ಹಿಮಾಚಲದಲ್ಲಿ ಸೋತ ಕಾಂಗ್ರೆಸ್, ರಾಜೀನಾಮೆ ನೀಡಿದ ವೀರಭದ್ರ ಸಿಂಗ್
ಶಿಮ್ಲಾ, ಡಿಸೆಂಬರ್ 19: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸಿನ ವೀರಭದ್ರ ಸಿಂಗ್ ರಾಜೀನಾಮೆ ನೀಡಿದ್ದಾರೆ.
ಸೋಮವಾರ ಹೊರಬಿದ್ದ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. 68 ಕ್ಷೇತ್ರಗಳಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಗೆದ್ದು ಹಿಮಾಚಲ ಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿತ್ತು. ಕಾಂಗ್ರೆಸ್ 21 ಸ್ಥಾನಗಳಲ್ಲಷ್ಟೇ ಗೆದ್ದು ಸೋಲು ಕಂಡಿತ್ತು. ಇತರರು ಮೂರು ಸ್ಥಾನಗಳಲ್ಲಿ ಗೆದ್ದಿದ್ದರು.
ಸೋಲು ಕಂಡ ಹಿನ್ನಲೆಯಲ್ಲಿ ಇಂದು ವೀರಭದ್ರ ಸಿಂಗ್ ರಾಜ್ಯಪಾಲ ಆಚಾರ್ಯ ದೇವರತ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸಿರುವ ರಾಜ್ಯಪಾಲರು ಹೊಸ ಸರಕಾರ ಅಧಿಕಾರಕ್ಕೆ ಬರುವವರೆಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವಂತೆ ವಿನಂತಿಸಿಕೊಂಡಿದ್ದಾರೆ.

ರಾಂಪುರ್ ಬುಶಾರ್ ರಾಜಮನೆತನಕ್ಕೆ ಸೇರಿದ 83 ವರ್ಷದ ವೀರಭದ್ರ ಸಿಂಗ್ 8 ಬಾರಿ ಹಿಮಾಚಲ ಪ್ರದೇಶ ವಿಧಾನಸಭೆ ಪ್ರವೇಶಿಸಿದ್ದಾರೆ. ಸೋಮವಾರ ಹೊರ ಬಿದ್ದ ಫಲಿತಾಂಶದಲ್ಲಿ ಅವರು 6,051 ಮತಗಳಿಂದ ಬಿಜೆಪಿಯ ರತನ್ ಸಿಂಗ್ ಪಾಲ್ ರನ್ನು ಸೋಲಿಸಿದ್ದಾರೆ.
1962ರಲ್ಲಿ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ ವೀರಭದ್ರ ಸಿಂಗ್ ರದ್ದು 55 ವರ್ಷಗಳ ರಾಜಕೀಯ ಜೀವನ. ಈ ಅವಧಿಯಲ್ಲಿ ಅವರು ನಾಲ್ಕು ಬಾರಿ ಲೋಕಸಭೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದು ಆರು ಬಾರಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿಯಾಗಿದ್ದಾರೆ.
ನಾಲ್ಕು ಬೇರೆ ಬೇರೆ ಕ್ಷೇತ್ರಗಳಿಂದ ವಿಧಾನಸಭೆ ಪ್ರವೇಶಿಸಿರುವ ವೀರಭದ್ರ ಸಿಂಗ್ ಈ ಬಾರಿ ತಮ್ಮ ಶಿಮ್ಲಾ ಗ್ರಾಮೀಣ ಕ್ಷೇತ್ರವನ್ನು ಪುತ್ರ ವಿಕ್ರಮಾದಿತ್ಯಸಿಂಗ್ ರಿಗೆ ಬಿಟ್ಟು ಅರ್ಕಿಗೆ ವಲಸೆ ಹೋಗಿದ್ದಾರೆ. ಅವರ ಪತ್ನಿ ಕೂಡ ಎರಡು ಬಾರಿ ಲೋಕಸಭೆ ಚುನಾವಣೆಗೆ ಆಯ್ಕೆಯಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications