ಹಿಮಾಚಲ ಪ್ರದೇಶ ಚುನಾವಣೆ: ಗದ್ದುಗೆಯ ಅಧಿಪತಿ ಯಾರು..?!
ಬೆಟ್ಟಗಳ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಇಂದು(ನವೆಂಬರ್ 9) ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಲವು ಕಾರಣಗಳಿಂದ ಮಹತ್ವದ್ದೆನಿಸಿದೆ. ಗುಜರಾತ್ ಚುನಾವಣೆಗೂ ಮುನ್ನ ಜನಾಭಿಪ್ರಾಯದ ಅಭಿವ್ಯಕ್ತಿಗೆ ಈ ಚುನಾವಣೆ ಸಹಕಾರಿಯಾಗಲಿರುವ ಹಿನ್ನೆಲೆಯಲ್ಲಿ,
ಶಿಮ್ಲಾ, ನವೆಂಬರ್ 09: ಬೆಟ್ಟಗಳ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಇಂದು(ನವೆಂಬರ್ 9) ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಲವು ಕಾರಣಗಳಿಂದ ಮಹತ್ವದ್ದೆನಿಸಿದೆ. ಗುಜರಾತ್ ಚುನಾವಣೆಗೂ ಮುನ್ನ ಜನಾಭಿಪ್ರಾಯದ ಅಭಿವ್ಯಕ್ತಿಗೆ ಈ ಚುನಾವಣೆ ಸಹಕಾರಿಯಾಗಲಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿಯ ಘಟಾನುಘಟಿ ನಾಯಕರೂ ಖುದ್ದು ರಾಜ್ಯಕ್ಕೆ ಹಾಜರಾಗಿ ಪ್ರಚಾರ ನಡೆಸಿದ್ದಾರೆ.
ಡಿಸೆಂಬರ್ 18, ಸೋಮವಾರದಂದು ಹೊರಬೀಳಲಿರುವ ಫಲಿತಾಂಶದಲ್ಲಿ ಹಿಮಾಚಲ ಪ್ರದೇಶದ ಗದ್ದುಗೆ ಏರುವವರು ಯಾರು ಎಂಬುದು ನಿರ್ಧಾರವಾಗಿದೆ.
ಮೊದಲು ನಾವು 50 ಸೀಟು ಗೆಲ್ಲುವ ಬಗ್ಗೆ ವಿಶ್ವಾಸವಿತ್ತು, ಆದರೆ ಈಗ 60 ಕ್ಕೂ ಹೆಚ್ಚು ಸೀಟು ಪಡೆಯುತ್ತೇವೆ ಎಂಬ ನಿರೀಕ್ಷೆಯಿದೆ ಎಂದು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ ಕುಮಾರ್ ಧುಮಾಲ್ ವಿಶ್ವಾಸವನ್ನೇನೋ ವ್ಯಕ್ತಪಡಿಸಿದ್ದಾರೆ. ಆದರೆ ಇದೇ ಸಮಯದಲ್ಲಿ ಹಾಲಿ ಮುಖ್ಯಮಂತ್ರಿ ಕಾಂಗ್ರೆಸ್ ನ ವೀರಭದ್ರ ಸಿಂಗ್, ತಾವು ಬಹುಮತ ಪಡೆದು ಮತ್ತೆ ಅಧಿಕಾರಕ್ಕೇರುವುದಾಗಿಯೂ, ತಾವೇ ಮತ್ತೊಮ್ಮೆ ಅವಧಿಗೆ ಮುಖ್ಯಮಂತ್ರಿಯಾಗುವುದಾಯೂಗಿ ಹೇಳಿಕೊಂಡಿದ್ದಾರೆ.
ಯಾರ ಮಾತು ಸತ್ಯ ಎಂಬುದು ಗೊತ್ತಾಗುವುದಕ್ಕೆ ಡಿಸೆಂಬರ್ 18 ರವರೆಗೆ ಕಾಯಬೇಕಿದೆ!

ಕಾಂಗ್ರೆಸ್ ಗೆ ಮುಳುವಾಗುತ್ತದೆಯೇ ಆರೋಪಗಳು?
ಕಾಂಗ್ರೆಸ್ ಮುಖ್ಯಸ್ಥ, ಹಾಲಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ವಿರುದ್ಧ ಸಾಕಷ್ಟು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಚುನಾವಣೆ ಕಾಂಗ್ರೆಸ್ ಗೆ ಮುಳುವಾಗಬಹುದು ಎಂದೂ ಅಂದಾಜಿಸಲಾಗಿದೆ. ಈ ಹಗರಣದ ಆರೋಪಗಳ ಲಾಭ ಪಡೆದ ಬಿಜೆಪಿ, ಪ್ರಚಾರ ಸಮಯದಲ್ಲೂ ಇವುಗಳನ್ನು ಸಮರ್ಥವಾಗಿ ಬಳಸಿಕೊಂಡಿದ್ದು ಬಿಜೆಪಿಗೆ ಲಾಭವಾಗಬಹುದು.

ಬಿಜೆಪಿ ಗೆಲ್ಲುತ್ತಾ?
ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಪಿ.ಕೆ.ಧುಮಾಲ್ 60 ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರೂ, ಅಪನಗದೀಕರಣ ಮತ್ತು ಜಿಎಸ್ ಟಿಯ ಋಣಾತ್ಮಕ ಪರಿಣಾಮಗಳನ್ನು ಜನರಿಗೆ ಮನಮುಟ್ಟುವಂತೆ ತಿಳಿಸುವಲ್ಲಿ ಯಶಸ್ವಿಯಾದ ಕಾಂಗ್ರೆಸ್ ಅವುಗಳ ಲಾಭ ಪಡೆದರೆ ಅಚ್ಚರಿಯಿಲ್ಲ.

ಮೋದಿ ಅಲೆ ಕೆಲಸಮಾಡುತ್ತಾ..?!
ಹಿಮಾಚಲ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಹಲವು ಬಾರಿ ಪ್ರಚಾರಕ್ಕಾಗಿ ಆಗಮಿಸಿದ್ದ ಪ್ರಧಾನಿ ಮೋದಿ, ಬಿಜೆಪಿಯ ಅಭಿವೃದ್ಧಿ ರಾಜಕಾರಣದ ಕುರಿತು ಮಾತನಾಡಿದ್ದು ಜನರ ಮನಸ್ಸನ್ನು ತಟ್ಟಿದೆಯಾ? ಬೇರೆ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಈ ರಾಜ್ಯದಲ್ಲೂ ಮೋದಿ ಅಲೆಯನ್ನು ಸ್ಥಾಪಿಸುತ್ತಾ ಎಂಬುದು ಫಲಿತಾಂಶಸದ ನಂತರವಷ್ಟೇ ತಿಳಿಯುತ್ತದೆ.

ರಾಹುಲ್ ಪ್ರಚಾರ ಫಲನೀಡೀತಾ?
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಆಸ್ಥೆ ವಹಿಸಿ, ಖುದ್ದು ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದರೂ, ಗುಜರಾತಿನ ಮೇಲೇ ಹೆಚ್ಚು ಗಮನ ವಹಿಸಿರುವುದರಿಂದ ಹಿಮಾಚಲ ಪ್ರದೇಶಕ್ಕೆ ಪ್ರಚಾರಕ್ಕಾಗಿ ಅವರು ಬಂದಿದ್ದು ಮೂರುಬಾರಿ ಮಾತ್ರ! ಇದು ಕಾಂಗ್ರೆಸ್ ಗೆ ವರದಾನವಾಗುತ್ತಾ..?!

ಮ್ಯಾಜಿಕ್ ನಂಬರ್ ಎಷ್ಟು?
68 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚನೆಗೆ ಅಗತ್ಯವಿರುವ ಸರಳ ಬಹುಮತ 35. 2012 ರಲ್ಲಿ ಕಾಂಗ್ರೆಸ್ ಸರ್ಕಾರ 36 ಸೀಟುಗಳನ್ನು ಗೆಲ್ಲುವಲ್ಲಿ ಸಫಲವಾಗಿತ್ತು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications