಜಕೀಯ ಅಖಾಡ
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ರಾಜಕೀಯ ಅಖಾಡ ಬಿಸಿಯೇರುತ್ತಿದೆ. ಮೊದಲ ಹಂತದಲ್ಲಿ ಹಿಮಾಚಲ ಪ್ರದೇಶದ ಎಲ್ಲಾ 68 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಒಂದೇ ಹಂತದಲ್ಲಿ ಮತದಾನ ಆರಂಭವಾಗಲಿದೆ. ಮುಂದಿನ ತಿಂಗಳು 8ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ. ಈ ರಾಜ್ಯದ ಮಟ್ಟಿಗೆ ಹೇಳುವುದಾದರೆ, ಆಡಳಿತ ಪಕ್ಷವು ಸತತ ಎರಡನೇ ಅವಧಿಗೆ ಗೆಲ್ಲುವುದಿಲ್ಲ. ಒಮ್ಮೆ ಒಂದು ಪಕ್ಷ ಅಧಿಕಾರಕ್ಕೆ ಬಂದರೆ ಮುಂದಿನ ಬಾರಿ ವಿರೋಧ ಪಕ್ಷ ಅಧಿಕಾರಕ್ಕೆ ಬರುತ್ತದೆ ಎನ್ನಲಾಗುತ್ತಿದೆ.

ಬಿಜೆಪಿ ಸೋಲಿಸುವ ವಿಶ್ವಾಸದಲ್ಲಿ ಕಾಂಗ್ರೆಸ್
ಈ ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸುಲಭವಾಗಿ ಸೋಲಿಸಬಹುದು ಎಂಬ ವಿಶ್ವಾಸದೊಂದಿಗೆ ಕಾಂಗ್ರೆಸ್ ತನ್ನ ಪ್ರಚಾರವನ್ನು ಮುಗಿಸಿದೆ. ನಿನ್ನೆಯಿಂದ ರಾಜ್ಯಾದ್ಯಂತ ಪ್ರಚಾರ ಸ್ಥಗಿತಗೊಳಿಸಲಾಗಿದೆ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪರವಾಗಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಅದೇ ರೀತಿ ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಇದು ರಾಜ್ಯದ ಜನರಲ್ಲಿ ಜನಪ್ರಿಯತೆ ಗಳಿಸಿದೆ. ಇನ್ನೊಂದೆಡೆ ಬಿಜೆಪಿಯವರು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾ ಪ್ರಚಾರ ನಡೆಸಿದರು. ಅಮಿತ್ ಶಾ ಸೇರಿದಂತೆ ಪ್ರಮುಖರು ಸದ್ಯ ಹಿಮಾಚಲದಲ್ಲಿ ಬೀಡು ಬಿಟ್ಟಿದ್ದಾರೆ.

ಅಭಿಪ್ರಾಯ ಸಂಗ್ರಹ ಪ್ರಕಟಣೆಗೆ ನಿಷೇಧ
ಈ ವೇಳೆ ರಾಜ್ಯದಲ್ಲಿ ಬಿಜೆಪಿ ಅದ್ಧೂರಿಯಾಗಿ ಗೆಲುವು ಸಾಧಿಸಲಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಬಿಜೆಪಿ ಕಡಿಮೆ ಸಂಖ್ಯಾಬಲದಿಂದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳು ಬಹಿರಂಗಪಡಿಸಿವೆ. ಆದರೆ ನಾಳೆಯಿಂದ ಮುಂದಿನ ತಿಂಗಳು 5ರವರೆಗೆ ಹಿಮಾಚಲ ಪ್ರದೇಶ ಮತ್ತು ಗುಜರಾತ್ ನಲ್ಲಿ ಸಮೀಕ್ಷೆಗಳನ್ನು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ಆದೇಶಿಸಿದೆ. ಹಿಮಾಚಲದಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಈಗಾಗಲೇ ಹೇಳಿದ್ದ ಸಮೀಕ್ಷೆಗಳನ್ನೂ ಬಿಡುಗಡೆ ಮಾಡಲು ಅನುಮತಿ ನಿರಾಕರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಮೋದಿ ಮತ್ತು ಅಮಿತ್ ಶಾ ತವರು ರಾಜ್ಯದಲ್ಲಿ 'ಕೈ' ಆಟ
ಹಿಮಾಚಲದ ಪರಿಸ್ಥಿತಿ ಹೀಗಿದ್ದರೆ, ಗುಜರಾತ್ನಲ್ಲಿ ಮೋರ್ಬಿ ಸೇತುವೆ ಅಪಘಾತದ ಬಗ್ಗೆ ವ್ಯಾಪಕವಾಗಿ ಮಾತನಾಡಲಾಗುತ್ತಿದೆ. ರಾಜ್ಯದ 182 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫಲಿತಾಂಶದ ಬಗ್ಗೆ ಹೇಳುವುದಾದರೆ, ಎರಡೂ ರಾಜ್ಯಗಳಿಗೆ ಡಿಸೆಂಬರ್ 8 ರಂದು ಅಧಿಸೂಚನೆಯನ್ನು ನೀಡಲಾಗುತ್ತದೆ. ಇದು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾಗಿರುವುದರಿಂದ ಮತ್ತು 'ಗುಜರಾತ್ ಮಾದರಿ'ಯನ್ನು ತೋರಿಸಿ ಇತರ ರಾಜ್ಯಗಳ ಮತದಾರರನ್ನು ಸೆಳೆಯಲು ಬಿಜೆಪಿ ಈ ಚುನಾವಣೆಯಲ್ಲಿ ಗೆಲ್ಲುವ ಬಿಕ್ಕಟ್ಟಿನಲ್ಲಿದೆ.

ಗುಜರಾತ್ ಸರ್ಕಾರಿ ಶಾಲೆಗಳ ಸ್ಥಿತಿ ಟೀಕಿಸಿದ ಎಎಪಿ
ಹೀಗಾಗಿ ಈ ಬಾರಿ ಪಕ್ಷದ ವರಿಷ್ಠರಿಗೆ 'ಸೀಟು' ನೀಡುವ ಬದಲು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ. ಇದರಿಂದ ಪಕ್ಷದ ನಾಯಕತ್ವದ ಬಗ್ಗೆ ಹಿರಿಯ ನಾಯಕರು ಅತೃಪ್ತರಾಗಿದ್ದಾರೆ. ಮತ್ತೊಂದೆಡೆ, ಕಳೆದ 2 ದಿನಗಳಲ್ಲಿ 3 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಭಾರಿ ದೊಡ್ಡ ಹಿನ್ನೆಡೆಯಾದರೂ ಆಮ್ ಆದ್ಮಿ ಪಕ್ಷವು ಸವಾಲಾಗಿಯೇ ಉಳಿದಿದೆ. ಆಮ್ ಆದ್ಮಿ ಪಕ್ಷ ಗುಜರಾತ್ ಸರ್ಕಾರಿ ಶಾಲೆಗಳ ಸ್ಥಿತಿ, ಮೋರ್ಬಿ ಸೇತುವೆ ಅಪಘಾತ ಇತ್ಯಾದಿಗಳನ್ನು ಟೀಕಿಸುತ್ತಿದೆ. ಹಾಗಾದರೆ ಈ ಬಾರಿ ಗುಜರಾತ್ ಜನತೆ ಬಿಜೆಪಿಯನ್ನು ಬೆಂಬಲಿಸುತ್ತಾರಾ? ಎಂಬ ಅನುಮಾನ ಮೂಡಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅಭಿಪ್ರಾಯ ಸಂಗ್ರಹ ಪ್ರಕಟಣೆಗೆ ನಿಷೇಧ ಹೇರಿದೆ.
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications