ಹಿಮಾಚಲ ಚುನಾವಣೆ: ಫಲಿತಾಂಶಕ್ಕೂ ಮುನ್ನ ಇವಿಎಂ ಕಳ್ಳತನ- ಬಿಜೆಪಿ ವಿರುದ್ಧ ಆರೋಪ
ಶಿಮ್ಲಾ ನವೆಂಬರ್ 28: 'ಇವಿಎಂಗಳನ್ನು ಟ್ಯಾಂಪರಿಂಗ್ ಮಾಡದೆ ಬಿಜೆಪಿ ಒಂದೇ ಒಂದು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ' ಎಂಬ ಸಂದೇಶದೊಂದಿಗೆ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಮುಗಿದಿದ್ದು ಫಲಿತಾಂಶ ಇನ್ನೇನು ಪ್ರಕಟವಾಗಬೇಕಿದೆ. ಅದಾಗಲೇ ಇವಿಎಂ ಕಳ್ಳತನದ ಆರೋಪಗಳು ಕೇಳಿ ಬಂದಿವೆ. ಹಿಮಾಚಲ ಪ್ರದೇಶದ ಹಲವು ಖಾಸಗಿ ವಾಹನಗಳಲ್ಲಿ ಅಕ್ರಮವಾಗಿ ಇವಿಎಂ ವಾರ್ಗಾವಣೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಬಗ್ಗೆ ಫೋಟೋವನ್ನು ಹಂಚಿಕೊಳ್ಳಲಾಗಿದೆ.
ಹಂಚಿಕೊಳ್ಳಲಾದ ಫೋಟೋದಲ್ಲಿ ವಾಹನದ HP03D2023 ನಂಬರ್ ಪ್ಲೇಟ್ ಹಾಗೂ ಇವಿಎಂ ಇರುವ ದೃಶ್ಯವಿದೆ. ಫೋಟೋದ ಕೆಳ ಭಾಗದಲ್ಲಿ 'ಇವಿಎಂಗಳನ್ನು ಅನ್ನು ಟ್ಯಾಂಪರಿಂಗ್ ಮಾಡದೆ ಬಿಜೆಪಿ ಒಂದೇ ಒಂದು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ' ಎಂದು ಬರೆಯಲಾಗಿದೆ. ನವೆಂಬರ್ 27ರ ಸಂಜೆ ಈ ಫೋಟೋವನ್ನು ಶೇರ್ ಮಾಡಲಾಗಿದೆ.

ರವಿಂದ್ರ ಕುಮಾರ್ ಎಂಬ ಹೆಸರಿನ ಟ್ವೀಟ್ ಖಾತೆಯಲ್ಲಿ ಫೋಟೋವೊಂದು ಹಂಚಿಕೊಂಡು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿರುವುದು ಕಾಣಬಹುದು.
Bjp can't win single election without Tampering Evms !😭 #29thNovBharatBandh #29thNovBharatBandh pic.twitter.com/DVuDrSBZVj
— Ravinder Kumar (@Ravindersoch) November 27, 2022
ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ (ಇವಿಎಂ) ಗಳ ಟ್ಯಾಂಪರಿಂಗ್ ವಿಚಾರ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಚುನಾವಣಾ ಆಯೋಗ ವಿವಿಪ್ಯಾಟ್ ಒಳಗೊಂಡ ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಗಳ ಬಳಕೆ ಆರಂಭಿಸಿದೆ. ಆದರೂ ಕೂಡ ಟ್ಯಾಂಪರಿಂಗ್ ಬಗ್ಗೆ ಹಲವೆಡೆ ಸುದ್ದಿಗಳು ಕೇಳಿ ಬರುತ್ತಿವೆ. ನವೆಂಬರ್ 12ರಂದು ಒಂದೇ ಹಂತದಲ್ಲಿ ಹಿಮಾಚಲ ಪ್ರದೇಶದಲ್ಲಿ ಮತದಾನ ನಡೆದಿದೆ. ಡಿಸೆಂಬರ್ 8ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications