ಹಿಮಾಚಲದಲ್ಲಿ ಬಿಜೆಪಿ ಗೆದ್ದರೂ ಪ್ರೇಮ್ ಕುಮಾರ್ ಅವಧಿ ಪೂರೈಸಲ್ಲ!
ಬೆಂಗಳೂರು, ನವೆಂಬರ್ 21: ಹಿಮಾಚಲ ಪ್ರದೇಶದ 68 ಸ್ಥಾನಗಳಿಗೆ ನವೆಂಬರ್ 09ರಂದು ಒಂದು ಹಂತದ ಮತದಾನ ನಡೆದಿದ್ದು, , ಡಿಸೆಂಬರ್ 18ಕ್ಕೆ ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಜಯಭೇರಿ ಬಾರಿಸಿದರೂ ಸಿಎಂ ಅಭ್ಯರ್ಥಿ ಪೂರ್ಣಾವಧಿ ಪೂರೈಸಲು ಸಾಧ್ಯವಾಗುವುದಿಲ್ಲ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ್ ಧುಮಾಲ್ ಅವರು ಗೆಲುವು ಸಾಧಿಸಿ ಸಿಎಂ ಪಟ್ಟಕ್ಕೇರಿದರೂ ಅವರ ಅವಧಿ 2019ರ ಲೋಕಸಭೆ ಚುನಾವಣೆ ಹೊತ್ತಿಗೆ ಮುಗಿಯಲಿದೆ. ಇದಕ್ಕೆ ಭಾರತೀಯ ಜನತಾಪಕ್ಷದಲ್ಲಿರುವ ಅಲಿಖಿತ ನಿಯಮವೇ ಕಾರಣ.

ಒಂದು ವೇಳೆ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ(ಇತಿಹಾಸ ಅವಲೋಕಿಸಿದರೆ ಇಲ್ಲಿ ಒಮ್ಮೆ ಕೂಡಾ ಸತತವಾಗಿ ಯಾವುದೇ ಪಾರ್ಟಿ ಅಧಿಕಾರ ಉಳಿಸಿಕೊಂಡಿಲ್ಲ) 83 ವರ್ಷ ವಯಸ್ಸಿನ ವೀರಭದ್ರ ಸಿಂಗ್ ಅವರು ಮತ್ತೊಂದು ಅವಧಿಗೆ ಸಿಎಂ ಆಗಲಿದ್ದಾರೆ.
ಸದ್ಯದ ಸಮೀಕ್ಷೆಗಳ ಪ್ರಕಾರ ಬಿಜೆಪಿ 43 ರಿಂದ 47 ಸೀಟು ಗೆದ್ದು ಅಧಿಕಾರ ಸ್ಥಾಪಿಸಲಿದೆ. 35 ಸ್ಥಾನಗಳ ಮ್ಯಾಜಿಕ್ ಸಂಖ್ಯೆ ದಾಟುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ 21 ರಿಂದ 25 ಸ್ಥಾನ ಗಳಿಸಬಹುದು.
2012ರಲ್ಲಿ ಕಾಂಗ್ರೆಸ್ 36 ಸ್ಥಾನ ಹಾಗೂ ಬಿಜೆಪಿ 26 ಸ್ಥಾನಗಳಿಸಿತ್ತು. ದಾಖಲೆಯ 6ನೇ ಬಾರಿಗೆ ವೀರಭದ್ರ ಸಿಂಗ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಈಗಿನ ಸಂದರ್ಭದಲ್ಲಿ ಸದ್ಯ 73 ವರ್ಷ ವಯಸ್ಸಿನ ಪ್ರೇಮ್ ಕುಮಾರ್ ಅವರು ಅಧಿಕಾರಕ್ಕೆ ಬಂದರೆ 2019ರಲ್ಲಿ 75 ವರ್ಷಕ್ಕೆ ಕಾಲಿರಿಸುತ್ತಾರೆ. ಇದರ ಬೆನ್ನಲ್ಲೆ ಸಿಎಂ ಕುರ್ಚಿಯಿಂದ ಕೆಳಗಿಳಿಯಲೆ ಬೇಕಾಗುತ್ತದೆ. ಕಾರಣ, 75 ವರ್ಷಕ್ಕೂ ಮೇಲ್ಪಟ್ಟವರು ಉನ್ನತ ಹುದ್ದೆಯಲ್ಲಿರುವುದು ಭಾಜಪದಲ್ಲಿ ನಿಷಿದ್ಧ.
2014ರ ಲೋಕಸಭೆ ಚುನಾವಣೆ ವೇಳೆ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಯಶ್ವಂತ್ ಸಿನ್ಹಾ ಹಾಗೂ ಶಾಂತಕುಮಾರ್ ಅವರಿಗೆ ಬಂದ ಸ್ಥಿತಿ ಪ್ರೇಮ್ ಕುಮಾರ್ ಅವರಿಗೂ ಬರಲಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications