Himachal Pradesh Election Result 2022; ಸೆರಾಜ್ ಕ್ಷೇತ್ರದಲ್ಲಿ 20,425 ಮತಗಳ ಅಂತರದಿಂದ ಜೈರಾಮ್ಗೆ ಗೆಲುವು
ಶಿಮ್ಲಾ, ಡಿಸೆಂಬರ್, 08: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 ಮತ ಎಣಿಕೆ ನಡೆದಿದ್ದು, ಸೆರಾಜ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಎಂ ಜಯರಾಮ್ ಠಾಕೂರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 20,425 ಮತಗಳ ಅಂತರದಿಂದ ಗೆದ್ದಿದ್ದು, ಗೆಲುವಿನ ಪತಾಕೆಯನ್ನು ಹಾರಿಸಿದ್ದಾರೆ.
Recommended Video

ಸ್ಪಲ್ಪ ಹೊತ್ತಿನ ಹಿಂದೆ ಸಿಎಂ ಜೈರಾಮ್ ಠಾಕೂರ್ ತಮ್ಮ ಕ್ಷೇತ್ರ ಸೇರಾಜ್ನಲ್ಲಿ 14,921 ಮತಗಳಿಂದ ಮುನ್ನಡೆ ಸಾಧಿಸಿದ್ದರು. ಇದೀಗ 20,425 ಮತಗಳ ಅಂತರದಿಂದ ಗೆದ್ದಿದ್ದು, ಪಕ್ಷದ ಕಾರ್ಯಕರ್ತರು ಸಂಭ್ರಾಮಾಚರಣೆಯನ್ನು ಮಾಡುತ್ತಿದ್ದಾರೆ. ಸೆರಾಜ್ ಕ್ಷೇತ್ರವು ಬಿಜೆಪಿಯ ಭದ್ರಕೋಟೆಯಾಗಿದ್ದು, ಜೈ ರಾಮ್ ಠಾಕೂರ್ 1998ರಿಂದ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಲೇ ಬಂದಿದ್ದಾರೆ. ಹಾಗೆಯೇ ಇದೀಗ ಮತ್ತೆ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಕ್ಷೇತ್ರವನ್ನು ಭದ್ರತೆಯಿಂದ ಕಾಪಾಡಿಕೊಂಡಿದ್ದಾರೆ.

ಜನರ ಸಮಸ್ಯೆಗೆ ಪರಿಹಾರ ಸಿಗುತ್ತಾ?
ಈಗಲಾದರೂ ಮುಂದಿನ ದಿನಗಳಲ್ಲಿ ಸೆರಾಜ್ ಕ್ಷೇತ್ರದ ಜನರಿಗೆ ರಸ್ತೆ ಸಂಪರ್ಕವನ್ನು ಕಲ್ಪಸಿಕೊಡುತ್ತಾರಾ ಅನ್ನುವುದನ್ನು ಕಾದುನೋಡಬೇಕಿದೆ. ಅಲ್ಲಿನ ಸ್ಥಳೀಯರು ರಸ್ತೆ ಸಂಪರ್ಕವಿಲ್ಲದೇ ದಿನನಿತ್ಯ ಪರದಾಡುವಂತೆ ಆಗಿದೆ. ಸೆರಾಜ್ ಕಣಿವೆಯಾದ್ಯಂತ ಹಲವಾರು ಮಾರ್ಗಗಳು ಕಲ್ಲುಗಳು ಮತ್ತು ಬಂಡೆಗಳಿಂದ ಆವೃತವಾಗಿದ್ದು, ವಾಹನ ಸಂಚಾರ ಕಷ್ಟಕರವಾಗಿದೆ ಎಂದು ಅಲ್ಲಿನ ಸ್ಥಳೀಯರು ಜೈರಾಮ್ ಠಾಕೂರ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಮಗೆ ಮೂಲಸೌಕರ್ಯಗಳನ್ನು ಕಡದೆ ಕಡೆಗಣಿಸಲಾಗಿದೆ ಎಂದು ಕೂಡ ಸ್ಥಳೀಯರು ಆರೋಪಿಸುತ್ತಲೇ ಬಂದಿದ್ದಾರೆ. ಇದೀಗ ಭಾರಿ ಮತಗಳ ಅಂತರದಿಂದ ಮತ್ತೆ ಗೆದ್ದಿದ್ದು, ಈಗಾಲಾದರೂ ತಮ್ನ ಕ್ಷೇತ್ರ ಜನರ ಕಷ್ಟವನ್ನು ಆಲಿಸುತ್ತಾರಾ? ಅನ್ನುವುದೇ ಯಕ್ಷ ಪ್ರಶ್ನೆಯಾಗಿದೆ.

ಹಿಮಾಚಲ ಪ್ರದೇಶದ 68 ಮತ ಎಣಿಕೆ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 68 ಸ್ಥಾನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸ್ಪರ್ಧಿಸಿದ್ದರೆ. ಆಮ್ ಆದ್ಮಿ ಪಕ್ಷ 67 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಹಿಮಾಚಲ ಪ್ರದೇಶದಲ್ಲಿ ಫಲಿತಾಂಶದ ವಿವರ ಕುತೂಹಲ ಕೆರಳಿಸುತ್ತಿದ್ದು, ಸದ್ಯದ ಪ್ರಕಾರ ಬೆಳಗ್ಗೆ 11:15ರ ಸುಮಾರಿಗೆ ಕಾಂಗ್ರೆಸ್ 34 ಮತ್ತು ಬಿಜೆಪಿ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹೀಗೆ ಬಿಜೆಪಿ, ಕಾಂಗ್ರೆಸ್ ನಡುವೆ ಹಾವು ಏಣಿಯ ಆಟ ಮುಂದುವರೆದಿದೆ. ಈಗಾಗಲೇ ಸುಂದರ್ ನಗರ, ಸೆರಾಜ್ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ವಿಜಯ ಪತಾಕೆಯನ್ನು ಹಾರಿಸಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications